ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ ಆಯುಕ್ತ ಆರ್.ನಾಗಶಯನ ಅವರನ್ನು ಅಮಾನತ್ತು ಮಾಡಿ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಜಯ್ ಎಸ್.ಕೊರಡೆ ಆದೇಶಿಸಿದ್ದಾರೆ.
ಸಿಎಲ್ 7 ಲೈಸೆನ್ಸ್ ನೀಡಲು ಕೆ.ಆರ್.ಪೇಟೆ ತಾಲ್ಲೂಕಿನ ಸೋಮನಹಳ್ಳಿಯ ಸುಂದರ್ ಎಂಬವರಿಂದ 60 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು. ಲಂಚ ನೀಡದ ಹಿನ್ನೆಲೆಯಲ್ಲಿ ಲೈಸೆನ್ಸ್ ನೀಡದೆ ಸಣ್ಣಪುಟ್ಟ ನೆಪ ಹೇಳಿ ಪದೇ ಪದೇ ವಜಾ ಮಾಡುತ್ತಲೇ ಬಂದಿದ್ದರು.
ಲೈಸೆನ್ಸ್ ನೀಡುವಂತೆ ನ್ಯಾಯಾಲಯ ಆದೇಶ ನೀಡಿದ್ದರೂ ಲೈಸೆನ್ಸ್ ನೀಡಿರಲಿಲ್ಲ. ಲೈಸೆನ್ಸ್ ನೀಡಲು 60 ಲಕ್ಷ ರೂ. ಲಂಚಕ್ಕೆ ನಾಗಶಯನ ಅವರು ಬೇಡಿಕೆ ಇಟ್ಟಿರುವುದು ಆಡಿಯೋ ಸಹಿತ ಸುಂದರ್ ಅವರು ದೂರು ನೀಡಿ ನ್ಯಾಯಕ್ಕಾಗಿ ಕಳೆದ ಒಂದು ವರ್ಷದಿಂದ ನಿರಂತರ ಹೋರಾಟ ಮಾಡುತ್ತಲೇ ಬಂದಿದ್ದರು. ಇದೇ ವಿಚಾರ ಸದನದಲ್ಲೂ ಚರ್ಚೆಯಾಗಿತ್ತು.
ಈ ವಿಚಾರವಾಗಿ ಮಂಗಳವಾರ ನಡೆದ ವಿಶೇಷ ವಿಧಾನಸಭಾ ಅಧಿವೇಶನದಲ್ಲೂ ಚರ್ಚೆಯಾದ ಹಿನ್ನೆಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡ ಸರ್ಕಾರ, ನಾಗಶಯನ ಅವರನ್ನು ಅಮಾನತ್ತು ಮಾಡುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ಅಜಯ್ ಎಸ್.ಕೊರಡೆ ಅವರು ಅಮಾನತ್ತು ಮಾಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…