ಮಂಡ್ಯ

ಮಂಡ್ಯ| ಕಾಂಗ್ರೆಸ್ ಒಲಿದ ಮನ್‌ಮುಲ್‌ ಅಧ್ಯಕ್ಷ ಸ್ಥಾನ: ಜೆಡಿಎಸ್ ಗೆ ಮತ್ತೆ ಮುಖಭಂಗ

ಮಂಡ್ಯ : ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಮನ್ ಮುಲ್)ದ ಚುಕ್ಕಾಣಿಯನ್ನು ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಜೆಡಿಎಸ್ ಮುಖಭಂಗ ಅನುಭವಿಸಿದೆ.

ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತ ಬೋರೇಗೌಡ ಅಲಂಕರಿಸುವ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿದೆ.

ಕಾಂಗ್ರೆಸ್ ಬೆಂಬಲಿತ ಬೋರೇಗೌಡ 9 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬಿಜೆಪಿ ಬೆಂಬಲಿತ ನಿರ್ದೇಶಕ ಎಸ್ ಪಿ ಸ್ವಾಮಿ ಅವರನ್ನು ಸೆಳೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಜಾತ್ಯತೀತ ಜನತಾದಳಕ್ಕೆ ಮುಖ ಭಂಗವನ್ನುಂಟು ಮಾಡಿದೆ.

ಮೂವರು ಚುನಾಯಿತ ನಿರ್ದೇಶಕರು, ಓರ್ವ ನಾಮನಿರ್ದೇಶಕರು, ನಾಲ್ವರು ಅಧಿಕಾರಿ ಸೇರಿ 8 ಮತದ ಬಲವೊಂದಿದ್ದ ಕಾಂಗ್ರೆಸ್ ಗೆ ಬಿಜೆಪಿಯ ಸಾದೊಳಲು ಸ್ವಾಮಿ ಬೆಂಬಲ ನೀಡಿದ್ದರಿಂದ ಮನ್ ಮುಲ್ ಅಧಿಕಾರ ಕಾಂಗ್ರೆಸ್ ತೆಕ್ಕೆಗೆ ಜಾರಿದೆ.

ಮನ್ ಮುಲ್ ನಲ್ಲಿ ಬಿ. ಆರ್. ರಾಮಚಂದ್ರ, ರಘುನಂದನ್, ವಿಶ್ವನಾಥ್, ನೆಲ್ಲಿಗೆರೆ ಬಾಲಕೃಷ್ಣ, ಕೋಟೆ ರವಿ, ಎಚ್ ಟಿ ಮಂಜು, ಕಾಡೇನಹಳ್ಳಿ ರಾಮಚಂದ್ರು ಜಾ.ದಳ ಬೆಂಬಲಿತ ಚುನಾಯಿತ ನಿರ್ದೇಶಕರಾಗಿದ್ದು, ಯು. ಸಿ. ಶಿವಕುಮಾರ್, ಬೋರೇಗೌಡ ಮತ್ತು ಡಾಲು ರವಿ ಕಾಂಗ್ರೆಸ್ ಬೆಂಬಲಿತ ಚುನಾಯಿತ ನಿರ್ದೇಶಕರಾಗಿದ್ದರೆ, ಕದಲೂರು ರಾಮಕೃಷ್ಣ ನಾಮನಿರ್ದೇಶನ ನಿರ್ದೇಶಕರಾಗಿದ್ದಾರೆ. 12 ಚುನಾಯಿತ ನಿರ್ದೇಶಕರು ಮತ್ತು ನಾಲ್ವರು ಅಧಿಕಾರಿಗಳು ಮತದಾನದ ಹಕ್ಕು ಹೊಂದಿದ್ದರು.

ಅಧ್ಯಕ್ಷರ ಆಯ್ಕೆಗೆ ಕಳೆದ ಜು. 6 ರಂದು ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷರ ಸ್ಥಾನಕ್ಕೆ ಸ್ಪರ್ಧೆ ಬಯಸಿ ಜಾ.ದಳ ಬೆಂಬಲಿತ ರಘುನಂದನ್, ನೆಲ್ಲಿಗೆರೆ ಬಾಲು, ಶಾಸಕ ಎಚ್ ಟಿ ಮಂಜು ಹಾಗೂ ಕಾಂಗ್ರೆಸ್ ಬೆಂಬಲಿತ ಬೋರೇಗೌಡ ನಾಮಪತ್ರ ಸಲ್ಲಿಸಿದ್ದರು. ಚುನಾವಣೆ ಪ್ರಕ್ರಿಯೆ ಮಧ್ಯೆ ನಿರ್ದೇಶಕರಾದ ಬಿ. ಆರ್.ರಾಮಚಂದ್ರ ಮತ್ತು ವಿಶ್ವನಾಥ್ ಅವರನ್ನು ಸಹಕಾರ ಸಂಘಗಳ ಆಡಳಿತ ಮಂಡಳಿಯ ಸಭೆಯಲ್ಲಿ ಭಾಗವಹಿಸಲು

ಸಹಕಾರ ಸಂಘಗಳ ಸಹಾಯಕ ನಿಬಂಧಕರ ಉಪ ವಿಭಾಗ ನ್ಯಾಯಾಲಯ ನಿರ್ಬಂಧ ವಿಧಿಸಿ ಆದೇಶಿಸಿತ್ತು.

ಚುನಾವಣೆ ಸಭೆಗೆ ಕೋರಂ ಅಭಾವ ಉಂಟಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅಧ್ಯಕ್ಷರ ಚುನಾವಣೆಯನ್ನು ಮುಂದೂಡಿದ್ದರು.

ಮುಂದೂಡಿದ ಚುನಾವಣೆ ಸಭೆ ಸೋಮವಾರ (ಜು.24 ) ನಿಗದಿಯಾಗಿತ್ತು. ಸಭೆಯಲ್ಲಿ ಮತಕ್ಕೆ ಹಾಕಿದಾಗ ಕಾಂಗ್ರೆಸ್ ಬೆಂಬಲಿತ ಬೋರೇಗೌಡ 9 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬಿಜೆಪಿ ಬೆಂಬಲಿತ ಸದಸ್ಯ ಎಸ್ ಪಿ ಸ್ವಾಮಿ ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದ ರಿಂದ ಅಧಿಕಾರ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಗೆ ವರದಾನವಾಯಿತು. ಜೆಡಿಎಸ್ ನಿರ್ದೇಶಕರು ಸಭೆಗೆ ಗೈರು ಆಗಿದ್ದರು.

ಮನ್ ಮುಲ್ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ನಾನಾ ತಂತ್ರಗಾರಿಕೆ ಮಾಡಿದ್ದ ಕಾಂಗ್ರೆಸ್ ಕೊನೆಗೂ ಯಶಸ್ವಿಯಾಗಿದ್ದು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಪಡೆಯುವುದು ಶತಸಿದ್ಧ ಎಂದು ಮುನ್ನೆಡೆದಿದ್ದ ಜಾತ್ಯತೀತ ಜನತಾದಳಕ್ಕೆ ಮುಖಭಂಗ ಆಗಿದೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

1 hour ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

6 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

7 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

7 hours ago