ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎನ್. ಚಲುವರಾಯಸ್ವಾಮಿ, ಜಗದ ಮೂಲೆಮೂಲೆಗೂ ಕನ್ನಡದ ವಾಣಿ ಹರಡಲಿ. ಕನ್ನಡ ಭಾಷೆಯನ್ನು ಪ್ರೇಮಿಸಬೇಕು. ನೆಲ, ಜಲದ ಉಳಿವಿಗಾಗಿ ಒಟ್ಟಾಗಿ ನಿಲ್ಲಬೇಕು. ಎಲ್ಲೇ ಇದ್ದರೂ ಕನ್ನಡಿಗರಾಗಿ ನಾಡಿನ ಏಳಿಗೆಗೆ ಶ್ರಮಿಸೋಣ ಎಂದು ಹೇಳಿದರು.
ಎರಡು ಸಾವಿರ ವರ್ಷಕ್ಕಿಂತ ಹೆಚ್ಚು ಇತಿಹಾಸವಿರುವ ಕನ್ನಡ ಭಾಷೆಗೆ ಸಾಕಷ್ಟು ಇತಿಹಾಸವಿದೆ. ಅತಿ ಹೆಚ್ಚು ಕನ್ನಡ ಭಾಷೆ ಮಾತನಾಡುವ ಜಿಲ್ಲೆ ಎಂದರೆ ಅದು ನಮ್ಮ ಮಂಡ್ಯ. ಗ್ರಾಮೀಣ ಸೊಗಡನ್ನು ಮೈಗೂಡಿಸಿಕೊಂಡಿರುವ ಮಂಡ್ಯ ಜಿಲ್ಲೆ ಸಾಹಿತ್ಯ ಕ್ಷೇತ್ರಕ್ಕೂ ದೊಡ್ಡ ಕೊಡುಗೆ ನೀಡಿದೆ ಎಂದರು.
ಬಿ.ಎಂ.ಶ್ರೀಕಂಠಯ್ಯ, ಕೆ.ಎಸ್.ನರಸಿಂಹಸ್ವಾಮಿ, ಪು.ತಿ.ನರಸಿಂಹಾಚಾರ್, ಭಾಷಾತಜ್ಞ, ಸಂಶೋಧಕ ವೆಂಕಟಸುಬ್ಬಯ್ಯ, ಸೀತಾಸುತ, ಜಾನಪದ ತಜ್ಞ ಡಾ. ಎಚ್.ಎಲ್.ನಾಗೇಗೌಡರು, ಬೊಮ್ಮರಸೇಗೌಡ ಅವರಂತಹ ಅನೇಕ ಶ್ರೇಷ್ಠ ಸಾಹಿತಿಗಳನ್ನು ನಾಡಿಗೆ ಕೊಟ್ಟಿರುವ ಜಿಲ್ಲೆ ಮಂಡ್ಯ. ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ಹೊಂದಾಣಿಕೆ ಇಲ್ಲ ಎಂದರು.
ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…
ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…
ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್ನ…
ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…