ಮಂಡ್ಯ

ಮಂಡ್ಯ| ಕಾಂಗ್ರೆಸ್ ಒಲಿದ ಮನ್‌ಮುಲ್‌ ಅಧ್ಯಕ್ಷ ಸ್ಥಾನ: ಜೆಡಿಎಸ್ ಗೆ ಮತ್ತೆ ಮುಖಭಂಗ

ಮಂಡ್ಯ : ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಮನ್ ಮುಲ್)ದ ಚುಕ್ಕಾಣಿಯನ್ನು ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಜೆಡಿಎಸ್ ಮುಖಭಂಗ ಅನುಭವಿಸಿದೆ.

ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತ ಬೋರೇಗೌಡ ಅಲಂಕರಿಸುವ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿದೆ.

ಕಾಂಗ್ರೆಸ್ ಬೆಂಬಲಿತ ಬೋರೇಗೌಡ 9 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬಿಜೆಪಿ ಬೆಂಬಲಿತ ನಿರ್ದೇಶಕ ಎಸ್ ಪಿ ಸ್ವಾಮಿ ಅವರನ್ನು ಸೆಳೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಜಾತ್ಯತೀತ ಜನತಾದಳಕ್ಕೆ ಮುಖ ಭಂಗವನ್ನುಂಟು ಮಾಡಿದೆ.

ಮೂವರು ಚುನಾಯಿತ ನಿರ್ದೇಶಕರು, ಓರ್ವ ನಾಮನಿರ್ದೇಶಕರು, ನಾಲ್ವರು ಅಧಿಕಾರಿ ಸೇರಿ 8 ಮತದ ಬಲವೊಂದಿದ್ದ ಕಾಂಗ್ರೆಸ್ ಗೆ ಬಿಜೆಪಿಯ ಸಾದೊಳಲು ಸ್ವಾಮಿ ಬೆಂಬಲ ನೀಡಿದ್ದರಿಂದ ಮನ್ ಮುಲ್ ಅಧಿಕಾರ ಕಾಂಗ್ರೆಸ್ ತೆಕ್ಕೆಗೆ ಜಾರಿದೆ.

ಮನ್ ಮುಲ್ ನಲ್ಲಿ ಬಿ. ಆರ್. ರಾಮಚಂದ್ರ, ರಘುನಂದನ್, ವಿಶ್ವನಾಥ್, ನೆಲ್ಲಿಗೆರೆ ಬಾಲಕೃಷ್ಣ, ಕೋಟೆ ರವಿ, ಎಚ್ ಟಿ ಮಂಜು, ಕಾಡೇನಹಳ್ಳಿ ರಾಮಚಂದ್ರು ಜಾ.ದಳ ಬೆಂಬಲಿತ ಚುನಾಯಿತ ನಿರ್ದೇಶಕರಾಗಿದ್ದು, ಯು. ಸಿ. ಶಿವಕುಮಾರ್, ಬೋರೇಗೌಡ ಮತ್ತು ಡಾಲು ರವಿ ಕಾಂಗ್ರೆಸ್ ಬೆಂಬಲಿತ ಚುನಾಯಿತ ನಿರ್ದೇಶಕರಾಗಿದ್ದರೆ, ಕದಲೂರು ರಾಮಕೃಷ್ಣ ನಾಮನಿರ್ದೇಶನ ನಿರ್ದೇಶಕರಾಗಿದ್ದಾರೆ. 12 ಚುನಾಯಿತ ನಿರ್ದೇಶಕರು ಮತ್ತು ನಾಲ್ವರು ಅಧಿಕಾರಿಗಳು ಮತದಾನದ ಹಕ್ಕು ಹೊಂದಿದ್ದರು.

ಅಧ್ಯಕ್ಷರ ಆಯ್ಕೆಗೆ ಕಳೆದ ಜು. 6 ರಂದು ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷರ ಸ್ಥಾನಕ್ಕೆ ಸ್ಪರ್ಧೆ ಬಯಸಿ ಜಾ.ದಳ ಬೆಂಬಲಿತ ರಘುನಂದನ್, ನೆಲ್ಲಿಗೆರೆ ಬಾಲು, ಶಾಸಕ ಎಚ್ ಟಿ ಮಂಜು ಹಾಗೂ ಕಾಂಗ್ರೆಸ್ ಬೆಂಬಲಿತ ಬೋರೇಗೌಡ ನಾಮಪತ್ರ ಸಲ್ಲಿಸಿದ್ದರು. ಚುನಾವಣೆ ಪ್ರಕ್ರಿಯೆ ಮಧ್ಯೆ ನಿರ್ದೇಶಕರಾದ ಬಿ. ಆರ್.ರಾಮಚಂದ್ರ ಮತ್ತು ವಿಶ್ವನಾಥ್ ಅವರನ್ನು ಸಹಕಾರ ಸಂಘಗಳ ಆಡಳಿತ ಮಂಡಳಿಯ ಸಭೆಯಲ್ಲಿ ಭಾಗವಹಿಸಲು

ಸಹಕಾರ ಸಂಘಗಳ ಸಹಾಯಕ ನಿಬಂಧಕರ ಉಪ ವಿಭಾಗ ನ್ಯಾಯಾಲಯ ನಿರ್ಬಂಧ ವಿಧಿಸಿ ಆದೇಶಿಸಿತ್ತು.

ಚುನಾವಣೆ ಸಭೆಗೆ ಕೋರಂ ಅಭಾವ ಉಂಟಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅಧ್ಯಕ್ಷರ ಚುನಾವಣೆಯನ್ನು ಮುಂದೂಡಿದ್ದರು.

ಮುಂದೂಡಿದ ಚುನಾವಣೆ ಸಭೆ ಸೋಮವಾರ (ಜು.24 ) ನಿಗದಿಯಾಗಿತ್ತು. ಸಭೆಯಲ್ಲಿ ಮತಕ್ಕೆ ಹಾಕಿದಾಗ ಕಾಂಗ್ರೆಸ್ ಬೆಂಬಲಿತ ಬೋರೇಗೌಡ 9 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬಿಜೆಪಿ ಬೆಂಬಲಿತ ಸದಸ್ಯ ಎಸ್ ಪಿ ಸ್ವಾಮಿ ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದ ರಿಂದ ಅಧಿಕಾರ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಗೆ ವರದಾನವಾಯಿತು. ಜೆಡಿಎಸ್ ನಿರ್ದೇಶಕರು ಸಭೆಗೆ ಗೈರು ಆಗಿದ್ದರು.

ಮನ್ ಮುಲ್ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ನಾನಾ ತಂತ್ರಗಾರಿಕೆ ಮಾಡಿದ್ದ ಕಾಂಗ್ರೆಸ್ ಕೊನೆಗೂ ಯಶಸ್ವಿಯಾಗಿದ್ದು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಪಡೆಯುವುದು ಶತಸಿದ್ಧ ಎಂದು ಮುನ್ನೆಡೆದಿದ್ದ ಜಾತ್ಯತೀತ ಜನತಾದಳಕ್ಕೆ ಮುಖಭಂಗ ಆಗಿದೆ.

andolanait

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

3 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

6 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

7 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

7 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

7 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

7 hours ago