ಮಂಡ್ಯ

ಮಂಡ್ಯ| ಜು.26 ಕ್ಕೆ ರಾಜ್ಯಮಟ್ಟದ ಫಿಜಿಷಿಯನ್‌ ವೈದ್ಯರ ಸಮ್ಮೇಳನ

ಮಂಡ್ಯ: ಅಸೋಸಿಯೇಷನ್ ಆಫ್ ಫಿಜಿಷಿಯನ್ ಆಫ್ ಇಂಡಿಯಾ ಮಂಡ್ಯ ಶಾಖೆ ವತಿಯಿಂದ 41ನೇ ರಾಜ್ಯಮಟ್ಟದ ಫಿಜಿಷಿಯನ್ ವೈದ್ಯರ ಸಮ್ಮೇಳನವನ್ನು ಆದಿಚುಂಚನಗಿರಿ ವಿಶ್ವವಿದ್ಯಾನಿಲಯ ಹಾಗೂ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದಲ್ಲಿ ಜುಲೈ 26 ರಿಂದ ಜುಲೈ 28 ರ ವರೆಗೆ ಮಂಡ್ಯದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಅಧ್ಯಕ್ಷ ಡಾ. ಶಿವಕುಮಾರ್ ತಿಳಿಸಿದರು.

ಬುಧುವಾರ(ಜು.24) ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ,ಸಮ್ಮೇಳನಕ್ಕೆ ಸುಮಾರು 1,200ಕ್ಕೂ ಹೆಚ್ಚು ಮಂದಿ ವೈದ್ಯರು ಮತ್ತು ವಿದ್ಯಾರ್ಥಿಗಳು ಹೆಸರನ್ನು ನೋಂದಾಯಿಸಿಕೊಂಡಿದ್ದು ಈ ಮೂರು ದಿನಗಳ ಕಾಲ ವಿಶೇಷ ಉಪನ್ಯಾಸ, ಚರ್ಚೆ, ಮೆಡಿಕಲ್ ಕ್ವಿಜ್ ಹಾಗೂ ಕಾರ್ಯಗಾರಗಳನ್ನು ನಡೆಸಲಾಗುತ್ತದೆ ಎಂದರು.

ಜುಲೈ 26ರಂದು ಸಂಜೆ 6ಗಂಟೆಗೆ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳ ಸಮ್ಮುಖದಲ್ಲಿ ರಾಷ್ಟ್ರೀಯ ಏಪಿಐ ಸಂಘದ ಅಧ್ಯಕ್ಷರಾದ ಡಾ. ಜ್ಯೋತಿರ್ಮೈ ಪಾಲ್ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದು ,ಆದಿಚುಂಚನಗಿರಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ ಎ ಶೇಖರ್, ಎಪಿಐ ಕರ್ನಾಟಕ ಶಾಖೆಯ ಅಧ್ಯಕ್ಷ ಡಾ. ಬಿವಿ ಮುರಳಿ ಮೋದನ್, ಡಾ. ಸುರೇಶ್ ವಿ ಸಾಗರ್ ,ಕೆ ವಿಶ್ವನಾಥ್ ,ಮೋಹನ್ ಕುಮಾರ್, ಬೆಳ್ಳೂರಿನ ಎಮ್ಸ್ ನಿರ್ದೇಶಕ ಡಾ. ಎಂಜಿ ಶಿವರಾಮ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಡಾ. ಪ್ರಸನ್ನ ಕುಮಾರ್ ,ಡಾ. ರೇಖಾ, ಡಾ. ಮೋಹನ್ ಕುಮಾರ್ ಸೇರಿದಂತೆ ಇತರರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

9 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

13 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

13 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

13 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

14 hours ago