ಮಂಡ್ಯ: ಮಿಮ್ಸ್ನ ಪ್ರಭಾರ ನಿರ್ದೇಶಕ ಡಾ.ನರಸಿಂಹಸ್ವಾಮಿ ಅವರು ಕರ್ತವ್ಯ ವೇಳೆಯಲ್ಲಿ ಅಧಿಕಾರ ದುರುಪಯೋಗ, ಕರ್ತವ್ಯಲೋಪ ಎಸಗಿದ್ದು, ಅವರನ್ನು ತನಿಖೆಗೆ ಒಳಪಡಿಸಿ ಸೇವೆಯಿಂದ ವಜಾಗೊಳಿಸಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ವಾರಿಯರ್ಸ್ನ ರಾಜ್ಯಾಧ್ಯಕ್ಷ ಹೆಚ್.ಜಿ.ಗಂಗರಾಜು ಒತ್ತಾಯಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಭಾರ ನಿರ್ದೇಶಕರಾಗಿ ಮಿಮ್ಸ್ನಲ್ಲಿ ಅಧಿಕಾರ ವಹಿಸಿರುವ ಡಾ.ನರಸಿಂಹಸ್ವಾಮಿ ಅಧಿಕಾರ ಬಳಸಿಕೊಂಡು ಸರಿಯಾದ ಸಮಯಕ್ಕೆ ಕಛೇರಿಗೆ ಆಗಮಿಸದೇ ಲೋಪವೆಸಗುತ್ತಿದ್ದಾರೆ. ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರು ಆಗಿರುವ ಇವರ ನಿರ್ಲಕ್ಷ್ಯತನದಿಂದಾಗಿ ವ್ಯಕ್ತಿಯೊಬ್ಬ ಸದರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿರುವ ಘಟನೆಯೂ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು.
ಮಿಮ್ಸ್ ಆವರಣದಲ್ಲಿಯೇ ಅಧಿಕಾರಿಗಳಿಗೆ ತಂಗಲು ವಸತಿ ಗೃಹ ನಿರ್ಮಿಸಲಾಗಿದ್ದು, ಇದಕ್ಕೆ ೨೫ ಸಾವಿರ ರೂ.ಗಳಿಗೂ ಹೆಚ್ಚು ಪಾವತಿಮಾಡುವುದನ್ನು ತಪ್ಪಿಸಲು ವಸತಿಗೃಹದಲ್ಲಿ ವಾಸವಿರದೇ ಮೈಸೂರಿನಿಂದ ಮಂಡ್ಯಕ್ಕೆ ಬರುವುದರಿಂದಾಗಿ ಕರ್ತವ್ಯ ಲೋಪವಾಗುತ್ತಿದೆ ಎಂದು ದೂರಿದರು.
ಜಿಲ್ಲಾಡಳಿತ ಕೂಡಲೇ ಇವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ತನಿಖೆ ನಡೆಸಿ, ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಕರ್ನಾಟಕ ಸಮ ಸಮಾಜದ ರಾಜ್ಯಾಧ್ಯಕ್ಷ ಹೆಚ್.ಎನ್.ನರಸಿಂಹಮೂರ್ತಿ, ಭಾರತೀಯ ಬುದ್ಧ ಫೌಂಡೇಷನ್ನ ಜೆ.ರಾಮಯ್ಯ, ಸಮಸಮಾಜದ ಸದಸ್ಯರಾದ ಚೌದರಿ, ಲೋಕೇಶ್, ಪ್ರದೀಪ್, ಭಾಸ್ಕರ್ ಇದ್ದರು.
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…