ಮಂಡ್ಯ: ಜಿಲ್ಲೆಯಲ್ಲಿ ತಲೆಯೆತ್ತಿರುವ ಹೋಟೆಲ್, ರೆಸ್ಟೋರೆಂಟ್, ತಿಂಡಿ ತಿನಿಸು, ಮಾಂಸಾಹಾರ ಸೇರಿದಂತೆ ಎಲ್ಲ ಬಗೆಯ ಆಹಾರ ಸಂಬಂಧಿತ ವ್ಯಾಪಾರ ಮಾಡುವವರು ನೊಂದಣಿ ಮಾಡಿಸಿ, ಕಡ್ಡಯಾವಾಗಿ ಆಹಾರ ಸ್ವಚ್ಛತಾ ಹಾಗೂ ಪರಿಸರ ನೈರ್ಮಲ್ಯ ಸಂಬಂಧಿತ ನಿಯಮಗಳನ್ನು ಪಾಲಿಸಬೇಕು ಎಂದು ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಹಲವು ಆಹಾರ ಮಳಿಗೆಗಳು ನಿಯಮ ಪಾಲನೆ ಮಾಡದೇ ಇದ್ದು, ಗುಣಮಟ್ಟವಿಲ್ಲದ, ಅಸುರಕ್ಷಿತ ಆಹಾರ ತಯಾರಿಸಿ ವಿತರಣೆ ಮಾಡುತ್ತಿದ್ದಾರೆ ಎಂದು ದೂರಿದರು.
ಆಹಾರ ತಯಾರಿಕೆಗೆ ಸ್ವಚ್ಛತೆಯ ನಿಯಮಗಳನ್ನು ಪಾಲನೆ ಮಾಡದೇ ಇದ್ದು, ಪಡೆಯುವ ಹಣಕ್ಕೆ ಸರಿಯಾದ ಪ್ರಮಾಣದ ಆಹಾರ ಪದಾರ್ಥಗಳನ್ನು ನೀಡುತ್ತಿಲ್ಲ, ಅಲ್ಲದೇ ರಾಸಾಯನಿಕ ಅಂಶಗಳನ್ನು ಆಹಾರದಲ್ಲಿ ಸೇರಿಸಿ ಸಾರ್ವಜನಿಕರ ಆರೋಗ್ಯಕ್ಕೆ ಕುತ್ತು ತಂದೊಡ್ಡುತ್ತಿದ್ದಾರೆ. ಅದು ಮಾತ್ರವಲ್ಲದೇ ಸ್ವಚ್ಛತೆಯಿರದ ಕಡೆಗಳಲ್ಲಿ ಆಹಾರ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಆಹಾರ ಇಲಾಖೆಗೆ ಸಂಬಂಧಿತ ಅಧಿಕಾರಿಗಳು, ನಗರಸಭೆಯ ಆರೋಗ್ಯ ಪರಿವೀಕ್ಷಕರು ಉದಾಸೀನತೆ ತೋರುತ್ತಿರುವುದರಿಂದಾಗಿ ಪರವಾನಗಿ ಪಡೆಯದೇ ಇಂದು ಎಲ್ಲೆಂದರಲ್ಲಿ ಆಹಾರ ತಯಾರಿಸುವ ಹೋಟೆಲ್, ಕೇಂದ್ರಗಳು ಆರಂಭಗೊಳ್ಳುತ್ತಿದ್ದು, ಸಾರ್ವಜನಿಕರನ್ನು ಅನಾರೋಗ್ಯದ ಕೂಪಕ್ಕೆ ತಳ್ಳುತ್ತಿದ್ದಾರೆ. ಅಧಿಕಾರಿಗಳು ತಮಗೆ ಬೇಕಾದದ್ದನ್ನು ಪಡೆದು ಏನು ಕಾಣದಂತೆ ಸುಮ್ಮನಾಗುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಆಹಾರ ಪದಾರ್ಥಗಳನ್ನು ನೀಡುವ ವ್ಯಾಪಾರ ಮಾಡುವವರು ಆಹಾರ ಪರವಾನಿ ಪಡೆದು, ಆಹಾರ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ಆಹಾರ ಪದಾರ್ಥಗಳ ಬೆಲೆ ಮತ್ತು ತೂಕವನ್ನು ಫಲಕಗಳ ಮೂಲಕ ಪ್ರಕಟಿಸಬೇಕು. ಇಲ್ಲವಾದಲ್ಲಿ ಆಹಾರ ಸುರಕ್ಷತಾ ಕಾಯ್ದೆ ೨೧ ಮತ್ತು ೬೩ರಂತೆ ದಂಡ ಅಥವಾ ಸೆರೆವಾಸ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಜೋಸೆಫ್ ರಾಮು, ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಜಿಲ್ಲಾ ಸಂಚಾಲಕ ಸಲ್ಮಾನ್, ಕರವೇ(ಪ್ರವೀಣ್ ಶೆಟ್ಟಿ ಬಣ) ಜಿಲ್ಲಾಧ್ಯಕ್ಷ ಅಶೋಕ್ ಇದ್ದರು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…