ಮಂಡ್ಯ

ಮಂಡ್ಯ | ಒಳ ಮೀಸಲಾತಿ ಜಾರಿಗೆ ಆಗ್ರಹ

ಮಂಡ್ಯ: ಒಳ ಮೀಸಲಾತಿ ಜಾರಿ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಕಾಂಗ್ರೆಸ್ ಸರ್ಕಾರ ಪೂರ್ವಾಗ್ರಹ ಪೀಡಿತ ಮನಸ್ಥಿತಿಯಿಂದಾಗಿ ಒಳಮೀಸಲಾತಿ ಜಾರಿ ಮಾಡಿಲ್ಲ ಎಂದು ಕ್ರಾಂತಿಕಾರಿ ಪಾದಯಾತ್ರೆಯ ರೂವಾರಿ ಬಿ.ಆರ್.ಬಾಸ್ಕರ್ ಪ್ರಸಾದ್ ಆಕ್ರೋಶ ವ್ಯಕ್ತ ಪಡಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳಮೀಸಲಾತಿ ಜಾರಿಗಾಗಿ 25 ವರ್ಷಗಳಿಂದ ನಿರಂತರ ಹೋರಾಟ ಮಾಡಿಕೊಂಡು ಬರಲಾಗುತ್ತಿದ್ದು, ಸದರಿ ಹೋರಾಟದಲ್ಲಿ ಹಲವು ಮಂದಿ ಪೊಲೀಸರ ಪ್ರತಿರೋಧದಿಂದ ಅಂಗವಿಕಲರಾಗಿರುವುದಲ್ಲದೇ ಜೀವ ಕಳೆದುಕೊಂಡಿದ್ದಾರೆ. ಮೀಸಲಾತಿ ಜಾರಿಗಾಗಿ ಇದೀಗ ಬೀದರ್‌ನಿಂದ ಕ್ರಾಂತಿಕಾರಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.

ಚುನಾವಣಾ ಪೂರ್ವದ ಪ್ರಣಾಳಿಕೆಯಲ್ಲಿ ಮೊದಲ ಅಧಿವೇಶನದಲ್ಲಿಯೇ ಮೀಸಲಾತಿ ಜಾರಿ ಮಾಡುವುದಾಗಿ ಹೇಳಿದ ರಾಜ್ಯ ಸರ್ಕಾರ ಇಂದು ಮಾತು ತಪ್ಪಿದೆ. ಅಲ್ಲದೇ ಸದಾಶಿವ ಆಯೋಗ ನೀಡಿದ ವರದಿಯಲ್ಲಿ ಇಲ್ಲ ಸಲ್ಲದ ನೆಪ ಹೇಳಿಕೊಂಡು ಮೀಸಲಾತಿ ಜಾರಿಗೊಳಿಸಲು ಮೀನಾಮೇಷ ಎಣಿಸುತ್ತಿದೆ ಎಂದು ದೂರಿದರು.

ದತ್ತಾಂಶದ ನೆಪ ಹೇಳುವ ರಾಜ್ಯ ಸರ್ಕಾರಕ್ಕೆ ಹವನೂರು, ಕಾಂತರಾಜು, ಸದಾಶಿವ, ಮಹದೇವಸ್ವಾಮಿ ಆಯೋಗಗಳ ವರದಿಯಿದ್ದರೂ ಮೀಸಲಾತಿ ಜಾರಿ ಮಾಡಲು ಮುಂದಾಗಿಲ್ಲ, ಇದೀಗ ನಾಗಮೋಹನ್‌ದಾಸ್ ಅವರ ಮಧ್ಯಂತರ ವರದಿಯ ಪರಿಶೀಲನೆಗೆ ಮುಂದಾಗಿದೆ. ಮಧ್ಯಂತರ ವರದಿ ಸಲ್ಲಿಸಿರುವ ನಾಗಮೋಹನ್‌ದಾಸ್ ಅವರು ಕಾಲಾವಕಾಶ ಕೇಳಿ ಸಲ್ಲಿಸಿರುವುದು ಸರಿಯಾದ ನಡೆಯಲ್ಲ ಎಂದು ಕಿಡಿಕಾರಿದರು.

