ಮಂಡ್ಯ

ಮಂಡ್ಯ ಸಮ್ಮೇಳನ | ಸಮ್ಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ ; ಸಚಿವ ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯ ನಾನಾ ಭಾಗಗಳಿಂದ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ಹೇಳಿದರು.

ಸ್ಯಾಂಜೋ ಆಸ್ಪತ್ರೆ ಹಿಂಭಾಗದಲ್ಲಿ ನಿರ್ಮಿಸಿರುವ‌ ವೇದಿಕೆಗಳ ನಿರ್ಮಾಣ ಕಾರ್ಯದ ಸಿದ್ಧತೆ ಪರಿಶೀಲನೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರಿಗೆ ಸಾಕಷ್ಟು ಸಂಖ್ಯೆಯಲ್ಲಿ ಕೆಎಸ್ ಆರ್ ಟಿಸಿ ವತಿಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನದ ಮೂರು ದಿನ 7 ತಾಲೂಕು ಕೇಂದ್ರಗಳಿಂದ ಸಮ್ಮೇಳನ ನಡೆಯುವ ಸ್ಥಳಕ್ಕೆ 15 ವಿಶೇಷ ವಾಹನಗಳನ್ನು ಒಳಗೊಂಡಂತೆ 105 ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಮೈಸೂರು ಮತ್ತು ಬೆಂಗಳೂರಿನಿಂದ ಪ್ರತಿ 30 ನಿಮಿಷಕ್ಕೆ ಒಂದರಂತೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಮಂಡ್ಯ ನಗರದ ವಿವಿಧ ಸ್ಥಳಗಳಿಂದ ಸಮ್ಮೇಳನದ ಸ್ಥಳಕ್ಕೆ ಜನರನ್ನು ಕರೆತರಲು 15 ವಾಹನಗಳ ಸಾರಿಗೆ ಸೌಲಭ್ಯವನ್ನು ಉಚಿತವಾಗಿ ಕಲ್ಪಿಸಲಾಗಿದೆ. ಮೊದಲನೆಯದಾಗಿ ಮಂಡ್ಯ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣ, ನಂದಾ ಸರ್ಕಲ್, ಫ್ಯಾಕ್ಟರಿ ಸರ್ಕಲ್, ಸ್ವರ್ಣಸಂದ್ರ, ಮಾಂಡವ್ಯ ಕಾಲೇಜ್, ಉಮ್ಮಡಹಳ್ಳಿ ಗೇಟ್, ಹೊಸಬೂದನೂರು ಮಾರ್ಗವಾಗಿ ಸಮ್ಮೇಳನದ ಸ್ಥಳ ತಲುಪಲಿದೆ.

ಎರಡನೆಯದಾಗಿ ಮಂಡ್ಯ ಬಸ್ ನಿಲ್ದಾಣದಿಂದ ಕೋರ್ಟ್ ನಿಲ್ದಾಣ- ವಿಶ್ವವಿದ್ಯಾಲಯ- ಕಲ್ಲಹಳ್ಳಿ- ವಿ.ವಿ.ನಗರ-ಶನೇಶ್ವರ ದೇವಸ್ಥಾನ-ಚಾಮುಂಡೇಶ್ವರಿ ದೇವಸ್ಥಾನ-ಕನ್ನಿಕಾ ಪರಮೇಶ್ವರಿ ದೇವಸ್ಥಾನ-ಕರ್ನಾಟಕ ಬಾರ್ ಸರ್ಕಲ್-ಹೊಸಹಳ್ಳಿ ಸರ್ಕಲ್-ಬೆ.ರಾಮಣ್ಣ ಸರ್ಕಲ್-ಎಂವಿಜಿ ಬೇಕರಿ-ನಂದಾ ಸರ್ಕಲ್-ಫ್ಯಾಕ್ಟರಿ ಸರ್ಕಲ್-ಸ್ವರ್ಣಸಂದ್ರ-ಮಾಂಡವ್ಯ ಕಾಲೇಜ್-ಉಮ್ಮಡಹಳ್ಳಿ ಗೇಟ್-ಹೊಸಬೂದನೂರು ಮಾರ್ಗವಾಗಿ ಸಮ್ಮೇಳನದ ಸ್ಥಳ ತಲುಪಲಿದೆ.

ಮೂರನೇಯದಾಗಿ ಹುಣಸೇಮರ-ಕಾಳಿಕಾಂಬ ದೇವಸ್ಥಾನ-ನಂದಾ ಸರ್ಕಲ್-ಫ್ಯಾಕ್ಟರಿ ಸರ್ಕಲ್-ಗುತ್ತಲು ಕಾಲೋನಿ-ಜಯಲಕ್ಷ್ಮಿ ಟಾಕೀಸ್-ಅರಕೇಶ್ವರ ದೇವಸ್ಥಾನ-ಉಮ್ಮಡಹಳ್ಳಿ ಗೇಟ್-ಹೊಸಬೂದನೂರು ಮಾರ್ಗವಾಗಿ ಸಮ್ಮೇಳನದ ಸ್ಥಳ ತಲುಪಲಿದೆ.

ನಾಲ್ಕನೇಯದಾಗಿ ಸತ್ವ ಪಾರ್ಕಿಂಗ್ ಸ್ಥಳದಿಂದ ಉಮ್ಮಡಹಳ್ಳಿ ಗೇಟ್-ಹೊಸಬೂದನೂರು ಮಾರ್ಗವಾಗಿ ಸಮ್ಮೇಳನದ ಸ್ಥಳ ತಲುಪಲಿದೆ. ಮತ್ತು ಅದೇ ಮಾರ್ಗದಲ್ಲಿ ವಾಪಸ್ ಆಗಲಿದೆ ಎಂದು ಸಚಿವರು ವಿವರಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

3 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

3 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

4 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

4 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

4 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

4 hours ago