ಮಂಡ್ಯ

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ ಶಾಸಕ ರವಿಕುಮಾರ್‌ ಗೌಡ ಅವರು ಉತ್ಸಾಹಿ ಶಾಸಕರೆಂದು ಸಚಿವ ಚಲುವರಾಯಸ್ವಾಮಿ ಪ್ರಶಂಸೆ ವ್ಯಕ್ತಪಡಿಸಿದರು.

ಮಂಡ್ಯ ನಗರದ ಸಿಲ್ವರ್‌ ಜ್ಯುಬಿಲಿ ಪಾರ್ಕ್‌ನಲ್ಲಿ ಆಯೋಜನೆ ಮಾಡಿದ್ದ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಮುಂದಿನ ಎರಡು ವರ್ಷಗಳಲ್ಲಿ ಜಿಲ್ಲಾ ಕೇಂದ್ರದ ವೃತ್ತಗಳ ಸೌಂದರ್ಯಿಕರಣ, ಉತ್ತಮ ರಸ್ತೆಗಳ ನಿರ್ಮಾಣ ಹಾಗೂ ಅಗತ್ಯ ಸೌಲಭ್ಯಗಳ ಅಳವಡಿಕೆಯಿಂದ ಜಿಲ್ಲಾ ಕೇಂದ್ರಕ್ಕೆ ಇತರೆ ತಾಲ್ಲೂಕುಗಳ ಲಕ್ಷಾಂತರ ಜನತೆ ಬಂದು ಹೋಗುವ ವಾತಾವರಣ ಸೃಷ್ಟಿಯಾಗಲಿದೆ ಎಂದು ಹೇಳಿದರು.

ಜಿಲ್ಲಾ ಕೇಂದ್ರದ ನಿರೀಕ್ಷಿತ ಅಭಿವೃದ್ಧಿಗೆ ನನ್ನೊಡನೆ ಸ್ಪಂದಿಸುವ ಶಾಸಕರು ಚುನಾಯಿತರಾಗಬೇಕೆಂಬ ನನ್ನ ಕನಸು ಸಾಕಾರಗೊಂಡಿದೆ. ಜಿಲ್ಲೆಯ ಆರು ಶಾಸಕರು ಸೇರಿ ರಾಜ್ಯದ 139 ಶಾಸಕರ ಬಲವುಳ್ಳ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದು, ಅಭಿವೃದ್ಧಿಗೆ ಗಮನಹರಿಸುವ ಜವಾಬ್ದಾರಿ ನಮ್ಮ ಸರ್ಕಾರಕ್ಕಿದೆ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

3 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

5 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

5 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

5 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

7 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

8 hours ago