ಮಂಡ್ಯ

ಮಂಡ್ಯ | ಡಿಸಿಸಿ ಬ್ಯಾಂಕ್‌ ಚುನಾವಣೆ ; ಕಾಂಗ್ರೆಸ್‌ ಜಯಭೇರಿ ; ಜಾ.ದಳಕ್ಕೆ ಮುಖಭಂಗ

ಮಂಡ್ಯ : ರಾಜಕೀಯ ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಚುನಾವವಣೆಯಲ್ಲಿ ಅಂತಿಮವಾಗಿ ಕಾಂಗ್ರೆಸ್ ದಿಗ್ವಿಜಯ ಸಾಧಿಸಿದೆ. ಒಟ್ಟು ೧೨ ಸ್ಥಾನಗಳ ಪೈಕಿ ೧೧ ಸ್ಥಾನಗಳಲ್ಲೂ ಗೆಲ್ಲುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದ್ದು, ಕೇವಲ ಒಂದು ಸ್ಥಾನದಲ್ಲಿ ಜಯಗಳಿಸುವ ಮೂಲಕ ಜಾ.ದಳ ಮರ್ಯಾದೆ ಉಳಿಸಿಕೊಂಡಿದೆ.

ಒಟ್ಟು ೧೨ ನಿರ್ದೇಶಕ ಸ್ಥಾನಗಳ ಪೈಕಿ ಕಾಂಗ್ರೆಸ್ ಬೆಂಬಲಿತರು ೯ ಸ್ಥಾನಗಳಲ್ಲಿ ಆಯ್ಕೆಯಾಗುವ ಮೂಲಕ ಮೊನ್ನೆಯಷ್ಟೇ ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ ೩ ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಮಂಡ್ಯ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತರಾದ ಸತೀಶ್ (೩೫ ಮತಗಳು), ಕೆ.ಆರ್.ಪೇಟೆ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಶೀಳನೆರೆ ಅಂಬರೀಶ್ (೧೫ ಮತಗಳು) ಹಾಗೂ ಪಾಂಡವಪುರ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಜಾ.ದಳ ಬೆಂಬಲಿತ ಪುಟ್ಟಸ್ವಾಮಿಗೌಡ (೧೫ ಮತಗಳು) ಚುನಾಯಿತರಾದರು.

ಇದನ್ನು ಓದಿ: ವಾರಾಂತ್ಯ ರಜೆ : ಮ.ಬೆಟ್ಟಕ್ಕೆ ಹರಿದು ಬಂದು ಜನಸಾಗರ

ಕಾಂಗ್ರೆಸ್ ಪಕ್ಷದಿಂದ ಅವಿರೋಧ ಆಯ್ಕೆಯಾದವರು:

ಮಳವಳ್ಳಿ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಶಾಸಕ ಪಿ.ಎಂ.ನರೇಂದ್ರಸ್ವಾಮಿ,

ನಾಗಮಂಗಲ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಸಿ.ಸಚ್ಚಿನ್ ಚಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯಲ್ಲಿನ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್)ಗಳ ಕ್ಷೇತ್ರದಿಂದ ಕೆ.ವಿ.ದಿನೇಶ್,

ಮಂಡ್ಯ ಜಿಲ್ಲೆಯಲ್ಲಿನ ಕೈಗಾರಿಕಾ ಸಹಕಾರ ಸಂಘಗಳು (ನೇಕಾರರ ಸಹಕಾರ ಸಂಘಗಳು ಸೇರಿದಂತೆ) ಕಾರ್ಮಿಕ ಸಹಕಾರ ಸಂಘಗಳು ಮತ್ತು ಇನ್ನಿತರೆ ಸಹಕಾರ ಸಂಘಗಳು (ಫಾಮಿಂಗ್ ಸಹಕಾರ ಸಂಘಗಳು ಸೇರಿದಂತೆ) ಕ್ಷೇತ್ರದಿಂದ ಹಾಲಿ ಅಧ್ಯಕ್ಷ ಕೆ.ಸಿ.ಜೋಗಿಗೌಡ,

ಮಂಡ್ಯ ಜಿಲ್ಲೆಯ ಬಳಕೆದಾರರ ಮತ್ತು ಸಂಸ್ಕರಣ ಸಹಕಾರ ಸಂಘಗಳ ಮತ್ತು ನಗರ ಸಹಕಾರ ಬ್ಯಾಂಕ್ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಎಚ್.ಅಶೋಕ್, ಮದ್ದೂರು ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಪಿ.ಸಂದರ್ಶ , ಶ್ರೀರಂಗಪಟ್ಟಣ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಬಿ.ಗಿರೀಶ್, ಪಾಂಡವಪುರ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಎ.ವಿಜೇಂದ್ರಮೂರ್ತಿ, ಮಂಡ್ಯ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಚಲುವರಾಜು ಆಯ್ಕೆಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

13 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

14 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago