ಮಂಡ್ಯ

ಮತದಾನದ ಪರ್ವ ದೇಶದ ಗರ್ವ: ಮತದಾನ ಮಾಡಿದ ಮಂಡ್ಯ ಜಿಲ್ಲಾಧಿಕಾರಿ

ಮಂಡ್ಯ: ಮಂಡ್ಯ ಲೋಕಸಭಾ‌ ಕ್ಷೇತ್ರದ ವ್ಯಾಪ್ತಿಯಲ್ಲಿ ಏಪ್ರಿಲ್ 26 ಇಂದು ಮತದಾನದ ಹಬ್ಬ. ಹಿರಿಯ ನಾಗರೀಕರು, ವಿಕಲಚೇತನರು, ಸಾರ್ವಜನಿಕರು ಅಧಿಕಾರಿಗಳು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿತ್ತಿದ್ದಾರೆ.

ಜಿಲ್ಲಾಧಿಕಾರಿ ಡಾ. ಕುಮಾರ ಅವರು ಇಂದು(ಏ.26) ಮಂಡ್ಯ ನಗರದ ಬನ್ನೂರು ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಬಳಿಕ ಪ್ರತಿಯೊಬ್ಬರೂ ತಪ್ಪದೇ ಮತದಾನ ಮಡಿ ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದರು.

ನಂತರ ಮತಗಟ್ಟೆಯಲ್ಲಿದ್ದ ಹಿರಿಯ ವಯಸ್ಕರ ಮತದಾರರಿಂದ ಮತಗಟ್ಟೆಯಲ್ಲಿ ಮಾಡಿರುವ ವ್ಯವಸ್ಥೆ, ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಊಟದ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

5 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago