ಮಂಡ್ಯ

ಮಂಡ್ಯ | ಬೂದನೂರು ಪಂಚಾಯಿತಿ ಆಡಳಿತ ಮಂಡಳಿ ವಿರುದ್ಧ ಕ್ರಮಕ್ಕೆ ಆಗ್ರಹ

ಮಂಡ್ಯ: ಬೂದನೂರು ಗ್ರಾಮ ಪಂಚಾಯಿತಿಯ ಹಾಲಿ ಆಡಳಿತ ಮಂಡಳಿಯ ಭ್ರಷ್ಟಾಚಾರದ ಸಂಬಂಧ ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳ ಸಮಿತಿ ಸಲ್ಲಿಸಿರುವ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಸಿಇಓ ನಂದಿನಿ ಅವರು ಮುಂದಾಗಬೇಕು ಎಂದು ಸ್ವಂತ ಮನೆ ನಮ್ಮ ಹಕ್ಕು ಹೋರಾಟ ಸಮಿತಿಯ ಸಂಚಾಲಕ ಬಿ.ಕೆ.ಸತೀಶ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೂದನೂರು ಪಂಚಾಯಿತಿಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ದೂರಿದ ಹಿನ್ನಲೆ ಪಂಚಾಯಿತಿಯ ಕಛೇರಿಯ ಮೇಲೆ ದಾಳಿ ನಡೆಸಿದ ಸಮಿತಿ ವರದಿ ನೀಡಿದ್ದು, ಕೇವಲ ೧ ವರ್ಷದ ಅವಧಿಯ ಭ್ರಷ್ಟಾಚಾರವೇ ಕ್ರಮ ಕೈಗೊಳ್ಳುವಂತಹ ಸಾಕ್ಷಿಗಳನ್ನು ಒದಗಿಸಿದ್ದು, ಇನ್ನೂ ೩ ವರ್ಷಗಳ ವರದಿ ಯಾವ ಸ್ಥಿತಿಯಲ್ಲಿರಬಹುದು ಎಂದರು.

ಸಮಿತಿಯು ೧೮ ವಿಷಯಗಳ ಪೈಕಿ ೬ ಮುಖ್ಯತಪ್ಪುಗಳ ಕುರಿತು ಅಭಿಪ್ರಾಯ ತಿಳಿಸಿದ್ದು, ಪಂಚಾಯಿತಿಯಲ್ಲಿ ನಿಯಮಾನುಸಾರ ಖರೀದಿ ಪ್ರಕ್ರಿಯೆಗಳು ನಡೆಯದಿರುವುದು, ಕ್ರಮಬದ್ಧ ಆಸ್ತಿಗಳಿಗೆ ಇ-ಸ್ವತ್ತು ವಿತರಣೆ ಮಾಡದಿರುವುದು, ನಿಯಮಾನುಸಾರ ದಾಸ್ತಾನು, ವಿತರಣಾ ವಹಿ ನಿರ್ವಹಿಸದಿರುವುದು, ಅನುಪಯುಕ್ತ ಸಾಮಗ್ರಿಗಳ ವಹಿ ನಿರ್ವಹಿಸದಿರುವುದು, ನಿಯಮಾನುಸಾರ ಅವುಗಳ ವಿಲೇವಾರಿ ಮಾಡದಿರುವುದು, ಘನ ಮತ್ತು ದ್ರವ್ಯ ತ್ಯಾಜ್ಯ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳದಿರುವುದು, ಉದ್ದಿಮೆ/ವಾಣಿಜ್ಯ ಚಟುವಟಿಕೆಗಳಿಗೆ ಕರ ನಿರ್ಧರಣೆ ಮಾಡಿ, ಪರವಾನಗಿ ನೀಡಿ ಸಂಪನ್ಮೂಲ ಕೃಢೀಕರಣಕ್ಕೆ ಕ್ರಮ ವಹಿಸದಿರುವುದು ತನಿಖೆಯಲ್ಲಿ ಬಹಿರಂಗಗೊಂಡಿದೆ ಎಂದು ತಿಳಿಸಿದರು.

ಅಲ್ಲದೇ ಬ್ಯಾಂಕ್ ಕಾಲೋನಿಯ ಸಮುದಾಯಿಕ ಆಸ್ತಿಗಳನ್ನು ವಶಕ್ಕೆ ಪಡೆಯದೇ ಅಕ್ರಮ ಎಸಗಿದ್ದು, ಇ-ಸ್ವತ್ತಿನಲ್ಲಿ ಕ್ರಮಬದ್ದ ಆಸ್ತಿ ಎಂದು ದಾಖಲೆ ಇಲ್ಲದಿದ್ದರೂ ನಮೂನೆ ಎ ಪ್ರಮಾಣ ಪತ್ರ ನೀಡಿ ಅಕ್ರಮ ಎಸಗಲಾಗಿದೆ. ಜಿ.ಪಂ ಸಿಇಓ ಈ ಕುರಿತು ಮತ್ತೊಮ್ಮೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸುವಂತೆ ಆಗ್ರಹಿಸಿದರು.

ಗೋಷ್ಠಿಯಲ್ಲಿ ಹೋರಾಟ ಸಮಿತಿಯ ಯಲ್ಲಮ್ಮ, ಸವಿತ, ಪುಟ್ಟಸ್ವಾಮಿ, ಕರವೇ ಜಿಲ್ಲಾಧ್ಯಕ್ಷ ಹೆಚ್.ಡಿ.ಜಯರಾಮ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

13 mins ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

28 mins ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

39 mins ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

58 mins ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

2 hours ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

2 hours ago