ಮಂಡ್ಯ

ಮಂಡ್ಯ| ಕಾಂಗ್ರೆಸ್ ಒಲಿದ ಮನ್‌ಮುಲ್‌ ಅಧ್ಯಕ್ಷ ಸ್ಥಾನ: ಜೆಡಿಎಸ್ ಗೆ ಮತ್ತೆ ಮುಖಭಂಗ

ಮಂಡ್ಯ : ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಮನ್ ಮುಲ್)ದ ಚುಕ್ಕಾಣಿಯನ್ನು ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಜೆಡಿಎಸ್ ಮುಖಭಂಗ ಅನುಭವಿಸಿದೆ.

ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತ ಬೋರೇಗೌಡ ಅಲಂಕರಿಸುವ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿದೆ.

ಕಾಂಗ್ರೆಸ್ ಬೆಂಬಲಿತ ಬೋರೇಗೌಡ 9 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬಿಜೆಪಿ ಬೆಂಬಲಿತ ನಿರ್ದೇಶಕ ಎಸ್ ಪಿ ಸ್ವಾಮಿ ಅವರನ್ನು ಸೆಳೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಜಾತ್ಯತೀತ ಜನತಾದಳಕ್ಕೆ ಮುಖ ಭಂಗವನ್ನುಂಟು ಮಾಡಿದೆ.

ಮೂವರು ಚುನಾಯಿತ ನಿರ್ದೇಶಕರು, ಓರ್ವ ನಾಮನಿರ್ದೇಶಕರು, ನಾಲ್ವರು ಅಧಿಕಾರಿ ಸೇರಿ 8 ಮತದ ಬಲವೊಂದಿದ್ದ ಕಾಂಗ್ರೆಸ್ ಗೆ ಬಿಜೆಪಿಯ ಸಾದೊಳಲು ಸ್ವಾಮಿ ಬೆಂಬಲ ನೀಡಿದ್ದರಿಂದ ಮನ್ ಮುಲ್ ಅಧಿಕಾರ ಕಾಂಗ್ರೆಸ್ ತೆಕ್ಕೆಗೆ ಜಾರಿದೆ.

ಮನ್ ಮುಲ್ ನಲ್ಲಿ ಬಿ. ಆರ್. ರಾಮಚಂದ್ರ, ರಘುನಂದನ್, ವಿಶ್ವನಾಥ್, ನೆಲ್ಲಿಗೆರೆ ಬಾಲಕೃಷ್ಣ, ಕೋಟೆ ರವಿ, ಎಚ್ ಟಿ ಮಂಜು, ಕಾಡೇನಹಳ್ಳಿ ರಾಮಚಂದ್ರು ಜಾ.ದಳ ಬೆಂಬಲಿತ ಚುನಾಯಿತ ನಿರ್ದೇಶಕರಾಗಿದ್ದು, ಯು. ಸಿ. ಶಿವಕುಮಾರ್, ಬೋರೇಗೌಡ ಮತ್ತು ಡಾಲು ರವಿ ಕಾಂಗ್ರೆಸ್ ಬೆಂಬಲಿತ ಚುನಾಯಿತ ನಿರ್ದೇಶಕರಾಗಿದ್ದರೆ, ಕದಲೂರು ರಾಮಕೃಷ್ಣ ನಾಮನಿರ್ದೇಶನ ನಿರ್ದೇಶಕರಾಗಿದ್ದಾರೆ. 12 ಚುನಾಯಿತ ನಿರ್ದೇಶಕರು ಮತ್ತು ನಾಲ್ವರು ಅಧಿಕಾರಿಗಳು ಮತದಾನದ ಹಕ್ಕು ಹೊಂದಿದ್ದರು.

ಅಧ್ಯಕ್ಷರ ಆಯ್ಕೆಗೆ ಕಳೆದ ಜು. 6 ರಂದು ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷರ ಸ್ಥಾನಕ್ಕೆ ಸ್ಪರ್ಧೆ ಬಯಸಿ ಜಾ.ದಳ ಬೆಂಬಲಿತ ರಘುನಂದನ್, ನೆಲ್ಲಿಗೆರೆ ಬಾಲು, ಶಾಸಕ ಎಚ್ ಟಿ ಮಂಜು ಹಾಗೂ ಕಾಂಗ್ರೆಸ್ ಬೆಂಬಲಿತ ಬೋರೇಗೌಡ ನಾಮಪತ್ರ ಸಲ್ಲಿಸಿದ್ದರು. ಚುನಾವಣೆ ಪ್ರಕ್ರಿಯೆ ಮಧ್ಯೆ ನಿರ್ದೇಶಕರಾದ ಬಿ. ಆರ್.ರಾಮಚಂದ್ರ ಮತ್ತು ವಿಶ್ವನಾಥ್ ಅವರನ್ನು ಸಹಕಾರ ಸಂಘಗಳ ಆಡಳಿತ ಮಂಡಳಿಯ ಸಭೆಯಲ್ಲಿ ಭಾಗವಹಿಸಲು

ಸಹಕಾರ ಸಂಘಗಳ ಸಹಾಯಕ ನಿಬಂಧಕರ ಉಪ ವಿಭಾಗ ನ್ಯಾಯಾಲಯ ನಿರ್ಬಂಧ ವಿಧಿಸಿ ಆದೇಶಿಸಿತ್ತು.

ಚುನಾವಣೆ ಸಭೆಗೆ ಕೋರಂ ಅಭಾವ ಉಂಟಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅಧ್ಯಕ್ಷರ ಚುನಾವಣೆಯನ್ನು ಮುಂದೂಡಿದ್ದರು.

ಮುಂದೂಡಿದ ಚುನಾವಣೆ ಸಭೆ ಸೋಮವಾರ (ಜು.24 ) ನಿಗದಿಯಾಗಿತ್ತು. ಸಭೆಯಲ್ಲಿ ಮತಕ್ಕೆ ಹಾಕಿದಾಗ ಕಾಂಗ್ರೆಸ್ ಬೆಂಬಲಿತ ಬೋರೇಗೌಡ 9 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬಿಜೆಪಿ ಬೆಂಬಲಿತ ಸದಸ್ಯ ಎಸ್ ಪಿ ಸ್ವಾಮಿ ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದ ರಿಂದ ಅಧಿಕಾರ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಗೆ ವರದಾನವಾಯಿತು. ಜೆಡಿಎಸ್ ನಿರ್ದೇಶಕರು ಸಭೆಗೆ ಗೈರು ಆಗಿದ್ದರು.

ಮನ್ ಮುಲ್ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ನಾನಾ ತಂತ್ರಗಾರಿಕೆ ಮಾಡಿದ್ದ ಕಾಂಗ್ರೆಸ್ ಕೊನೆಗೂ ಯಶಸ್ವಿಯಾಗಿದ್ದು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಪಡೆಯುವುದು ಶತಸಿದ್ಧ ಎಂದು ಮುನ್ನೆಡೆದಿದ್ದ ಜಾತ್ಯತೀತ ಜನತಾದಳಕ್ಕೆ ಮುಖಭಂಗ ಆಗಿದೆ.

andolanait

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

27 mins ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

53 mins ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

2 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

3 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

3 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

3 hours ago