ಮಂಡ್ಯ

ಮಂಡ್ಯ : ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಶುಚಿತ್ವಕ್ಕೆ ಆಗ್ರಹ

ಮಂಡ್ಯ: ಜಿಲ್ಲೆಯಲ್ಲಿ ತಲೆಯೆತ್ತಿರುವ ಹೋಟೆಲ್, ರೆಸ್ಟೋರೆಂಟ್, ತಿಂಡಿ ತಿನಿಸು, ಮಾಂಸಾಹಾರ ಸೇರಿದಂತೆ ಎಲ್ಲ ಬಗೆಯ ಆಹಾರ ಸಂಬಂಧಿತ ವ್ಯಾಪಾರ ಮಾಡುವವರು ನೊಂದಣಿ ಮಾಡಿಸಿ, ಕಡ್ಡಯಾವಾಗಿ ಆಹಾರ ಸ್ವಚ್ಛತಾ ಹಾಗೂ ಪರಿಸರ ನೈರ್ಮಲ್ಯ ಸಂಬಂಧಿತ ನಿಯಮಗಳನ್ನು ಪಾಲಿಸಬೇಕು ಎಂದು ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಹಲವು ಆಹಾರ ಮಳಿಗೆಗಳು ನಿಯಮ ಪಾಲನೆ ಮಾಡದೇ ಇದ್ದು, ಗುಣಮಟ್ಟವಿಲ್ಲದ, ಅಸುರಕ್ಷಿತ ಆಹಾರ ತಯಾರಿಸಿ ವಿತರಣೆ ಮಾಡುತ್ತಿದ್ದಾರೆ ಎಂದು ದೂರಿದರು.

ಆಹಾರ ತಯಾರಿಕೆಗೆ ಸ್ವಚ್ಛತೆಯ ನಿಯಮಗಳನ್ನು ಪಾಲನೆ ಮಾಡದೇ ಇದ್ದು, ಪಡೆಯುವ ಹಣಕ್ಕೆ ಸರಿಯಾದ ಪ್ರಮಾಣದ ಆಹಾರ ಪದಾರ್ಥಗಳನ್ನು ನೀಡುತ್ತಿಲ್ಲ, ಅಲ್ಲದೇ ರಾಸಾಯನಿಕ ಅಂಶಗಳನ್ನು ಆಹಾರದಲ್ಲಿ ಸೇರಿಸಿ ಸಾರ್ವಜನಿಕರ ಆರೋಗ್ಯಕ್ಕೆ ಕುತ್ತು ತಂದೊಡ್ಡುತ್ತಿದ್ದಾರೆ. ಅದು ಮಾತ್ರವಲ್ಲದೇ ಸ್ವಚ್ಛತೆಯಿರದ ಕಡೆಗಳಲ್ಲಿ ಆಹಾರ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಆಹಾರ ಇಲಾಖೆಗೆ ಸಂಬಂಧಿತ ಅಧಿಕಾರಿಗಳು, ನಗರಸಭೆಯ ಆರೋಗ್ಯ ಪರಿವೀಕ್ಷಕರು ಉದಾಸೀನತೆ ತೋರುತ್ತಿರುವುದರಿಂದಾಗಿ ಪರವಾನಗಿ ಪಡೆಯದೇ ಇಂದು ಎಲ್ಲೆಂದರಲ್ಲಿ ಆಹಾರ ತಯಾರಿಸುವ ಹೋಟೆಲ್, ಕೇಂದ್ರಗಳು ಆರಂಭಗೊಳ್ಳುತ್ತಿದ್ದು, ಸಾರ್ವಜನಿಕರನ್ನು ಅನಾರೋಗ್ಯದ ಕೂಪಕ್ಕೆ ತಳ್ಳುತ್ತಿದ್ದಾರೆ. ಅಧಿಕಾರಿಗಳು ತಮಗೆ ಬೇಕಾದದ್ದನ್ನು ಪಡೆದು ಏನು ಕಾಣದಂತೆ ಸುಮ್ಮನಾಗುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಆಹಾರ ಪದಾರ್ಥಗಳನ್ನು ನೀಡುವ ವ್ಯಾಪಾರ ಮಾಡುವವರು ಆಹಾರ ಪರವಾನಿ ಪಡೆದು, ಆಹಾರ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ಆಹಾರ ಪದಾರ್ಥಗಳ ಬೆಲೆ ಮತ್ತು ತೂಕವನ್ನು ಫಲಕಗಳ ಮೂಲಕ ಪ್ರಕಟಿಸಬೇಕು. ಇಲ್ಲವಾದಲ್ಲಿ ಆಹಾರ ಸುರಕ್ಷತಾ ಕಾಯ್ದೆ ೨೧ ಮತ್ತು ೬೩ರಂತೆ ದಂಡ ಅಥವಾ ಸೆರೆವಾಸ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಜೋಸೆಫ್ ರಾಮು, ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಜಿಲ್ಲಾ ಸಂಚಾಲಕ ಸಲ್ಮಾನ್, ಕರವೇ(ಪ್ರವೀಣ್ ಶೆಟ್ಟಿ ಬಣ) ಜಿಲ್ಲಾಧ್ಯಕ್ಷ ಅಶೋಕ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

7 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

12 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

13 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

13 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

13 hours ago