ಮಂಡ್ಯ

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ ಆಯುಕ್ತ ಆರ್.ನಾಗಶಯನ ಅವರನ್ನು ಅಮಾನತ್ತು ಮಾಡಿ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಜಯ್ ಎಸ್.ಕೊರಡೆ ಆದೇಶಿಸಿದ್ದಾರೆ.

ಸಿಎಲ್ 7 ಲೈಸೆನ್ಸ್ ನೀಡಲು ಕೆ.ಆರ್.ಪೇಟೆ ತಾಲ್ಲೂಕಿನ ಸೋಮನಹಳ್ಳಿಯ ಸುಂದರ್ ಎಂಬವರಿಂದ 60 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು. ಲಂಚ ನೀಡದ ಹಿನ್ನೆಲೆಯಲ್ಲಿ ಲೈಸೆನ್ಸ್ ನೀಡದೆ ಸಣ್ಣಪುಟ್ಟ ನೆಪ ಹೇಳಿ ಪದೇ ಪದೇ ವಜಾ ಮಾಡುತ್ತಲೇ ಬಂದಿದ್ದರು.

ಲೈಸೆನ್ಸ್ ನೀಡುವಂತೆ ನ್ಯಾಯಾಲಯ ಆದೇಶ ನೀಡಿದ್ದರೂ ಲೈಸೆನ್ಸ್ ನೀಡಿರಲಿಲ್ಲ. ಲೈಸೆನ್ಸ್ ನೀಡಲು 60 ಲಕ್ಷ ರೂ. ಲಂಚಕ್ಕೆ ನಾಗಶಯನ ಅವರು ಬೇಡಿಕೆ ಇಟ್ಟಿರುವುದು ಆಡಿಯೋ ಸಹಿತ ಸುಂದರ್ ಅವರು ದೂರು ನೀಡಿ ನ್ಯಾಯಕ್ಕಾಗಿ ಕಳೆದ ಒಂದು ವರ್ಷದಿಂದ ನಿರಂತರ ಹೋರಾಟ ಮಾಡುತ್ತಲೇ ಬಂದಿದ್ದರು. ಇದೇ ವಿಚಾರ ಸದನದಲ್ಲೂ ಚರ್ಚೆಯಾಗಿತ್ತು.

ಈ ವಿಚಾರವಾಗಿ ಮಂಗಳವಾರ ನಡೆದ ವಿಶೇಷ ವಿಧಾನಸಭಾ ಅಧಿವೇಶನದಲ್ಲೂ ಚರ್ಚೆಯಾದ ಹಿನ್ನೆಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡ ಸರ್ಕಾರ, ನಾಗಶಯನ ಅವರನ್ನು ಅಮಾನತ್ತು ಮಾಡುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ಅಜಯ್ ಎಸ್.ಕೊರಡೆ ಅವರು ಅಮಾನತ್ತು ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago