ಮಂಡ್ಯ

ಮಂಡ್ಯ| ಕಾಂಗ್ರೆಸ್ ಒಲಿದ ಮನ್‌ಮುಲ್‌ ಅಧ್ಯಕ್ಷ ಸ್ಥಾನ: ಜೆಡಿಎಸ್ ಗೆ ಮತ್ತೆ ಮುಖಭಂಗ

ಮಂಡ್ಯ : ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಮನ್ ಮುಲ್)ದ ಚುಕ್ಕಾಣಿಯನ್ನು ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಜೆಡಿಎಸ್ ಮುಖಭಂಗ ಅನುಭವಿಸಿದೆ.

ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತ ಬೋರೇಗೌಡ ಅಲಂಕರಿಸುವ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿದೆ.

ಕಾಂಗ್ರೆಸ್ ಬೆಂಬಲಿತ ಬೋರೇಗೌಡ 9 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬಿಜೆಪಿ ಬೆಂಬಲಿತ ನಿರ್ದೇಶಕ ಎಸ್ ಪಿ ಸ್ವಾಮಿ ಅವರನ್ನು ಸೆಳೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಜಾತ್ಯತೀತ ಜನತಾದಳಕ್ಕೆ ಮುಖ ಭಂಗವನ್ನುಂಟು ಮಾಡಿದೆ.

ಮೂವರು ಚುನಾಯಿತ ನಿರ್ದೇಶಕರು, ಓರ್ವ ನಾಮನಿರ್ದೇಶಕರು, ನಾಲ್ವರು ಅಧಿಕಾರಿ ಸೇರಿ 8 ಮತದ ಬಲವೊಂದಿದ್ದ ಕಾಂಗ್ರೆಸ್ ಗೆ ಬಿಜೆಪಿಯ ಸಾದೊಳಲು ಸ್ವಾಮಿ ಬೆಂಬಲ ನೀಡಿದ್ದರಿಂದ ಮನ್ ಮುಲ್ ಅಧಿಕಾರ ಕಾಂಗ್ರೆಸ್ ತೆಕ್ಕೆಗೆ ಜಾರಿದೆ.

ಮನ್ ಮುಲ್ ನಲ್ಲಿ ಬಿ. ಆರ್. ರಾಮಚಂದ್ರ, ರಘುನಂದನ್, ವಿಶ್ವನಾಥ್, ನೆಲ್ಲಿಗೆರೆ ಬಾಲಕೃಷ್ಣ, ಕೋಟೆ ರವಿ, ಎಚ್ ಟಿ ಮಂಜು, ಕಾಡೇನಹಳ್ಳಿ ರಾಮಚಂದ್ರು ಜಾ.ದಳ ಬೆಂಬಲಿತ ಚುನಾಯಿತ ನಿರ್ದೇಶಕರಾಗಿದ್ದು, ಯು. ಸಿ. ಶಿವಕುಮಾರ್, ಬೋರೇಗೌಡ ಮತ್ತು ಡಾಲು ರವಿ ಕಾಂಗ್ರೆಸ್ ಬೆಂಬಲಿತ ಚುನಾಯಿತ ನಿರ್ದೇಶಕರಾಗಿದ್ದರೆ, ಕದಲೂರು ರಾಮಕೃಷ್ಣ ನಾಮನಿರ್ದೇಶನ ನಿರ್ದೇಶಕರಾಗಿದ್ದಾರೆ. 12 ಚುನಾಯಿತ ನಿರ್ದೇಶಕರು ಮತ್ತು ನಾಲ್ವರು ಅಧಿಕಾರಿಗಳು ಮತದಾನದ ಹಕ್ಕು ಹೊಂದಿದ್ದರು.

ಅಧ್ಯಕ್ಷರ ಆಯ್ಕೆಗೆ ಕಳೆದ ಜು. 6 ರಂದು ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷರ ಸ್ಥಾನಕ್ಕೆ ಸ್ಪರ್ಧೆ ಬಯಸಿ ಜಾ.ದಳ ಬೆಂಬಲಿತ ರಘುನಂದನ್, ನೆಲ್ಲಿಗೆರೆ ಬಾಲು, ಶಾಸಕ ಎಚ್ ಟಿ ಮಂಜು ಹಾಗೂ ಕಾಂಗ್ರೆಸ್ ಬೆಂಬಲಿತ ಬೋರೇಗೌಡ ನಾಮಪತ್ರ ಸಲ್ಲಿಸಿದ್ದರು. ಚುನಾವಣೆ ಪ್ರಕ್ರಿಯೆ ಮಧ್ಯೆ ನಿರ್ದೇಶಕರಾದ ಬಿ. ಆರ್.ರಾಮಚಂದ್ರ ಮತ್ತು ವಿಶ್ವನಾಥ್ ಅವರನ್ನು ಸಹಕಾರ ಸಂಘಗಳ ಆಡಳಿತ ಮಂಡಳಿಯ ಸಭೆಯಲ್ಲಿ ಭಾಗವಹಿಸಲು

ಸಹಕಾರ ಸಂಘಗಳ ಸಹಾಯಕ ನಿಬಂಧಕರ ಉಪ ವಿಭಾಗ ನ್ಯಾಯಾಲಯ ನಿರ್ಬಂಧ ವಿಧಿಸಿ ಆದೇಶಿಸಿತ್ತು.

ಚುನಾವಣೆ ಸಭೆಗೆ ಕೋರಂ ಅಭಾವ ಉಂಟಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅಧ್ಯಕ್ಷರ ಚುನಾವಣೆಯನ್ನು ಮುಂದೂಡಿದ್ದರು.

ಮುಂದೂಡಿದ ಚುನಾವಣೆ ಸಭೆ ಸೋಮವಾರ (ಜು.24 ) ನಿಗದಿಯಾಗಿತ್ತು. ಸಭೆಯಲ್ಲಿ ಮತಕ್ಕೆ ಹಾಕಿದಾಗ ಕಾಂಗ್ರೆಸ್ ಬೆಂಬಲಿತ ಬೋರೇಗೌಡ 9 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬಿಜೆಪಿ ಬೆಂಬಲಿತ ಸದಸ್ಯ ಎಸ್ ಪಿ ಸ್ವಾಮಿ ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದ ರಿಂದ ಅಧಿಕಾರ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಗೆ ವರದಾನವಾಯಿತು. ಜೆಡಿಎಸ್ ನಿರ್ದೇಶಕರು ಸಭೆಗೆ ಗೈರು ಆಗಿದ್ದರು.

ಮನ್ ಮುಲ್ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ನಾನಾ ತಂತ್ರಗಾರಿಕೆ ಮಾಡಿದ್ದ ಕಾಂಗ್ರೆಸ್ ಕೊನೆಗೂ ಯಶಸ್ವಿಯಾಗಿದ್ದು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಪಡೆಯುವುದು ಶತಸಿದ್ಧ ಎಂದು ಮುನ್ನೆಡೆದಿದ್ದ ಜಾತ್ಯತೀತ ಜನತಾದಳಕ್ಕೆ ಮುಖಭಂಗ ಆಗಿದೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

10 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

10 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

10 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

10 hours ago