ಮಂಡ್ಯ

ಮಂಡ್ಯ| ಕಾಂಗ್ರೆಸ್ ಒಲಿದ ಮನ್‌ಮುಲ್‌ ಅಧ್ಯಕ್ಷ ಸ್ಥಾನ: ಜೆಡಿಎಸ್ ಗೆ ಮತ್ತೆ ಮುಖಭಂಗ

ಮಂಡ್ಯ : ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಮನ್ ಮುಲ್)ದ ಚುಕ್ಕಾಣಿಯನ್ನು ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಜೆಡಿಎಸ್ ಮುಖಭಂಗ ಅನುಭವಿಸಿದೆ.

ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತ ಬೋರೇಗೌಡ ಅಲಂಕರಿಸುವ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿದೆ.

ಕಾಂಗ್ರೆಸ್ ಬೆಂಬಲಿತ ಬೋರೇಗೌಡ 9 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬಿಜೆಪಿ ಬೆಂಬಲಿತ ನಿರ್ದೇಶಕ ಎಸ್ ಪಿ ಸ್ವಾಮಿ ಅವರನ್ನು ಸೆಳೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಜಾತ್ಯತೀತ ಜನತಾದಳಕ್ಕೆ ಮುಖ ಭಂಗವನ್ನುಂಟು ಮಾಡಿದೆ.

ಮೂವರು ಚುನಾಯಿತ ನಿರ್ದೇಶಕರು, ಓರ್ವ ನಾಮನಿರ್ದೇಶಕರು, ನಾಲ್ವರು ಅಧಿಕಾರಿ ಸೇರಿ 8 ಮತದ ಬಲವೊಂದಿದ್ದ ಕಾಂಗ್ರೆಸ್ ಗೆ ಬಿಜೆಪಿಯ ಸಾದೊಳಲು ಸ್ವಾಮಿ ಬೆಂಬಲ ನೀಡಿದ್ದರಿಂದ ಮನ್ ಮುಲ್ ಅಧಿಕಾರ ಕಾಂಗ್ರೆಸ್ ತೆಕ್ಕೆಗೆ ಜಾರಿದೆ.

ಮನ್ ಮುಲ್ ನಲ್ಲಿ ಬಿ. ಆರ್. ರಾಮಚಂದ್ರ, ರಘುನಂದನ್, ವಿಶ್ವನಾಥ್, ನೆಲ್ಲಿಗೆರೆ ಬಾಲಕೃಷ್ಣ, ಕೋಟೆ ರವಿ, ಎಚ್ ಟಿ ಮಂಜು, ಕಾಡೇನಹಳ್ಳಿ ರಾಮಚಂದ್ರು ಜಾ.ದಳ ಬೆಂಬಲಿತ ಚುನಾಯಿತ ನಿರ್ದೇಶಕರಾಗಿದ್ದು, ಯು. ಸಿ. ಶಿವಕುಮಾರ್, ಬೋರೇಗೌಡ ಮತ್ತು ಡಾಲು ರವಿ ಕಾಂಗ್ರೆಸ್ ಬೆಂಬಲಿತ ಚುನಾಯಿತ ನಿರ್ದೇಶಕರಾಗಿದ್ದರೆ, ಕದಲೂರು ರಾಮಕೃಷ್ಣ ನಾಮನಿರ್ದೇಶನ ನಿರ್ದೇಶಕರಾಗಿದ್ದಾರೆ. 12 ಚುನಾಯಿತ ನಿರ್ದೇಶಕರು ಮತ್ತು ನಾಲ್ವರು ಅಧಿಕಾರಿಗಳು ಮತದಾನದ ಹಕ್ಕು ಹೊಂದಿದ್ದರು.

ಅಧ್ಯಕ್ಷರ ಆಯ್ಕೆಗೆ ಕಳೆದ ಜು. 6 ರಂದು ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷರ ಸ್ಥಾನಕ್ಕೆ ಸ್ಪರ್ಧೆ ಬಯಸಿ ಜಾ.ದಳ ಬೆಂಬಲಿತ ರಘುನಂದನ್, ನೆಲ್ಲಿಗೆರೆ ಬಾಲು, ಶಾಸಕ ಎಚ್ ಟಿ ಮಂಜು ಹಾಗೂ ಕಾಂಗ್ರೆಸ್ ಬೆಂಬಲಿತ ಬೋರೇಗೌಡ ನಾಮಪತ್ರ ಸಲ್ಲಿಸಿದ್ದರು. ಚುನಾವಣೆ ಪ್ರಕ್ರಿಯೆ ಮಧ್ಯೆ ನಿರ್ದೇಶಕರಾದ ಬಿ. ಆರ್.ರಾಮಚಂದ್ರ ಮತ್ತು ವಿಶ್ವನಾಥ್ ಅವರನ್ನು ಸಹಕಾರ ಸಂಘಗಳ ಆಡಳಿತ ಮಂಡಳಿಯ ಸಭೆಯಲ್ಲಿ ಭಾಗವಹಿಸಲು

ಸಹಕಾರ ಸಂಘಗಳ ಸಹಾಯಕ ನಿಬಂಧಕರ ಉಪ ವಿಭಾಗ ನ್ಯಾಯಾಲಯ ನಿರ್ಬಂಧ ವಿಧಿಸಿ ಆದೇಶಿಸಿತ್ತು.

ಚುನಾವಣೆ ಸಭೆಗೆ ಕೋರಂ ಅಭಾವ ಉಂಟಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅಧ್ಯಕ್ಷರ ಚುನಾವಣೆಯನ್ನು ಮುಂದೂಡಿದ್ದರು.

ಮುಂದೂಡಿದ ಚುನಾವಣೆ ಸಭೆ ಸೋಮವಾರ (ಜು.24 ) ನಿಗದಿಯಾಗಿತ್ತು. ಸಭೆಯಲ್ಲಿ ಮತಕ್ಕೆ ಹಾಕಿದಾಗ ಕಾಂಗ್ರೆಸ್ ಬೆಂಬಲಿತ ಬೋರೇಗೌಡ 9 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬಿಜೆಪಿ ಬೆಂಬಲಿತ ಸದಸ್ಯ ಎಸ್ ಪಿ ಸ್ವಾಮಿ ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದ ರಿಂದ ಅಧಿಕಾರ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಗೆ ವರದಾನವಾಯಿತು. ಜೆಡಿಎಸ್ ನಿರ್ದೇಶಕರು ಸಭೆಗೆ ಗೈರು ಆಗಿದ್ದರು.

ಮನ್ ಮುಲ್ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ನಾನಾ ತಂತ್ರಗಾರಿಕೆ ಮಾಡಿದ್ದ ಕಾಂಗ್ರೆಸ್ ಕೊನೆಗೂ ಯಶಸ್ವಿಯಾಗಿದ್ದು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಪಡೆಯುವುದು ಶತಸಿದ್ಧ ಎಂದು ಮುನ್ನೆಡೆದಿದ್ದ ಜಾತ್ಯತೀತ ಜನತಾದಳಕ್ಕೆ ಮುಖಭಂಗ ಆಗಿದೆ.

andolanait

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

3 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

3 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

3 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

4 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

4 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

5 hours ago