ಮಂಡ್ಯ

ಮಂಡ್ಯ | ಒಳ ಮೀಸಲಾತಿ ಜಾರಿಗೆ ಆಗ್ರಹ

ಮಂಡ್ಯ: ಒಳ ಮೀಸಲಾತಿ ಜಾರಿ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಕಾಂಗ್ರೆಸ್ ಸರ್ಕಾರ ಪೂರ್ವಾಗ್ರಹ ಪೀಡಿತ ಮನಸ್ಥಿತಿಯಿಂದಾಗಿ ಒಳಮೀಸಲಾತಿ ಜಾರಿ ಮಾಡಿಲ್ಲ ಎಂದು ಕ್ರಾಂತಿಕಾರಿ ಪಾದಯಾತ್ರೆಯ ರೂವಾರಿ ಬಿ.ಆರ್.ಬಾಸ್ಕರ್ ಪ್ರಸಾದ್ ಆಕ್ರೋಶ ವ್ಯಕ್ತ ಪಡಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳಮೀಸಲಾತಿ ಜಾರಿಗಾಗಿ 25 ವರ್ಷಗಳಿಂದ ನಿರಂತರ ಹೋರಾಟ ಮಾಡಿಕೊಂಡು ಬರಲಾಗುತ್ತಿದ್ದು, ಸದರಿ ಹೋರಾಟದಲ್ಲಿ ಹಲವು ಮಂದಿ ಪೊಲೀಸರ ಪ್ರತಿರೋಧದಿಂದ ಅಂಗವಿಕಲರಾಗಿರುವುದಲ್ಲದೇ ಜೀವ ಕಳೆದುಕೊಂಡಿದ್ದಾರೆ. ಮೀಸಲಾತಿ ಜಾರಿಗಾಗಿ ಇದೀಗ ಬೀದರ್‌ನಿಂದ ಕ್ರಾಂತಿಕಾರಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.

ಚುನಾವಣಾ ಪೂರ್ವದ ಪ್ರಣಾಳಿಕೆಯಲ್ಲಿ ಮೊದಲ ಅಧಿವೇಶನದಲ್ಲಿಯೇ ಮೀಸಲಾತಿ ಜಾರಿ ಮಾಡುವುದಾಗಿ ಹೇಳಿದ ರಾಜ್ಯ ಸರ್ಕಾರ ಇಂದು ಮಾತು ತಪ್ಪಿದೆ. ಅಲ್ಲದೇ ಸದಾಶಿವ ಆಯೋಗ ನೀಡಿದ ವರದಿಯಲ್ಲಿ ಇಲ್ಲ ಸಲ್ಲದ ನೆಪ ಹೇಳಿಕೊಂಡು ಮೀಸಲಾತಿ ಜಾರಿಗೊಳಿಸಲು ಮೀನಾಮೇಷ ಎಣಿಸುತ್ತಿದೆ ಎಂದು ದೂರಿದರು.

ದತ್ತಾಂಶದ ನೆಪ ಹೇಳುವ ರಾಜ್ಯ ಸರ್ಕಾರಕ್ಕೆ ಹವನೂರು, ಕಾಂತರಾಜು, ಸದಾಶಿವ, ಮಹದೇವಸ್ವಾಮಿ ಆಯೋಗಗಳ ವರದಿಯಿದ್ದರೂ ಮೀಸಲಾತಿ ಜಾರಿ ಮಾಡಲು ಮುಂದಾಗಿಲ್ಲ, ಇದೀಗ ನಾಗಮೋಹನ್‌ದಾಸ್ ಅವರ ಮಧ್ಯಂತರ ವರದಿಯ ಪರಿಶೀಲನೆಗೆ ಮುಂದಾಗಿದೆ. ಮಧ್ಯಂತರ ವರದಿ ಸಲ್ಲಿಸಿರುವ ನಾಗಮೋಹನ್‌ದಾಸ್ ಅವರು ಕಾಲಾವಕಾಶ ಕೇಳಿ ಸಲ್ಲಿಸಿರುವುದು ಸರಿಯಾದ ನಡೆಯಲ್ಲ ಎಂದು ಕಿಡಿಕಾರಿದರು.

2024ರ ಅಕ್ಟೋಬರ್‌ನಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೀಸಲಾತಿ ಜಾರಿಯಾಗುವವರಗೆ ಬಡ್ತಿ ನೀಡಬಾರದು ಎಂದು ನಿರ್ಣಯ ಕೈಗೊಂಡು, ಮುಂದಿನ ತಿಂಗಳು ನಡೆಯುವ ಸಂಪುಟ ಸಭೆಗೂ ಮುನ್ನ 70ಕ್ಕೂ ಹೆಚ್ಚು ಬಡ್ತಿ ಮಾಡಿ, ಉನ್ನತ ಹುದ್ದೆಗಳನ್ನು ಭರ್ತಿ ಮಾಡಿದ್ದಾರೆ. ಒಳಮೀಸಲಾತಿಗಾಗಿ ಕಾಯುತ್ತಿರುವ ಸಮುದಾಯಗಳಿಗೆ ಅದೇ ಸಮುದಾಯದವರೇ ಆದ ಸಚಿವ ಎಚ್.ಸಿ.ಮಹದೇವಪ್ಪ ಅನ್ಯಾಯ ಮಾಡುತ್ತಿದ್ದು, ಸಮುದಾಯದ ಪರ ನಿಲ್ಲದ ಸಮುದಾಯದ ಸಚಿವರುಗಳು ನಾಲಾಯಕ್ ಎಂದು ಕ್ರೋಧ ವ್ಯಕ್ತಪಡಿಸಿದರು.

ಗೋಷ್ಠಿಯಲ್ಲಿ ಸಿ.ಕೆ.ಪಾಪಯ್ಯ, ಸಿ.ಅಂದಾನಿ, ಬಿ.ಕೃಷ್ಣ, ಮಂಜು, ಶ್ರೀನವಾಸ್, ಶಿವಕುಮಾರ್ ಇತರರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

5 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

6 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 hours ago