ಮಂಡ್ಯ: ಒಳ ಮೀಸಲಾತಿ ಜಾರಿ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಕಾಂಗ್ರೆಸ್ ಸರ್ಕಾರ ಪೂರ್ವಾಗ್ರಹ ಪೀಡಿತ ಮನಸ್ಥಿತಿಯಿಂದಾಗಿ ಒಳಮೀಸಲಾತಿ ಜಾರಿ ಮಾಡಿಲ್ಲ ಎಂದು ಕ್ರಾಂತಿಕಾರಿ ಪಾದಯಾತ್ರೆಯ ರೂವಾರಿ ಬಿ.ಆರ್.ಬಾಸ್ಕರ್ ಪ್ರಸಾದ್ ಆಕ್ರೋಶ ವ್ಯಕ್ತ ಪಡಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳಮೀಸಲಾತಿ ಜಾರಿಗಾಗಿ 25 ವರ್ಷಗಳಿಂದ ನಿರಂತರ ಹೋರಾಟ ಮಾಡಿಕೊಂಡು ಬರಲಾಗುತ್ತಿದ್ದು, ಸದರಿ ಹೋರಾಟದಲ್ಲಿ ಹಲವು ಮಂದಿ ಪೊಲೀಸರ ಪ್ರತಿರೋಧದಿಂದ ಅಂಗವಿಕಲರಾಗಿರುವುದಲ್ಲದೇ ಜೀವ ಕಳೆದುಕೊಂಡಿದ್ದಾರೆ. ಮೀಸಲಾತಿ ಜಾರಿಗಾಗಿ ಇದೀಗ ಬೀದರ್ನಿಂದ ಕ್ರಾಂತಿಕಾರಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.
ಚುನಾವಣಾ ಪೂರ್ವದ ಪ್ರಣಾಳಿಕೆಯಲ್ಲಿ ಮೊದಲ ಅಧಿವೇಶನದಲ್ಲಿಯೇ ಮೀಸಲಾತಿ ಜಾರಿ ಮಾಡುವುದಾಗಿ ಹೇಳಿದ ರಾಜ್ಯ ಸರ್ಕಾರ ಇಂದು ಮಾತು ತಪ್ಪಿದೆ. ಅಲ್ಲದೇ ಸದಾಶಿವ ಆಯೋಗ ನೀಡಿದ ವರದಿಯಲ್ಲಿ ಇಲ್ಲ ಸಲ್ಲದ ನೆಪ ಹೇಳಿಕೊಂಡು ಮೀಸಲಾತಿ ಜಾರಿಗೊಳಿಸಲು ಮೀನಾಮೇಷ ಎಣಿಸುತ್ತಿದೆ ಎಂದು ದೂರಿದರು.
ದತ್ತಾಂಶದ ನೆಪ ಹೇಳುವ ರಾಜ್ಯ ಸರ್ಕಾರಕ್ಕೆ ಹವನೂರು, ಕಾಂತರಾಜು, ಸದಾಶಿವ, ಮಹದೇವಸ್ವಾಮಿ ಆಯೋಗಗಳ ವರದಿಯಿದ್ದರೂ ಮೀಸಲಾತಿ ಜಾರಿ ಮಾಡಲು ಮುಂದಾಗಿಲ್ಲ, ಇದೀಗ ನಾಗಮೋಹನ್ದಾಸ್ ಅವರ ಮಧ್ಯಂತರ ವರದಿಯ ಪರಿಶೀಲನೆಗೆ ಮುಂದಾಗಿದೆ. ಮಧ್ಯಂತರ ವರದಿ ಸಲ್ಲಿಸಿರುವ ನಾಗಮೋಹನ್ದಾಸ್ ಅವರು ಕಾಲಾವಕಾಶ ಕೇಳಿ ಸಲ್ಲಿಸಿರುವುದು ಸರಿಯಾದ ನಡೆಯಲ್ಲ ಎಂದು ಕಿಡಿಕಾರಿದರು.
2024ರ ಅಕ್ಟೋಬರ್ನಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೀಸಲಾತಿ ಜಾರಿಯಾಗುವವರಗೆ ಬಡ್ತಿ ನೀಡಬಾರದು ಎಂದು ನಿರ್ಣಯ ಕೈಗೊಂಡು, ಮುಂದಿನ ತಿಂಗಳು ನಡೆಯುವ ಸಂಪುಟ ಸಭೆಗೂ ಮುನ್ನ 70ಕ್ಕೂ ಹೆಚ್ಚು ಬಡ್ತಿ ಮಾಡಿ, ಉನ್ನತ ಹುದ್ದೆಗಳನ್ನು ಭರ್ತಿ ಮಾಡಿದ್ದಾರೆ. ಒಳಮೀಸಲಾತಿಗಾಗಿ ಕಾಯುತ್ತಿರುವ ಸಮುದಾಯಗಳಿಗೆ ಅದೇ ಸಮುದಾಯದವರೇ ಆದ ಸಚಿವ ಎಚ್.ಸಿ.ಮಹದೇವಪ್ಪ ಅನ್ಯಾಯ ಮಾಡುತ್ತಿದ್ದು, ಸಮುದಾಯದ ಪರ ನಿಲ್ಲದ ಸಮುದಾಯದ ಸಚಿವರುಗಳು ನಾಲಾಯಕ್ ಎಂದು ಕ್ರೋಧ ವ್ಯಕ್ತಪಡಿಸಿದರು.
ಗೋಷ್ಠಿಯಲ್ಲಿ ಸಿ.ಕೆ.ಪಾಪಯ್ಯ, ಸಿ.ಅಂದಾನಿ, ಬಿ.ಕೃಷ್ಣ, ಮಂಜು, ಶ್ರೀನವಾಸ್, ಶಿವಕುಮಾರ್ ಇತರರಿದ್ದರು.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…
ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ…
ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…
ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…