ಮಂಡ್ಯ: ಒಳ ಮೀಸಲಾತಿ ಜಾರಿ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಕಾಂಗ್ರೆಸ್ ಸರ್ಕಾರ ಪೂರ್ವಾಗ್ರಹ ಪೀಡಿತ ಮನಸ್ಥಿತಿಯಿಂದಾಗಿ ಒಳಮೀಸಲಾತಿ ಜಾರಿ ಮಾಡಿಲ್ಲ ಎಂದು ಕ್ರಾಂತಿಕಾರಿ ಪಾದಯಾತ್ರೆಯ ರೂವಾರಿ ಬಿ.ಆರ್.ಬಾಸ್ಕರ್ ಪ್ರಸಾದ್ ಆಕ್ರೋಶ ವ್ಯಕ್ತ ಪಡಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳಮೀಸಲಾತಿ ಜಾರಿಗಾಗಿ 25 ವರ್ಷಗಳಿಂದ ನಿರಂತರ ಹೋರಾಟ ಮಾಡಿಕೊಂಡು ಬರಲಾಗುತ್ತಿದ್ದು, ಸದರಿ ಹೋರಾಟದಲ್ಲಿ ಹಲವು ಮಂದಿ ಪೊಲೀಸರ ಪ್ರತಿರೋಧದಿಂದ ಅಂಗವಿಕಲರಾಗಿರುವುದಲ್ಲದೇ ಜೀವ ಕಳೆದುಕೊಂಡಿದ್ದಾರೆ. ಮೀಸಲಾತಿ ಜಾರಿಗಾಗಿ ಇದೀಗ ಬೀದರ್ನಿಂದ ಕ್ರಾಂತಿಕಾರಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.
ಚುನಾವಣಾ ಪೂರ್ವದ ಪ್ರಣಾಳಿಕೆಯಲ್ಲಿ ಮೊದಲ ಅಧಿವೇಶನದಲ್ಲಿಯೇ ಮೀಸಲಾತಿ ಜಾರಿ ಮಾಡುವುದಾಗಿ ಹೇಳಿದ ರಾಜ್ಯ ಸರ್ಕಾರ ಇಂದು ಮಾತು ತಪ್ಪಿದೆ. ಅಲ್ಲದೇ ಸದಾಶಿವ ಆಯೋಗ ನೀಡಿದ ವರದಿಯಲ್ಲಿ ಇಲ್ಲ ಸಲ್ಲದ ನೆಪ ಹೇಳಿಕೊಂಡು ಮೀಸಲಾತಿ ಜಾರಿಗೊಳಿಸಲು ಮೀನಾಮೇಷ ಎಣಿಸುತ್ತಿದೆ ಎಂದು ದೂರಿದರು.
ದತ್ತಾಂಶದ ನೆಪ ಹೇಳುವ ರಾಜ್ಯ ಸರ್ಕಾರಕ್ಕೆ ಹವನೂರು, ಕಾಂತರಾಜು, ಸದಾಶಿವ, ಮಹದೇವಸ್ವಾಮಿ ಆಯೋಗಗಳ ವರದಿಯಿದ್ದರೂ ಮೀಸಲಾತಿ ಜಾರಿ ಮಾಡಲು ಮುಂದಾಗಿಲ್ಲ, ಇದೀಗ ನಾಗಮೋಹನ್ದಾಸ್ ಅವರ ಮಧ್ಯಂತರ ವರದಿಯ ಪರಿಶೀಲನೆಗೆ ಮುಂದಾಗಿದೆ. ಮಧ್ಯಂತರ ವರದಿ ಸಲ್ಲಿಸಿರುವ ನಾಗಮೋಹನ್ದಾಸ್ ಅವರು ಕಾಲಾವಕಾಶ ಕೇಳಿ ಸಲ್ಲಿಸಿರುವುದು ಸರಿಯಾದ ನಡೆಯಲ್ಲ ಎಂದು ಕಿಡಿಕಾರಿದರು.
2024ರ ಅಕ್ಟೋಬರ್ನಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೀಸಲಾತಿ ಜಾರಿಯಾಗುವವರಗೆ ಬಡ್ತಿ ನೀಡಬಾರದು ಎಂದು ನಿರ್ಣಯ ಕೈಗೊಂಡು, ಮುಂದಿನ ತಿಂಗಳು ನಡೆಯುವ ಸಂಪುಟ ಸಭೆಗೂ ಮುನ್ನ 70ಕ್ಕೂ ಹೆಚ್ಚು ಬಡ್ತಿ ಮಾಡಿ, ಉನ್ನತ ಹುದ್ದೆಗಳನ್ನು ಭರ್ತಿ ಮಾಡಿದ್ದಾರೆ. ಒಳಮೀಸಲಾತಿಗಾಗಿ ಕಾಯುತ್ತಿರುವ ಸಮುದಾಯಗಳಿಗೆ ಅದೇ ಸಮುದಾಯದವರೇ ಆದ ಸಚಿವ ಎಚ್.ಸಿ.ಮಹದೇವಪ್ಪ ಅನ್ಯಾಯ ಮಾಡುತ್ತಿದ್ದು, ಸಮುದಾಯದ ಪರ ನಿಲ್ಲದ ಸಮುದಾಯದ ಸಚಿವರುಗಳು ನಾಲಾಯಕ್ ಎಂದು ಕ್ರೋಧ ವ್ಯಕ್ತಪಡಿಸಿದರು.
ಗೋಷ್ಠಿಯಲ್ಲಿ ಸಿ.ಕೆ.ಪಾಪಯ್ಯ, ಸಿ.ಅಂದಾನಿ, ಬಿ.ಕೃಷ್ಣ, ಮಂಜು, ಶ್ರೀನವಾಸ್, ಶಿವಕುಮಾರ್ ಇತರರಿದ್ದರು.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…