ಮಂಡ್ಯ; ಜಿಲ್ಲೆಯಲ್ಲಿ ನೆರವೇರಿದ ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿ ವರ್ಗ, ಸಾಹಿತ್ಯಾಸಕ್ತರು ಹಾಗೂ ಜಿಲ್ಲೆ ಮತ್ತು ರಾಜ್ಯದ ಎಲ್ಲಾ ಸಾರ್ವಜನರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜೀವ್ಗಾಂಧಿ ಆಟೋ ಟ್ಯಾಕ್ಸಿ ಚಾಲಕರ ವೇದಿಕೆಯ ಅಧ್ಯಕ್ಷ ಕೃಷ್ಣ.ಟಿ. ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಹಿತ್ಯ ಸ್ಮಮೇಳನದ ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ವೇದಿಕೆಯ ವತಿಯಿಂದ ೮೭ ಆಟೋಗಳನ್ನು ಹೂವುಗಳಿಂದ ಅಲಂಕರಿಸಿ, ೮೭ ಸಮ್ಮೇಳನಾಧ್ಯಕ್ಷರ ಭಾವಚಿತ್ರಗಳೊಂದಿಗೆ ಭಾಗವಹಿಸುವ ಮೂಲಕ ಸಮ್ಮೇಳನದ ಯಶಸ್ಸಿಗೆ ಬೆಂಬಲ ವ್ಯಕ್ತಪಡಿಸಿದ್ದೆವು ಎಂದರು.
ಜಿಲ್ಲೆಯಲ್ಲಿ ಇಂತಹ ಬೃಹತ್ ಕಾರ್ಯಕ್ರಮಗಳು ಹೆಚ್ಚು ಜರುಗಬೇಕು. ಇದರಿಂದ ಜಿಲ್ಲೆಯ ಹಿರಿಮೆ ಹೆಚ್ಚಲಿದ್ದು, ಅಂತವುಗಳ ಆಚರಣೆಗೆ ಆಟೋ ಚಾಲಕರ ಸಂಘವು ಸದಾಸಿದ್ಧವಿಲಿದೆ. ಅಂತೆಯೇ ಜಿಲ್ಲೆಗೆ ಕೈಗಾರಿಕೆಗಳು ಮತ್ತು ಐಟಿ-ಬಿಟಿ ವಲಯಗಳನ್ನು ತರುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳು ಶ್ರಮಿಸುವಂತಾಗಲಿ ಎಂದು ಆಶಿಸಿದರು.
ಇಂತಹ ಸಮ್ಮೇಳನದಿಂದ ಆಟೋ ಚಾಲಕರ ದುಡಿಮೆಗೂ ಸಹಕಾರವಾಗಲಿದೆ. ಆಟೋ ಚಾಲಕರು ಪ್ರಯಾಣ ಬಯಸುವವರ ನೆರವಿಗೆ ಸದಾಸಿದ್ದವಿದ್ದೇವೆ. ಇದೀಗ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿಕೊಟ್ಟ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಪಿ.ರವಿಕುಮಾರ್ಗೌಡ, ವಿಧಾನ ಪರಿಷತ್ ಸದಸ್ಯ ಮಧು.ಜಿ.ಮಾದೇಗೌಡ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಸಮ್ಮೇಳನಾಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಸತ್ಯನಾರಾಯಣ, ಖಜಾಂಚಿ ಕೃಷ್ಣ, ಕಾರ್ಯದರ್ಶಿ ಎಂ.ರಾಜು, ಸಂಘಟನಾ ಕಾರ್ಯದರ್ಶಿ ಗುರು ಶಂಕರ್, ಬೋರಲಿಂಗ, ರಮೇಶ್ಬಾಬು ಇದ್ದರು.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…