ಮಂಡ್ಯ

ಮಂಡ್ಯ | ಜಿಲ್ಲೆಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಆರಂಭಿಸುವಂತೆ ಒತ್ತಾಯ

ಮಂಡ್ಯ : ಜಿಲ್ಲೆಯಲ್ಲಿ ಕೋಮು ಸೌಹಾರ್ಧತೆ ಕದಡುವಂತಹ ಕೃತ್ಯಗಳನ್ನು ನಿಯಂತ್ರಿಸಲು ಮಂಗಳೂರು ಮಾದರಿಯಲ್ಲಿ ‘ಕೋಮು ಹಿಂಸೆ ನಿಗ್ರಹ ಪಡೆ’ ಆರಂಭಿಸುವಂತೆ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಒತ್ತಾಯಿಸಿದರು.

ಕೆಲವು ವರ್ಷಗಳಿಂದ ಜಿಲ್ಲೆಯಲ್ಲಿ ಕೋಮು ಸಂಘರ್ಷಗಳಿಗೆ ಎಡೆ ಮಾಡಿಕೊಡುವ ಪ್ರಯೋಗಗಳು ನಡೆಯುತ್ತಿವೆ. ಬಿಜೆಪಿ, ಸಂಘ ಪರಿವಾರ ಹಾಗೂ ಹಿಂದೂ ಸಂಘಟನೆಗಳು ಕೋಮು ವಿಷಬೀಜ ಬಿತ್ತಿ, ಜಿಲ್ಲೆಯಲ್ಲಿ ನೆಲೆ ನಿಲ್ಲುವ ಪ್ರಯತ್ನ ನಡೆಸುತ್ತಿವೆ. ಇದಕ್ಕೆ ಸರ್ಕಾರ ಈಗಲೇ ಕಠಿಣ ಕ್ರಮ ಕೈಗೊಂಡು ಪೂರ್ಣ ವಿರಾಮ ಹಾಕಬೇಕಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮದ್ದೂರು ಕಲ್ಲು ತೂರಾಟ ಪ್ರಕರಣ ನಡೆದಿರುವುದು ಖಂಡನಾರ್ಹ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಘಟನೆಯ ನಂತರ ಕರ್ಫ್ಯೂ ಇದ್ದರೂ ಕಾನೂನು ಮೀರಿ ಪ್ರತಿಭಟನೆ ನಡೆಸಿದವರು ಹಾಗೂ ರಾಮ್‌ರಹೀಂ ನಗರದ ಮಸೀದಿಗೆ ನುಗ್ಗುತ್ತೇವೆ ಎಂದವರನ್ನು ಬಂಽಸಬೇಕು ಎಂದು ಆಗ್ರಹಿಸಿದರು.

ಈ ಬಾರಿ ನಾಗಮಂಗಲದಲ್ಲಿ ಕ್ರಮಕೈಗೊಂಡ ರೀತಿ ಎಚ್ಚರ ವಹಿಸಿದ್ದರೆ, ಮದ್ದೂರಲ್ಲಿ ಗಲಭೆ ನಡೆಯುತ್ತಿರಲಿಲ್ಲ. ಜಿಲ್ಲಾ ಉಸ್ತುವಾರಿ ಮಂತ್ರಿ, ಕ್ಷೇತ್ರದ ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳು ಘಟನೆಯ ಹೊಣೆ ಹೊರಬೇಕು ಎಂದು ಹೇಳಿದರು.

ರಾಜ್ಯಲ್ಲಿ ಕಾಂಗ್ರೆಸ್ ಒಂದು ಸಮುದಾಯವನ್ನು ಓಲೈಸುವ ವಿಕೃತ ಮನಸ್ಥಿತಿಯನ್ನು ಹೊಂದಿದೆ. ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜಿ.ಹಳ್ಳಿ, ಮೈಸೂರಿನ ಉದಯಗಿರಿ ಗಲಭೆ ಪ್ರಕರಣಗಳಲ್ಲಿ ಬಂಧಿತರ ಮೇಲಿನ ಪ್ರಕರಣಗಳನ್ನು ಖುಲಾಸೆ ಮಾಡಿರುವುದು ಸರಿಯಲ್ಲ. ಒಂದು ಸಮುದಾಯದ ಬಗ್ಗೆ ಮೃದು ಧೋರಣೆ ಅನುಸರಿಸುತ್ತಿರುವುದು ರಾಜ್ಯದಲ್ಲಿ ಕುಕೃತ್ಯಗಳಿಗೆ ಪ್ರಚೋದನೆ ನೀಡಿದಂತಾಗಿದೆ ಎಂದು ಖಂಡಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಎಸ್.ಶಿವಶಂಕರ್, ಮದ್ದೂರು ತಾಲ್ಲೂಕು ಅಧ್ಯಕ್ಷ ಶಂಕರ್, ಮಳವಳ್ಳಿ ತಾಲ್ಲೂಕು ಅಧ್ಯಕ್ಷ ವಿ.ನಂಜುಂಡಸ್ವಾಮಿ, ಬಸವರಾಜು, ದೇವರಾಜು ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

7 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

21 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

21 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

21 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

21 hours ago