ಮಂಡ್ಯ: ಅಸೋಸಿಯೇಷನ್ ಆಫ್ ಫಿಜಿಷಿಯನ್ ಆಫ್ ಇಂಡಿಯಾ ಮಂಡ್ಯ ಶಾಖೆ ವತಿಯಿಂದ 41ನೇ ರಾಜ್ಯಮಟ್ಟದ ಫಿಜಿಷಿಯನ್ ವೈದ್ಯರ ಸಮ್ಮೇಳನವನ್ನು ಆದಿಚುಂಚನಗಿರಿ ವಿಶ್ವವಿದ್ಯಾನಿಲಯ ಹಾಗೂ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದಲ್ಲಿ ಜುಲೈ 26 ರಿಂದ ಜುಲೈ 28 ರ ವರೆಗೆ ಮಂಡ್ಯದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಅಧ್ಯಕ್ಷ ಡಾ. ಶಿವಕುಮಾರ್ ತಿಳಿಸಿದರು.
ಬುಧುವಾರ(ಜು.24) ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ,ಸಮ್ಮೇಳನಕ್ಕೆ ಸುಮಾರು 1,200ಕ್ಕೂ ಹೆಚ್ಚು ಮಂದಿ ವೈದ್ಯರು ಮತ್ತು ವಿದ್ಯಾರ್ಥಿಗಳು ಹೆಸರನ್ನು ನೋಂದಾಯಿಸಿಕೊಂಡಿದ್ದು ಈ ಮೂರು ದಿನಗಳ ಕಾಲ ವಿಶೇಷ ಉಪನ್ಯಾಸ, ಚರ್ಚೆ, ಮೆಡಿಕಲ್ ಕ್ವಿಜ್ ಹಾಗೂ ಕಾರ್ಯಗಾರಗಳನ್ನು ನಡೆಸಲಾಗುತ್ತದೆ ಎಂದರು.
ಜುಲೈ 26ರಂದು ಸಂಜೆ 6ಗಂಟೆಗೆ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳ ಸಮ್ಮುಖದಲ್ಲಿ ರಾಷ್ಟ್ರೀಯ ಏಪಿಐ ಸಂಘದ ಅಧ್ಯಕ್ಷರಾದ ಡಾ. ಜ್ಯೋತಿರ್ಮೈ ಪಾಲ್ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದು ,ಆದಿಚುಂಚನಗಿರಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ ಎ ಶೇಖರ್, ಎಪಿಐ ಕರ್ನಾಟಕ ಶಾಖೆಯ ಅಧ್ಯಕ್ಷ ಡಾ. ಬಿವಿ ಮುರಳಿ ಮೋದನ್, ಡಾ. ಸುರೇಶ್ ವಿ ಸಾಗರ್ ,ಕೆ ವಿಶ್ವನಾಥ್ ,ಮೋಹನ್ ಕುಮಾರ್, ಬೆಳ್ಳೂರಿನ ಎಮ್ಸ್ ನಿರ್ದೇಶಕ ಡಾ. ಎಂಜಿ ಶಿವರಾಮ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಡಾ. ಪ್ರಸನ್ನ ಕುಮಾರ್ ,ಡಾ. ರೇಖಾ, ಡಾ. ಮೋಹನ್ ಕುಮಾರ್ ಸೇರಿದಂತೆ ಇತರರಿದ್ದರು.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…