ಮಂಡ್ಯ : ರಾಜಕೀಯ ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಚುನಾವವಣೆಯಲ್ಲಿ ಅಂತಿಮವಾಗಿ ಕಾಂಗ್ರೆಸ್ ದಿಗ್ವಿಜಯ ಸಾಧಿಸಿದೆ. ಒಟ್ಟು ೧೨ ಸ್ಥಾನಗಳ ಪೈಕಿ ೧೧ ಸ್ಥಾನಗಳಲ್ಲೂ ಗೆಲ್ಲುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದ್ದು, ಕೇವಲ ಒಂದು ಸ್ಥಾನದಲ್ಲಿ ಜಯಗಳಿಸುವ ಮೂಲಕ ಜಾ.ದಳ ಮರ್ಯಾದೆ ಉಳಿಸಿಕೊಂಡಿದೆ.
ಒಟ್ಟು ೧೨ ನಿರ್ದೇಶಕ ಸ್ಥಾನಗಳ ಪೈಕಿ ಕಾಂಗ್ರೆಸ್ ಬೆಂಬಲಿತರು ೯ ಸ್ಥಾನಗಳಲ್ಲಿ ಆಯ್ಕೆಯಾಗುವ ಮೂಲಕ ಮೊನ್ನೆಯಷ್ಟೇ ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ ೩ ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಮಂಡ್ಯ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತರಾದ ಸತೀಶ್ (೩೫ ಮತಗಳು), ಕೆ.ಆರ್.ಪೇಟೆ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಶೀಳನೆರೆ ಅಂಬರೀಶ್ (೧೫ ಮತಗಳು) ಹಾಗೂ ಪಾಂಡವಪುರ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಜಾ.ದಳ ಬೆಂಬಲಿತ ಪುಟ್ಟಸ್ವಾಮಿಗೌಡ (೧೫ ಮತಗಳು) ಚುನಾಯಿತರಾದರು.
ಇದನ್ನು ಓದಿ: ವಾರಾಂತ್ಯ ರಜೆ : ಮ.ಬೆಟ್ಟಕ್ಕೆ ಹರಿದು ಬಂದು ಜನಸಾಗರ
ಕಾಂಗ್ರೆಸ್ ಪಕ್ಷದಿಂದ ಅವಿರೋಧ ಆಯ್ಕೆಯಾದವರು:
ಮಳವಳ್ಳಿ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಶಾಸಕ ಪಿ.ಎಂ.ನರೇಂದ್ರಸ್ವಾಮಿ,
ನಾಗಮಂಗಲ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಸಿ.ಸಚ್ಚಿನ್ ಚಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯಲ್ಲಿನ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್)ಗಳ ಕ್ಷೇತ್ರದಿಂದ ಕೆ.ವಿ.ದಿನೇಶ್,
ಮಂಡ್ಯ ಜಿಲ್ಲೆಯಲ್ಲಿನ ಕೈಗಾರಿಕಾ ಸಹಕಾರ ಸಂಘಗಳು (ನೇಕಾರರ ಸಹಕಾರ ಸಂಘಗಳು ಸೇರಿದಂತೆ) ಕಾರ್ಮಿಕ ಸಹಕಾರ ಸಂಘಗಳು ಮತ್ತು ಇನ್ನಿತರೆ ಸಹಕಾರ ಸಂಘಗಳು (ಫಾಮಿಂಗ್ ಸಹಕಾರ ಸಂಘಗಳು ಸೇರಿದಂತೆ) ಕ್ಷೇತ್ರದಿಂದ ಹಾಲಿ ಅಧ್ಯಕ್ಷ ಕೆ.ಸಿ.ಜೋಗಿಗೌಡ,
ಮಂಡ್ಯ ಜಿಲ್ಲೆಯ ಬಳಕೆದಾರರ ಮತ್ತು ಸಂಸ್ಕರಣ ಸಹಕಾರ ಸಂಘಗಳ ಮತ್ತು ನಗರ ಸಹಕಾರ ಬ್ಯಾಂಕ್ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಎಚ್.ಅಶೋಕ್, ಮದ್ದೂರು ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಪಿ.ಸಂದರ್ಶ , ಶ್ರೀರಂಗಪಟ್ಟಣ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಬಿ.ಗಿರೀಶ್, ಪಾಂಡವಪುರ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಎ.ವಿಜೇಂದ್ರಮೂರ್ತಿ, ಮಂಡ್ಯ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಚಲುವರಾಜು ಆಯ್ಕೆಯಾಗಿದ್ದಾರೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…