ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ ಗುರುವಾರ ನಡೆದಿದೆ.
ಗ್ರಾಮದ ಪುಟ್ಟಸ್ವಾಮಿ (55), ಈತನ ಪತ್ನಿ ನಾಗಮ್ಮ (50) ಆತ್ಮಹತ್ಯೆ ಶರಣಾದವರು. ಸಾಲ ಬಾಧೆಯಿಂದ ಬೇಸತ್ತಿದ್ದ ಇವರು ಸಾಲಗಾರ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಶವಗಳನ್ನು ಮಂಡ್ಯ ಮಿಮ್ಸ್ ನಲ್ಲಿ ಇರಿಸಲಾಗಿದೆ.



