Mysore
21
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಮಂಡ್ಯ | ಮೈಷುಗರ್‌ ಕಾರ್ಖಾನೆಗೆ ಜಿಲ್ಲಾಧಿಕಾರಿ ಭೇಟಿ ; ಪರಿಶೀಲನೆ

ಮಂಡ್ಯ : ಮೈಷುಗರ್ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸಿ.ಡಿ. ಗಂಗಾಧರ್ ಹಾಗೂ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು(ಏ.11)‌ ಮೈ ಷುಗರ್ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕೆಲಸ ಪ್ರಾರಂಭಿಸಲು ಕಾರ್ಖಾನೆಯಲ್ಲಿ ದುರಸ್ತಿಯಲ್ಲಿರುವ ಯಂತ್ರಗಳನ್ನು ಸರಿಪಡಿಸಿ ರೈತರಿಗೆ ತೊಂದರೆಯಾಗದಂತೆ ಕೆಲಸಗಳು ಆರಂಭವಾಗಬೇಕು ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ಖುದ್ದು ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಸಭೆ ನಡೆಸಿ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.

Tags:
error: Content is protected !!