ಮಂಡ್ಯ: ಬೂದನೂರು ಗ್ರಾಮ ಪಂಚಾಯಿತಿಯ ಹಾಲಿ ಆಡಳಿತ ಮಂಡಳಿಯ ಭ್ರಷ್ಟಾಚಾರದ ಸಂಬಂಧ ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳ ಸಮಿತಿ ಸಲ್ಲಿಸಿರುವ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಸಿಇಓ ನಂದಿನಿ ಅವರು ಮುಂದಾಗಬೇಕು ಎಂದು ಸ್ವಂತ ಮನೆ ನಮ್ಮ ಹಕ್ಕು ಹೋರಾಟ ಸಮಿತಿಯ ಸಂಚಾಲಕ ಬಿ.ಕೆ.ಸತೀಶ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೂದನೂರು ಪಂಚಾಯಿತಿಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ದೂರಿದ ಹಿನ್ನಲೆ ಪಂಚಾಯಿತಿಯ ಕಛೇರಿಯ ಮೇಲೆ ದಾಳಿ ನಡೆಸಿದ ಸಮಿತಿ ವರದಿ ನೀಡಿದ್ದು, ಕೇವಲ ೧ ವರ್ಷದ ಅವಧಿಯ ಭ್ರಷ್ಟಾಚಾರವೇ ಕ್ರಮ ಕೈಗೊಳ್ಳುವಂತಹ ಸಾಕ್ಷಿಗಳನ್ನು ಒದಗಿಸಿದ್ದು, ಇನ್ನೂ ೩ ವರ್ಷಗಳ ವರದಿ ಯಾವ ಸ್ಥಿತಿಯಲ್ಲಿರಬಹುದು ಎಂದರು.
ಸಮಿತಿಯು ೧೮ ವಿಷಯಗಳ ಪೈಕಿ ೬ ಮುಖ್ಯತಪ್ಪುಗಳ ಕುರಿತು ಅಭಿಪ್ರಾಯ ತಿಳಿಸಿದ್ದು, ಪಂಚಾಯಿತಿಯಲ್ಲಿ ನಿಯಮಾನುಸಾರ ಖರೀದಿ ಪ್ರಕ್ರಿಯೆಗಳು ನಡೆಯದಿರುವುದು, ಕ್ರಮಬದ್ಧ ಆಸ್ತಿಗಳಿಗೆ ಇ-ಸ್ವತ್ತು ವಿತರಣೆ ಮಾಡದಿರುವುದು, ನಿಯಮಾನುಸಾರ ದಾಸ್ತಾನು, ವಿತರಣಾ ವಹಿ ನಿರ್ವಹಿಸದಿರುವುದು, ಅನುಪಯುಕ್ತ ಸಾಮಗ್ರಿಗಳ ವಹಿ ನಿರ್ವಹಿಸದಿರುವುದು, ನಿಯಮಾನುಸಾರ ಅವುಗಳ ವಿಲೇವಾರಿ ಮಾಡದಿರುವುದು, ಘನ ಮತ್ತು ದ್ರವ್ಯ ತ್ಯಾಜ್ಯ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳದಿರುವುದು, ಉದ್ದಿಮೆ/ವಾಣಿಜ್ಯ ಚಟುವಟಿಕೆಗಳಿಗೆ ಕರ ನಿರ್ಧರಣೆ ಮಾಡಿ, ಪರವಾನಗಿ ನೀಡಿ ಸಂಪನ್ಮೂಲ ಕೃಢೀಕರಣಕ್ಕೆ ಕ್ರಮ ವಹಿಸದಿರುವುದು ತನಿಖೆಯಲ್ಲಿ ಬಹಿರಂಗಗೊಂಡಿದೆ ಎಂದು ತಿಳಿಸಿದರು.
ಅಲ್ಲದೇ ಬ್ಯಾಂಕ್ ಕಾಲೋನಿಯ ಸಮುದಾಯಿಕ ಆಸ್ತಿಗಳನ್ನು ವಶಕ್ಕೆ ಪಡೆಯದೇ ಅಕ್ರಮ ಎಸಗಿದ್ದು, ಇ-ಸ್ವತ್ತಿನಲ್ಲಿ ಕ್ರಮಬದ್ದ ಆಸ್ತಿ ಎಂದು ದಾಖಲೆ ಇಲ್ಲದಿದ್ದರೂ ನಮೂನೆ ಎ ಪ್ರಮಾಣ ಪತ್ರ ನೀಡಿ ಅಕ್ರಮ ಎಸಗಲಾಗಿದೆ. ಜಿ.ಪಂ ಸಿಇಓ ಈ ಕುರಿತು ಮತ್ತೊಮ್ಮೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸುವಂತೆ ಆಗ್ರಹಿಸಿದರು.
ಗೋಷ್ಠಿಯಲ್ಲಿ ಹೋರಾಟ ಸಮಿತಿಯ ಯಲ್ಲಮ್ಮ, ಸವಿತ, ಪುಟ್ಟಸ್ವಾಮಿ, ಕರವೇ ಜಿಲ್ಲಾಧ್ಯಕ್ಷ ಹೆಚ್.ಡಿ.ಜಯರಾಮ್ ಇದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…