2024ರ ಅಕ್ಟೋಬರ್‌ನಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೀಸಲಾತಿ ಜಾರಿಯಾಗುವವರಗೆ ಬಡ್ತಿ ನೀಡಬಾರದು ಎಂದು ನಿರ್ಣಯ ಕೈಗೊಂಡು, ಮುಂದಿನ ತಿಂಗಳು ನಡೆಯುವ ಸಂಪುಟ ಸಭೆಗೂ ಮುನ್ನ 70ಕ್ಕೂ ಹೆಚ್ಚು ಬಡ್ತಿ ಮಾಡಿ, ಉನ್ನತ ಹುದ್ದೆಗಳನ್ನು ಭರ್ತಿ ಮಾಡಿದ್ದಾರೆ. ಒಳಮೀಸಲಾತಿಗಾಗಿ ಕಾಯುತ್ತಿರುವ ಸಮುದಾಯಗಳಿಗೆ ಅದೇ ಸಮುದಾಯದವರೇ ಆದ ಸಚಿವ ಎಚ್.ಸಿ.ಮಹದೇವಪ್ಪ ಅನ್ಯಾಯ ಮಾಡುತ್ತಿದ್ದು, ಸಮುದಾಯದ ಪರ ನಿಲ್ಲದ ಸಮುದಾಯದ ಸಚಿವರುಗಳು ನಾಲಾಯಕ್ ಎಂದು ಕ್ರೋಧ ವ್ಯಕ್ತಪಡಿಸಿದರು.

ಗೋಷ್ಠಿಯಲ್ಲಿ ಸಿ.ಕೆ.ಪಾಪಯ್ಯ, ಸಿ.ಅಂದಾನಿ, ಬಿ.ಕೃಷ್ಣ, ಮಂಜು, ಶ್ರೀನವಾಸ್, ಶಿವಕುಮಾರ್ ಇತರರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಮಿಳುನಾಡಿನಲ್ಲಿ ಕಮಾಲ್‌ ಮಾಡಿದ ಟಿವಿಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆಗೆ ಟಿವಿಕೆ ಟಾಂಗ್‌ ಕೊಟ್ಟಿದೆ. ತಮಿಳುನಾಡಿನಲ್ಲಿ ಟಿವಿಕೆ 58ಕ್ಕೂ ಹೆಚ್ಚು…

12 mins ago

ಸಂಜೀವಿನಿ ಒಕ್ಕೂಟದಿಂದ ಜೇನು ಉತ್ಪಾದನೆ

ಕೃಷ್ಣ ಸಿದ್ದಾಪುರ ಸ್ವಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ: ಮಹಿಳೆಯರಿಂದ ಉತ್ಕೃಷ್ಟ ದರ್ಜೆಯ ಜೇನು ಸಂಗ್ರಹ ಸಿದ್ದಾಪುರ: ಪ್ರಧಾನ ಮಂತ್ರಿ…

18 mins ago

ತಮಿಳುನಾಡಿನಲ್ಲಿ ಡಿಎಂಕೆಗೆ ಆರಂಭಿಕ ಮುನ್ನಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ 71ಕ್ಕೂ ಹೆಚ್ಚು…

49 mins ago

ಸೊಳ್ಳೆಗಳ ಕಾಟ; ಸಾಂಕ್ರಾಮಿಕ ರೋಗದ ಭೀತಿ

ಪ್ರಶಾಂತ್ ಎಸ್. ಮನೆಗಳ ಮುಂದೆ ನಿಲ್ಲುವ ಚರಂಡಿ ನೀರು! ವಾರ್ಡ್ ಸಂಖ್ಯೆ ೬೫ರ ನಿವಾಸಿಗಳಿಗೆ ತಪ್ಪದ ಸಂಕಷ್ಟ  ಮೈಸೂರು: ಸಣ್ಣ…

50 mins ago

ಹಳ್ಳದಲ್ಲಿ ಸಿಗುವ ಕಲುಷಿತ ನೀರೇ ಇವರಿಗೆ ಆಸರೆ!

ಮಂಜು ಕೋಟೆ ಎಚ್.ಡಿ.ಕೋಟೆ ತಾಲ್ಲೂಕಿನ ಗೂಳೂರು ಹಾಡಿ ಜನರು ಪ್ರತಿನಿತ್ಯ ಎದುರಿಸುತ್ತಿರುವ ದಯನೀಯ ಸ್ಥಿತಿಯಿದು ಎಚ್.ಡಿ.ಕೋಟೆ: ರಾಜ್ಯದಲ್ಲಿ ಯಾವುದೇ ಸರ್ಕಾರ…

60 mins ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ

ಕೋಲ್ಕತ್ತಾ: ತೀವ್ರ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.…

1 hour ago