ಮಂಡ್ಯ

ಜಿಲ್ಲಾಧಿಕಾರಿ ದಿಢೀರ್‌ ಭೇಟಿ : ಸಾರ್ವಜನಿಕರಿಗೆ ಸ್ಪಂದಿಸದ ಅಧಿಕಾರಿಗಳಿಗೆ ಎಚ್ಚರಿಕೆ

ಮಳವಳ್ಳಿ: ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ, ಸಾರ್ವಜನಿಕರಿಗೆ ಸ್ಪಂದಿಸದ ಕಂದಾಯ ಅಧಿಕಾರಿಗಳ ಮೇಲೆ ಕ್ರಮಕ್ಕೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಡಾ.ಕುಮಾರ ಅವರು ಕಚೇರಿಗೆ ಬರುತ್ತಿದ್ದಂತೆ ಬಾಗಿಲ ಬಳಿಯಲ್ಲೇ ಸಾರ್ವಜನಿಕರು ನಿಂತು ಸಂತಸ ವ್ಯಕ್ತಪಡಿಸಿ, ತಮ್ಮ ದೂರುಗಳು, ಸಮಸ್ಯೆ ಬಗ್ಗೆ ಹೇಳಿಕೊಂಡರು. ದೂರುಗಳನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಒಂದೊಂದು ಅರ್ಜಿಗೂ ಸಂಬಂಧಪಟ್ಟ ಸಿಬ್ಬಂದಿಯನ್ನು ಕರೆಸಿ, ಸ್ಥಳದಲ್ಲೇ ಸಮಸ್ಯೆ ಬಗೆಹರಿಸಿಕೊಡಬೇಕೆಂದು ಖಡಕ್ ಎಚ್ಚರಿಕೆ ನೀಡಿದರು.

ಕಂದಾಯ ಅಧಿಕಾರಿ ಅಮಾನತ್ತಿಗೆ ಸೂಚನೆ: ಜಮೀನಿಗೆ ಖಾತೆ ಮಾಡಲು ನ್ಯಾಯಾಲಯದಲ್ಲಿ ತಡೆ ಇದೆ ಎಂದು ಖಾತೆ ಮಾಡಿಕೊಡಲು ನಿರಾಕರಿಸಿದ್ದ ಕಂದಾಯ ಅಧಿಕಾರಿಯ ಮೇಲೆ ಗರಂ ಅದ ಜಿಲ್ಲಾಧಿಕಾರಿಗಳು, ತಡೆ ನೀಡಿರುವ ಸರ್ವೆ ನಂಬರ್ ಬೇರೆ ಇದೆ. ಆದರೆ, ಇವರ ಸರ್ವೆ ನಂಬರಿಗೆ ತಡೆ ಇದೆ ಎಂದು ಇವರಿಗೆ ಕಡಿತ ವಿಲೆ ಏಕೆ ? ನಿಮ್ಮ ಉದ್ದೇಶವೇನು? ಎಂದು ಪ್ರಶ್ನಿಸಿದ ಅವರು, ನಿಮ್ಮ ತಪ್ಪಿನಿಂದ ಜನರು ಅಲೆದಾಡುವಂತಾಗಿದೆ ಎಂದು ತಹಸಿಲ್ದಾರ್ ಅವರನ್ನು ಕರೆದು ಇವರನ್ನು ಅಮಾನತ್ತು ಮಾಡಲು ಕ್ರಮವಹಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ನಂತರ ತಹಸಿಲ್ದಾರ್ ಕಚೇರಿಗೆ ತೆರಳಿ ಪ್ರತಿಯೊಬ್ಬರಿಂದ ದೂರುಗಳನ್ನು ಸ್ವೀಕರಿಸಿ, ಜನರಿಗೆ ತೊಂದರೆಯಾಗಬಾರದು, ತಹಸಿಲ್ದಾರ್ ಅವರೆ ಈ ದೂರುಗಳಿಗೆ ಈ ಕೂಡಲೇ ಕ್ರಮಕೈಗೊಂಡು ಜನರಿಗೆ ಉತ್ತಮ ಸೇವೆ ನೀಡಬೇಕು ಎಂದು ಸೂಚಿಸಿದರು.

ಮುಜರಾಯಿ ದೇವಸ್ಥಾನ ಮುಸ್ಲಿಂ ಹೆಸರಿನಲ್ಲಿ: ಮುಜರಾಯಿ ದೇವಸ್ಥಾನದ ಜಾಗ ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿರುವುದರ ಬಗ್ಗೆ ಗಮನಕ್ಕೆ ತಂದಾಗ, ತಹಸಿಲ್ದಾರ್ ಅವರಿಗೆ ಕೂಡಲೇ ದಾಖಲಾತಿ ನೋಡಿ ಸಮಸ್ಯೆ ಬಗೆಹರಿಸಬೇಕು ಎಂದು ಸೂಚಿಸಿದರು.

12 ವರ್ಷಗಳ ಅಲೆದಾಟ: 1962 ಲ್ಲಿ ಸರ್ವೆ ಇಲಾಖೆ ಅಧಿಕಾರಿಗಳಿಂದ ಅಗಿರುವ ಲೋಪ ಸರಿಪಡಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಸುಮಾರು 2013ರಿಂದ ಮನವಿ ನೀಡುತ್ತಲೆ ಇದ್ದೇವೆ, ದಯವಿಟ್ಟು ನ್ಯಾಯ ಒದಗಿಸಿಕೊಡಬೇಕು ಎಂದು ಮಹೇಂದ್ರಸ್ವಾಮಿ, ಮಹದೇವಪ್ಪ ಮನವಿ ಮಾಡಿದರು.

ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ಮುಖ್ಯಾಧಿಕಾರಿ ನಾಗರತ್ನಮ್ಮ, ತಹಸಿಲ್ದಾರ್ ಲೋಕೇಶ್, ಕಂದಾಯ ಅಧಿಕಾರಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

35 mins ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

49 mins ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

3 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

5 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

5 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

5 hours ago