ಮಂಡ್ಯ

ಮಂಡ್ಯ | 23ರಂದು ನಿರಂತರ 24ಗಂಟೆ ರಕ್ತದಾನ ಶಿಬಿರ

ಮಂಡ್ಯ: ಜಿಲ್ಲೆಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸುಭಾಷ್‌ಚಂದ್ರಬೋಸ್ ಅವರ ೧೨೮ನೇ ಜನ್ಮದಿನದ ಸ್ಮರಣಾರ್ಥ ನಿರಂತರ ೨೪ ಗಂಟೆಗಳ ಕಾಲ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಜನವರಿ ೨೩ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೀವಧಾರೆ ಟ್ರಸ್ಟ್‌ನ ನಟರಾಜ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಸ್ಟ್‌ನ ವತಿಯಿಂದ ಇದುವರೆಗೂ ೩೪೪ ರಕ್ತದಾನ ಶಿಬಿರವನ್ನು ಆಯೋಜಿಸಿದ್ದು, ೪೩ ಸಾವಿರ ಯೂನಿಟ್ ರಕ್ತವನ್ನು ಸಂಗ್ರಹಿಸಿ ಯೋಧರ ಆಸ್ಪತ್ರೆಯನ್ನೂ ಒಳಗೊಂಡಂತೆ ಸರ್ಕಾರಿ ರಕ್ತನಿಧಿ ಕೇಂದ್ರಗಳಿಗೆ ನಿರಂತರವಾಗಿ ಕಾಲಕಾಲಕ್ಕೆ ಸಂಗ್ರಹಿಸಿದ ರಕ್ತ ಒದಗಿಸುತ್ತಿದೆ ಎಂದರು.

ಜನವರಿ ೨೩ರ ಬೆಳಿಗ್ಗೆ ೦೮ ಪ್ರಾರಂಭವಾಗುವ ರಕ್ತದಾನ ಶಿಬಿರ ಜನವರಿ ೨೪ರ ಬೆಳಿಗ್ಗೆ ೦೮ ಗಂಟೆ ವರೆಗೂ ನಡೆಯಲಿದೆ. ರಕ್ತದಾನ ಶಿಬಿರ ಸಂಬಂಧ ೧೨೮ ಹಳ್ಳಿಗಳಿಗೆ ಭೇಟಿ ಪ್ರಚಾರ ಮಾಡಲಾಗಿದೆ. ಜನವರಿ ೧೮ರಂದು ನಗರದ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ಮೂಲಕ ಪ್ರಚಾರ ಮಾಡಲಾಗಿದೆ. ಟ್ರಸ್ಟ್‌ನಿಂದ ನಡೆಯುವ ೩೪೫ನೇ ರಕ್ತದಾನ ಶಿಬಿರದಲ್ಲಿ ೧೫೦೦ ಯುನಿಟ್ ಸಂಗ್ರಹವಾಗುವ ನಿರೀಕ್ಷೆಯಿದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಕಾರ್ಯಕ್ರಮದಲ್ಲಿ ಬೆಳಗಿನ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆ ಮಾಡಲಾಗಿದ್ದು, ಸರ್ಕಾರಿ ಆಸ್ಪತ್ರೆಯಿಂದ ರಕ್ತ ಸಂಗ್ರಹಿಸಲು ವೈದ್ಯ ಸಿಬ್ಬಂದಿಗಳು ೩ ಪಾಳಯದಲ್ಲಿ ಕಾರ್ಯನಿರ್ವಹಿಸಲಿದ್ದು, ಸರ್ಕಾರಿ ಆಸ್ಪತ್ರೆಯಿಂದ ೧೫೦ ಹಾಸಿಗೆ ವ್ಯವಸ್ಥೆಯನ್ನು ಒದಗಿಸಲಾಗುವುದು. ಸಂಗ್ರಹವಾದ ರಕ್ತವನ್ನು ಸೈನಿಕ ಆಸ್ಪತ್ರೆಗೆ ಬೇಕಾಗಿರುಷ್ಟು ತಲುಪಿಸಲಾಗುವುದು. ಉಳಿದ ಎಲ್ಲ ರಕ್ತವನ್ನು ಸರ್ಕಾರಿ ರಕ್ತ ನಿಧಿ ಕೇಂದ್ರ ಹಾಗೂ ಅಗತ್ಯವಿರುವ ಆಸ್ಪತ್ರೆಗಳಿಗೆ ನೀಡಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಟ್ರಸ್ಟ್‌ನ ಗಣೇಶ್, ಅಭಿ, ಮಹದೇವ, ಉದಯ್, ರವಕುಮಾರ್, ಕುಮಾರ್, ಅನ್ವೇಶ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

3 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

3 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

3 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

3 hours ago