ಮಂಡ್ಯ: ಅಸೋಸಿಯೇಷನ್ ಆಫ್ ಫಿಜಿಷಿಯನ್ ಆಫ್ ಇಂಡಿಯಾ ಮಂಡ್ಯ ಶಾಖೆ ವತಿಯಿಂದ 41ನೇ ರಾಜ್ಯಮಟ್ಟದ ಫಿಜಿಷಿಯನ್ ವೈದ್ಯರ ಸಮ್ಮೇಳನವನ್ನು ಆದಿಚುಂಚನಗಿರಿ ವಿಶ್ವವಿದ್ಯಾನಿಲಯ ಹಾಗೂ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದಲ್ಲಿ ಜುಲೈ 26 ರಿಂದ ಜುಲೈ 28 ರ ವರೆಗೆ ಮಂಡ್ಯದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಅಧ್ಯಕ್ಷ ಡಾ. ಶಿವಕುಮಾರ್ ತಿಳಿಸಿದರು.
ಬುಧುವಾರ(ಜು.24) ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ,ಸಮ್ಮೇಳನಕ್ಕೆ ಸುಮಾರು 1,200ಕ್ಕೂ ಹೆಚ್ಚು ಮಂದಿ ವೈದ್ಯರು ಮತ್ತು ವಿದ್ಯಾರ್ಥಿಗಳು ಹೆಸರನ್ನು ನೋಂದಾಯಿಸಿಕೊಂಡಿದ್ದು ಈ ಮೂರು ದಿನಗಳ ಕಾಲ ವಿಶೇಷ ಉಪನ್ಯಾಸ, ಚರ್ಚೆ, ಮೆಡಿಕಲ್ ಕ್ವಿಜ್ ಹಾಗೂ ಕಾರ್ಯಗಾರಗಳನ್ನು ನಡೆಸಲಾಗುತ್ತದೆ ಎಂದರು.
ಜುಲೈ 26ರಂದು ಸಂಜೆ 6ಗಂಟೆಗೆ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳ ಸಮ್ಮುಖದಲ್ಲಿ ರಾಷ್ಟ್ರೀಯ ಏಪಿಐ ಸಂಘದ ಅಧ್ಯಕ್ಷರಾದ ಡಾ. ಜ್ಯೋತಿರ್ಮೈ ಪಾಲ್ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದು ,ಆದಿಚುಂಚನಗಿರಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ ಎ ಶೇಖರ್, ಎಪಿಐ ಕರ್ನಾಟಕ ಶಾಖೆಯ ಅಧ್ಯಕ್ಷ ಡಾ. ಬಿವಿ ಮುರಳಿ ಮೋದನ್, ಡಾ. ಸುರೇಶ್ ವಿ ಸಾಗರ್ ,ಕೆ ವಿಶ್ವನಾಥ್ ,ಮೋಹನ್ ಕುಮಾರ್, ಬೆಳ್ಳೂರಿನ ಎಮ್ಸ್ ನಿರ್ದೇಶಕ ಡಾ. ಎಂಜಿ ಶಿವರಾಮ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಡಾ. ಪ್ರಸನ್ನ ಕುಮಾರ್ ,ಡಾ. ರೇಖಾ, ಡಾ. ಮೋಹನ್ ಕುಮಾರ್ ಸೇರಿದಂತೆ ಇತರರಿದ್ದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…