dc mandya
ಮಳವಳ್ಳಿ: ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ, ಸಾರ್ವಜನಿಕರಿಗೆ ಸ್ಪಂದಿಸದ ಕಂದಾಯ ಅಧಿಕಾರಿಗಳ ಮೇಲೆ ಕ್ರಮಕ್ಕೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಡಾ.ಕುಮಾರ ಅವರು ಕಚೇರಿಗೆ ಬರುತ್ತಿದ್ದಂತೆ ಬಾಗಿಲ ಬಳಿಯಲ್ಲೇ ಸಾರ್ವಜನಿಕರು ನಿಂತು ಸಂತಸ ವ್ಯಕ್ತಪಡಿಸಿ, ತಮ್ಮ ದೂರುಗಳು, ಸಮಸ್ಯೆ ಬಗ್ಗೆ ಹೇಳಿಕೊಂಡರು. ದೂರುಗಳನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಒಂದೊಂದು ಅರ್ಜಿಗೂ ಸಂಬಂಧಪಟ್ಟ ಸಿಬ್ಬಂದಿಯನ್ನು ಕರೆಸಿ, ಸ್ಥಳದಲ್ಲೇ ಸಮಸ್ಯೆ ಬಗೆಹರಿಸಿಕೊಡಬೇಕೆಂದು ಖಡಕ್ ಎಚ್ಚರಿಕೆ ನೀಡಿದರು.
ಕಂದಾಯ ಅಧಿಕಾರಿ ಅಮಾನತ್ತಿಗೆ ಸೂಚನೆ: ಜಮೀನಿಗೆ ಖಾತೆ ಮಾಡಲು ನ್ಯಾಯಾಲಯದಲ್ಲಿ ತಡೆ ಇದೆ ಎಂದು ಖಾತೆ ಮಾಡಿಕೊಡಲು ನಿರಾಕರಿಸಿದ್ದ ಕಂದಾಯ ಅಧಿಕಾರಿಯ ಮೇಲೆ ಗರಂ ಅದ ಜಿಲ್ಲಾಧಿಕಾರಿಗಳು, ತಡೆ ನೀಡಿರುವ ಸರ್ವೆ ನಂಬರ್ ಬೇರೆ ಇದೆ. ಆದರೆ, ಇವರ ಸರ್ವೆ ನಂಬರಿಗೆ ತಡೆ ಇದೆ ಎಂದು ಇವರಿಗೆ ಕಡಿತ ವಿಲೆ ಏಕೆ ? ನಿಮ್ಮ ಉದ್ದೇಶವೇನು? ಎಂದು ಪ್ರಶ್ನಿಸಿದ ಅವರು, ನಿಮ್ಮ ತಪ್ಪಿನಿಂದ ಜನರು ಅಲೆದಾಡುವಂತಾಗಿದೆ ಎಂದು ತಹಸಿಲ್ದಾರ್ ಅವರನ್ನು ಕರೆದು ಇವರನ್ನು ಅಮಾನತ್ತು ಮಾಡಲು ಕ್ರಮವಹಿಸಬೇಕು ಎಂದು ಖಡಕ್ ಸೂಚನೆ ನೀಡಿದರು.
ನಂತರ ತಹಸಿಲ್ದಾರ್ ಕಚೇರಿಗೆ ತೆರಳಿ ಪ್ರತಿಯೊಬ್ಬರಿಂದ ದೂರುಗಳನ್ನು ಸ್ವೀಕರಿಸಿ, ಜನರಿಗೆ ತೊಂದರೆಯಾಗಬಾರದು, ತಹಸಿಲ್ದಾರ್ ಅವರೆ ಈ ದೂರುಗಳಿಗೆ ಈ ಕೂಡಲೇ ಕ್ರಮಕೈಗೊಂಡು ಜನರಿಗೆ ಉತ್ತಮ ಸೇವೆ ನೀಡಬೇಕು ಎಂದು ಸೂಚಿಸಿದರು.
ಮುಜರಾಯಿ ದೇವಸ್ಥಾನ ಮುಸ್ಲಿಂ ಹೆಸರಿನಲ್ಲಿ: ಮುಜರಾಯಿ ದೇವಸ್ಥಾನದ ಜಾಗ ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿರುವುದರ ಬಗ್ಗೆ ಗಮನಕ್ಕೆ ತಂದಾಗ, ತಹಸಿಲ್ದಾರ್ ಅವರಿಗೆ ಕೂಡಲೇ ದಾಖಲಾತಿ ನೋಡಿ ಸಮಸ್ಯೆ ಬಗೆಹರಿಸಬೇಕು ಎಂದು ಸೂಚಿಸಿದರು.
12 ವರ್ಷಗಳ ಅಲೆದಾಟ: 1962 ಲ್ಲಿ ಸರ್ವೆ ಇಲಾಖೆ ಅಧಿಕಾರಿಗಳಿಂದ ಅಗಿರುವ ಲೋಪ ಸರಿಪಡಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಸುಮಾರು 2013ರಿಂದ ಮನವಿ ನೀಡುತ್ತಲೆ ಇದ್ದೇವೆ, ದಯವಿಟ್ಟು ನ್ಯಾಯ ಒದಗಿಸಿಕೊಡಬೇಕು ಎಂದು ಮಹೇಂದ್ರಸ್ವಾಮಿ, ಮಹದೇವಪ್ಪ ಮನವಿ ಮಾಡಿದರು.
ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ಮುಖ್ಯಾಧಿಕಾರಿ ನಾಗರತ್ನಮ್ಮ, ತಹಸಿಲ್ದಾರ್ ಲೋಕೇಶ್, ಕಂದಾಯ ಅಧಿಕಾರಿಗಳು ಭಾಗವಹಿಸಿದ್ದರು.
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…