ಮಂಡ್ಯ: ಅಸೋಸಿಯೇಷನ್ ಆಫ್ ಫಿಜಿಷಿಯನ್ ಆಫ್ ಇಂಡಿಯಾ ಮಂಡ್ಯ ಶಾಖೆ ವತಿಯಿಂದ 41ನೇ ರಾಜ್ಯಮಟ್ಟದ ಫಿಜಿಷಿಯನ್ ವೈದ್ಯರ ಸಮ್ಮೇಳನವನ್ನು ಆದಿಚುಂಚನಗಿರಿ ವಿಶ್ವವಿದ್ಯಾನಿಲಯ ಹಾಗೂ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದಲ್ಲಿ ಜುಲೈ 26 ರಿಂದ ಜುಲೈ 28 ರ ವರೆಗೆ ಮಂಡ್ಯದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಅಧ್ಯಕ್ಷ ಡಾ. ಶಿವಕುಮಾರ್ ತಿಳಿಸಿದರು.
ಬುಧುವಾರ(ಜು.24) ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ,ಸಮ್ಮೇಳನಕ್ಕೆ ಸುಮಾರು 1,200ಕ್ಕೂ ಹೆಚ್ಚು ಮಂದಿ ವೈದ್ಯರು ಮತ್ತು ವಿದ್ಯಾರ್ಥಿಗಳು ಹೆಸರನ್ನು ನೋಂದಾಯಿಸಿಕೊಂಡಿದ್ದು ಈ ಮೂರು ದಿನಗಳ ಕಾಲ ವಿಶೇಷ ಉಪನ್ಯಾಸ, ಚರ್ಚೆ, ಮೆಡಿಕಲ್ ಕ್ವಿಜ್ ಹಾಗೂ ಕಾರ್ಯಗಾರಗಳನ್ನು ನಡೆಸಲಾಗುತ್ತದೆ ಎಂದರು.
ಜುಲೈ 26ರಂದು ಸಂಜೆ 6ಗಂಟೆಗೆ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳ ಸಮ್ಮುಖದಲ್ಲಿ ರಾಷ್ಟ್ರೀಯ ಏಪಿಐ ಸಂಘದ ಅಧ್ಯಕ್ಷರಾದ ಡಾ. ಜ್ಯೋತಿರ್ಮೈ ಪಾಲ್ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದು ,ಆದಿಚುಂಚನಗಿರಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ ಎ ಶೇಖರ್, ಎಪಿಐ ಕರ್ನಾಟಕ ಶಾಖೆಯ ಅಧ್ಯಕ್ಷ ಡಾ. ಬಿವಿ ಮುರಳಿ ಮೋದನ್, ಡಾ. ಸುರೇಶ್ ವಿ ಸಾಗರ್ ,ಕೆ ವಿಶ್ವನಾಥ್ ,ಮೋಹನ್ ಕುಮಾರ್, ಬೆಳ್ಳೂರಿನ ಎಮ್ಸ್ ನಿರ್ದೇಶಕ ಡಾ. ಎಂಜಿ ಶಿವರಾಮ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಡಾ. ಪ್ರಸನ್ನ ಕುಮಾರ್ ,ಡಾ. ರೇಖಾ, ಡಾ. ಮೋಹನ್ ಕುಮಾರ್ ಸೇರಿದಂತೆ ಇತರರಿದ್ದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…