ಮಂಡ್ಯ

87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಜಗದ ಮೂಲೆ ಮೂಲೆಗೂ ಕನ್ನಡ ವಾಣಿ ಹರಡಲಿ: ಚಲುವರಾಯಸ್ವಾಮಿ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎನ್. ಚಲುವರಾಯಸ್ವಾಮಿ, ಜಗದ ಮೂಲೆಮೂಲೆಗೂ ಕನ್ನಡದ ವಾಣಿ ಹರಡಲಿ. ಕನ್ನಡ ಭಾಷೆಯನ್ನು ಪ್ರೇಮಿಸಬೇಕು. ನೆಲ, ಜಲದ ಉಳಿವಿಗಾಗಿ ಒಟ್ಟಾಗಿ ನಿಲ್ಲಬೇಕು. ಎಲ್ಲೇ ಇದ್ದರೂ ಕನ್ನಡಿಗರಾಗಿ ನಾಡಿನ ಏಳಿಗೆಗೆ ಶ್ರಮಿಸೋಣ ಎಂದು ಹೇಳಿದರು.

ಎರಡು ಸಾವಿರ ವರ್ಷಕ್ಕಿಂತ ಹೆಚ್ಚು ಇತಿಹಾಸವಿರುವ ಕನ್ನಡ ಭಾಷೆಗೆ ಸಾಕಷ್ಟು ಇತಿಹಾಸವಿದೆ. ಅತಿ ಹೆಚ್ಚು ಕನ್ನಡ ಭಾಷೆ ಮಾತನಾಡುವ ಜಿಲ್ಲೆ ಎಂದರೆ ಅದು ನಮ್ಮ ಮಂಡ್ಯ. ಗ್ರಾಮೀಣ ಸೊಗಡನ್ನು ಮೈಗೂಡಿಸಿಕೊಂಡಿರುವ ಮಂಡ್ಯ ಜಿಲ್ಲೆ ಸಾಹಿತ್ಯ ಕ್ಷೇತ್ರಕ್ಕೂ ದೊಡ್ಡ ಕೊಡುಗೆ ನೀಡಿದೆ ಎಂದರು.

ಬಿ.ಎಂ.ಶ್ರೀಕಂಠಯ್ಯ, ಕೆ.ಎಸ್.ನರಸಿಂಹಸ್ವಾಮಿ, ಪು.ತಿ.ನರಸಿಂಹಾಚಾರ್, ಭಾಷಾತಜ್ಞ, ಸಂಶೋಧಕ ವೆಂಕಟಸುಬ್ಬಯ್ಯ, ಸೀತಾಸುತ, ಜಾನಪದ ತಜ್ಞ ಡಾ. ಎಚ್.ಎಲ್.ನಾಗೇಗೌಡರು, ಬೊಮ್ಮರಸೇಗೌಡ ಅವರಂತಹ ಅನೇಕ ಶ್ರೇಷ್ಠ ಸಾಹಿತಿಗಳನ್ನು ನಾಡಿಗೆ ಕೊಟ್ಟಿರುವ ಜಿಲ್ಲೆ ಮಂಡ್ಯ. ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ಹೊಂದಾಣಿಕೆ ಇಲ್ಲ ಎಂದರು.

andolana

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

6 hours ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

7 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

7 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

8 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

8 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

8 hours ago