ಮಂಡ್ಯ

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ ಆಯುಕ್ತ ಆರ್.ನಾಗಶಯನ ಅವರನ್ನು ಅಮಾನತ್ತು ಮಾಡಿ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಜಯ್ ಎಸ್.ಕೊರಡೆ ಆದೇಶಿಸಿದ್ದಾರೆ.

ಸಿಎಲ್ 7 ಲೈಸೆನ್ಸ್ ನೀಡಲು ಕೆ.ಆರ್.ಪೇಟೆ ತಾಲ್ಲೂಕಿನ ಸೋಮನಹಳ್ಳಿಯ ಸುಂದರ್ ಎಂಬವರಿಂದ 60 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು. ಲಂಚ ನೀಡದ ಹಿನ್ನೆಲೆಯಲ್ಲಿ ಲೈಸೆನ್ಸ್ ನೀಡದೆ ಸಣ್ಣಪುಟ್ಟ ನೆಪ ಹೇಳಿ ಪದೇ ಪದೇ ವಜಾ ಮಾಡುತ್ತಲೇ ಬಂದಿದ್ದರು.

ಲೈಸೆನ್ಸ್ ನೀಡುವಂತೆ ನ್ಯಾಯಾಲಯ ಆದೇಶ ನೀಡಿದ್ದರೂ ಲೈಸೆನ್ಸ್ ನೀಡಿರಲಿಲ್ಲ. ಲೈಸೆನ್ಸ್ ನೀಡಲು 60 ಲಕ್ಷ ರೂ. ಲಂಚಕ್ಕೆ ನಾಗಶಯನ ಅವರು ಬೇಡಿಕೆ ಇಟ್ಟಿರುವುದು ಆಡಿಯೋ ಸಹಿತ ಸುಂದರ್ ಅವರು ದೂರು ನೀಡಿ ನ್ಯಾಯಕ್ಕಾಗಿ ಕಳೆದ ಒಂದು ವರ್ಷದಿಂದ ನಿರಂತರ ಹೋರಾಟ ಮಾಡುತ್ತಲೇ ಬಂದಿದ್ದರು. ಇದೇ ವಿಚಾರ ಸದನದಲ್ಲೂ ಚರ್ಚೆಯಾಗಿತ್ತು.

ಈ ವಿಚಾರವಾಗಿ ಮಂಗಳವಾರ ನಡೆದ ವಿಶೇಷ ವಿಧಾನಸಭಾ ಅಧಿವೇಶನದಲ್ಲೂ ಚರ್ಚೆಯಾದ ಹಿನ್ನೆಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡ ಸರ್ಕಾರ, ನಾಗಶಯನ ಅವರನ್ನು ಅಮಾನತ್ತು ಮಾಡುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ಅಜಯ್ ಎಸ್.ಕೊರಡೆ ಅವರು ಅಮಾನತ್ತು ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

12 hours ago