ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ ಆಯುಕ್ತ ಆರ್.ನಾಗಶಯನ ಅವರನ್ನು ಅಮಾನತ್ತು ಮಾಡಿ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಜಯ್ ಎಸ್.ಕೊರಡೆ ಆದೇಶಿಸಿದ್ದಾರೆ.
ಸಿಎಲ್ 7 ಲೈಸೆನ್ಸ್ ನೀಡಲು ಕೆ.ಆರ್.ಪೇಟೆ ತಾಲ್ಲೂಕಿನ ಸೋಮನಹಳ್ಳಿಯ ಸುಂದರ್ ಎಂಬವರಿಂದ 60 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು. ಲಂಚ ನೀಡದ ಹಿನ್ನೆಲೆಯಲ್ಲಿ ಲೈಸೆನ್ಸ್ ನೀಡದೆ ಸಣ್ಣಪುಟ್ಟ ನೆಪ ಹೇಳಿ ಪದೇ ಪದೇ ವಜಾ ಮಾಡುತ್ತಲೇ ಬಂದಿದ್ದರು.
ಲೈಸೆನ್ಸ್ ನೀಡುವಂತೆ ನ್ಯಾಯಾಲಯ ಆದೇಶ ನೀಡಿದ್ದರೂ ಲೈಸೆನ್ಸ್ ನೀಡಿರಲಿಲ್ಲ. ಲೈಸೆನ್ಸ್ ನೀಡಲು 60 ಲಕ್ಷ ರೂ. ಲಂಚಕ್ಕೆ ನಾಗಶಯನ ಅವರು ಬೇಡಿಕೆ ಇಟ್ಟಿರುವುದು ಆಡಿಯೋ ಸಹಿತ ಸುಂದರ್ ಅವರು ದೂರು ನೀಡಿ ನ್ಯಾಯಕ್ಕಾಗಿ ಕಳೆದ ಒಂದು ವರ್ಷದಿಂದ ನಿರಂತರ ಹೋರಾಟ ಮಾಡುತ್ತಲೇ ಬಂದಿದ್ದರು. ಇದೇ ವಿಚಾರ ಸದನದಲ್ಲೂ ಚರ್ಚೆಯಾಗಿತ್ತು.
ಈ ವಿಚಾರವಾಗಿ ಮಂಗಳವಾರ ನಡೆದ ವಿಶೇಷ ವಿಧಾನಸಭಾ ಅಧಿವೇಶನದಲ್ಲೂ ಚರ್ಚೆಯಾದ ಹಿನ್ನೆಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡ ಸರ್ಕಾರ, ನಾಗಶಯನ ಅವರನ್ನು ಅಮಾನತ್ತು ಮಾಡುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ಅಜಯ್ ಎಸ್.ಕೊರಡೆ ಅವರು ಅಮಾನತ್ತು ಮಾಡಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…