ಮಂಡ್ಯ

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ನಗರದ ಸಂಜಯ ವೃತ್ತದಲ್ಲಿ ಚಾಲನೆ ನೀಡಿದರು.

ಶಾಸಕರುಗಳಾದ ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಮೂಢಾ ಅಧ್ಯಕ್ಷ ನಹೀಮ್, ಜಿಲ್ಲಾಧ್ಯಕ್ಷ ಚಿದಂಬರಂ, ಮೈಶುಗರ್ ಕಂಪನಿ ಅಧ್ಯಕ್ಷ ಸಿ.ಡಿ.ಗಂಗಾಧರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ದಸರಾದ ವಿಶೇಷ ದೀಪಾಲಂಕಾರದ ಮಾದರಿಯಲ್ಲಿ ಚೆಸ್ಕಾಂ ವತಿಯಿಂದ ನಗರದ ರಸ್ತೆಗಳಿಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು ಸಮ್ಮೇಳನ ನಡೆಯುವ ಮೂರು ದಿನವೂ ದೀಪಾಲಂಕಾರ ಇರಲಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ ಕಲಾಕೃತಿ, ಜ್ಞಾನಪೀಠ ಪುರಸ್ಕೃತರ ಭಾವಚಿತ್ರಗಳು ದೀಪಾಲಂಕಾರದ ಪ್ರಮುಖ ಆಕರ್ಷಣೆಯಾಗಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

12 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago