ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಇಂದು (ಏ.೪) ಉಮೇದುವಾರಿಕೆ ಸಲ್ಲಿಸಿದರು.
ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಂಡ್ಯದ ಜನರಿಂದ ನನಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ನನಗೆ ರಾಜಕೀಯವಾಗಿ ಶಕ್ತಿ ನೀಡಿದ್ದು ಮಂಡ್ಯ ಜನತೆ. ನಾನು ಅಂದಿನಿಂದಲೂ ರೈತರ ಪರವಾಗಿಯೇ ಕೆಲಸ ಮಾಡಿದ್ದೇನೆ ಅವರು ನನ್ನ ಕೈ ಬಿಡುವುದಿಲ್ಲ ಎಂದು ಎಚ್ಡಿಕೆ ಭಾವುಕರಾಗಿದ್ದಾರೆ.
ಈ ಹಿಂದೆ ನಾನು, ಬಿ.ಎಸ್ ಯಡಿಯೂರಪ್ಪ ಮೈತ್ರಿ ಸರ್ಕಾರದಿಂದ ಉತ್ತಮ ಆಡಳಿತ ನೀಡಿದ್ದೆವು. ಒಳ್ಳೆಯ ಆಡಳಿತದಿಂದ ಜನರ ಗಮನ ಸೆಳೆದಿದ್ದೇವು. ಆಗ ಸಿಕ್ಕಂತೆ ಈಗಲೂ ಜನರಿಂದ ನನಗೆ ಅಭೂತಪೂರ್ವ ಬೆಂಬಲ ನನಗೆ ಸಿಕ್ಕಿದೆ. ಮುಂದಿನ ದಿನಗಳಲ್ಲಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡುವುದು ನನ್ನ ಗುರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇನ್ನು ನಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವಲ್ಲಿ ಗೋವಾ ಸಿಎಂ ಪ್ರಮೋದ್ ಸಾವಂತ್ ಪಾತ್ರ ದೊಡ್ಡದಿದೆ. ನಮ್ಮನ್ನು ದೆಹಲಿಗೆ ಕರೆದುಕೊಂಡು ಹೋಗಿ ಮೈತ್ರಿ ಮಾಡಿಸುವಲ್ಲಿ ಅವರ ಪಾತ್ರ ಬಹು ದೊಡ್ಡದು. ಇಂದು ಅವರೇ ಖುದ್ದು ಮಂಡ್ಯಕ್ಕೆ ಬಂದಿದ್ದಾರೆ. ಹಾಗೆಯೇ ಮಂಡ್ಯ ನನ್ನ ತವರು ಮನೆ ಎಂದು ಬಿಎಸ್ವ ಹೇಳಿದ್ದು ಸಂತಸ ತಂದಿದೆ ಎಂದು ಎಚ್ಡಿಕೆ ಹೇಳಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…