ಮಂಡ್ಯ: ಒಳ ಮೀಸಲಾತಿ ಜಾರಿ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಕಾಂಗ್ರೆಸ್ ಸರ್ಕಾರ ಪೂರ್ವಾಗ್ರಹ ಪೀಡಿತ ಮನಸ್ಥಿತಿಯಿಂದಾಗಿ ಒಳಮೀಸಲಾತಿ ಜಾರಿ ಮಾಡಿಲ್ಲ ಎಂದು ಕ್ರಾಂತಿಕಾರಿ ಪಾದಯಾತ್ರೆಯ ರೂವಾರಿ ಬಿ.ಆರ್.ಬಾಸ್ಕರ್ ಪ್ರಸಾದ್ ಆಕ್ರೋಶ ವ್ಯಕ್ತ ಪಡಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳಮೀಸಲಾತಿ ಜಾರಿಗಾಗಿ 25 ವರ್ಷಗಳಿಂದ ನಿರಂತರ ಹೋರಾಟ ಮಾಡಿಕೊಂಡು ಬರಲಾಗುತ್ತಿದ್ದು, ಸದರಿ ಹೋರಾಟದಲ್ಲಿ ಹಲವು ಮಂದಿ ಪೊಲೀಸರ ಪ್ರತಿರೋಧದಿಂದ ಅಂಗವಿಕಲರಾಗಿರುವುದಲ್ಲದೇ ಜೀವ ಕಳೆದುಕೊಂಡಿದ್ದಾರೆ. ಮೀಸಲಾತಿ ಜಾರಿಗಾಗಿ ಇದೀಗ ಬೀದರ್ನಿಂದ ಕ್ರಾಂತಿಕಾರಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.
ಚುನಾವಣಾ ಪೂರ್ವದ ಪ್ರಣಾಳಿಕೆಯಲ್ಲಿ ಮೊದಲ ಅಧಿವೇಶನದಲ್ಲಿಯೇ ಮೀಸಲಾತಿ ಜಾರಿ ಮಾಡುವುದಾಗಿ ಹೇಳಿದ ರಾಜ್ಯ ಸರ್ಕಾರ ಇಂದು ಮಾತು ತಪ್ಪಿದೆ. ಅಲ್ಲದೇ ಸದಾಶಿವ ಆಯೋಗ ನೀಡಿದ ವರದಿಯಲ್ಲಿ ಇಲ್ಲ ಸಲ್ಲದ ನೆಪ ಹೇಳಿಕೊಂಡು ಮೀಸಲಾತಿ ಜಾರಿಗೊಳಿಸಲು ಮೀನಾಮೇಷ ಎಣಿಸುತ್ತಿದೆ ಎಂದು ದೂರಿದರು.
ದತ್ತಾಂಶದ ನೆಪ ಹೇಳುವ ರಾಜ್ಯ ಸರ್ಕಾರಕ್ಕೆ ಹವನೂರು, ಕಾಂತರಾಜು, ಸದಾಶಿವ, ಮಹದೇವಸ್ವಾಮಿ ಆಯೋಗಗಳ ವರದಿಯಿದ್ದರೂ ಮೀಸಲಾತಿ ಜಾರಿ ಮಾಡಲು ಮುಂದಾಗಿಲ್ಲ, ಇದೀಗ ನಾಗಮೋಹನ್ದಾಸ್ ಅವರ ಮಧ್ಯಂತರ ವರದಿಯ ಪರಿಶೀಲನೆಗೆ ಮುಂದಾಗಿದೆ. ಮಧ್ಯಂತರ ವರದಿ ಸಲ್ಲಿಸಿರುವ ನಾಗಮೋಹನ್ದಾಸ್ ಅವರು ಕಾಲಾವಕಾಶ ಕೇಳಿ ಸಲ್ಲಿಸಿರುವುದು ಸರಿಯಾದ ನಡೆಯಲ್ಲ ಎಂದು ಕಿಡಿಕಾರಿದರು.
2024ರ ಅಕ್ಟೋಬರ್ನಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೀಸಲಾತಿ ಜಾರಿಯಾಗುವವರಗೆ ಬಡ್ತಿ ನೀಡಬಾರದು ಎಂದು ನಿರ್ಣಯ ಕೈಗೊಂಡು, ಮುಂದಿನ ತಿಂಗಳು ನಡೆಯುವ ಸಂಪುಟ ಸಭೆಗೂ ಮುನ್ನ 70ಕ್ಕೂ ಹೆಚ್ಚು ಬಡ್ತಿ ಮಾಡಿ, ಉನ್ನತ ಹುದ್ದೆಗಳನ್ನು ಭರ್ತಿ ಮಾಡಿದ್ದಾರೆ. ಒಳಮೀಸಲಾತಿಗಾಗಿ ಕಾಯುತ್ತಿರುವ ಸಮುದಾಯಗಳಿಗೆ ಅದೇ ಸಮುದಾಯದವರೇ ಆದ ಸಚಿವ ಎಚ್.ಸಿ.ಮಹದೇವಪ್ಪ ಅನ್ಯಾಯ ಮಾಡುತ್ತಿದ್ದು, ಸಮುದಾಯದ ಪರ ನಿಲ್ಲದ ಸಮುದಾಯದ ಸಚಿವರುಗಳು ನಾಲಾಯಕ್ ಎಂದು ಕ್ರೋಧ ವ್ಯಕ್ತಪಡಿಸಿದರು.
ಗೋಷ್ಠಿಯಲ್ಲಿ ಸಿ.ಕೆ.ಪಾಪಯ್ಯ, ಸಿ.ಅಂದಾನಿ, ಬಿ.ಕೃಷ್ಣ, ಮಂಜು, ಶ್ರೀನವಾಸ್, ಶಿವಕುಮಾರ್ ಇತರರಿದ್ದರು.
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…
ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…
ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…
ಮಧ್ಯಪ್ರಾಚ್ಯ ಯುದ್ಧದ ಬಿಸಿಗೆ ನಲುಗಿದ ಮೈಸೂರು ಹೋಟೆಲ್ಗಳು ಸೌದೆ ಒಲೆಗೆ ಮೊರೆ ಹೋದ ನ್ಯೂ ಲಕ್ಷ್ಮಿ ಭವನ; ಅನಿಲದ ಹಂಗಿಲ್ಲದ…