ಮಂಡ್ಯ

ಜಿಲ್ಲಾಧಿಕಾರಿ ದಿಢೀರ್‌ ಭೇಟಿ : ಸಾರ್ವಜನಿಕರಿಗೆ ಸ್ಪಂದಿಸದ ಅಧಿಕಾರಿಗಳಿಗೆ ಎಚ್ಚರಿಕೆ

ಮಳವಳ್ಳಿ: ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ, ಸಾರ್ವಜನಿಕರಿಗೆ ಸ್ಪಂದಿಸದ ಕಂದಾಯ ಅಧಿಕಾರಿಗಳ ಮೇಲೆ ಕ್ರಮಕ್ಕೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಡಾ.ಕುಮಾರ ಅವರು ಕಚೇರಿಗೆ ಬರುತ್ತಿದ್ದಂತೆ ಬಾಗಿಲ ಬಳಿಯಲ್ಲೇ ಸಾರ್ವಜನಿಕರು ನಿಂತು ಸಂತಸ ವ್ಯಕ್ತಪಡಿಸಿ, ತಮ್ಮ ದೂರುಗಳು, ಸಮಸ್ಯೆ ಬಗ್ಗೆ ಹೇಳಿಕೊಂಡರು. ದೂರುಗಳನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಒಂದೊಂದು ಅರ್ಜಿಗೂ ಸಂಬಂಧಪಟ್ಟ ಸಿಬ್ಬಂದಿಯನ್ನು ಕರೆಸಿ, ಸ್ಥಳದಲ್ಲೇ ಸಮಸ್ಯೆ ಬಗೆಹರಿಸಿಕೊಡಬೇಕೆಂದು ಖಡಕ್ ಎಚ್ಚರಿಕೆ ನೀಡಿದರು.

ಕಂದಾಯ ಅಧಿಕಾರಿ ಅಮಾನತ್ತಿಗೆ ಸೂಚನೆ: ಜಮೀನಿಗೆ ಖಾತೆ ಮಾಡಲು ನ್ಯಾಯಾಲಯದಲ್ಲಿ ತಡೆ ಇದೆ ಎಂದು ಖಾತೆ ಮಾಡಿಕೊಡಲು ನಿರಾಕರಿಸಿದ್ದ ಕಂದಾಯ ಅಧಿಕಾರಿಯ ಮೇಲೆ ಗರಂ ಅದ ಜಿಲ್ಲಾಧಿಕಾರಿಗಳು, ತಡೆ ನೀಡಿರುವ ಸರ್ವೆ ನಂಬರ್ ಬೇರೆ ಇದೆ. ಆದರೆ, ಇವರ ಸರ್ವೆ ನಂಬರಿಗೆ ತಡೆ ಇದೆ ಎಂದು ಇವರಿಗೆ ಕಡಿತ ವಿಲೆ ಏಕೆ ? ನಿಮ್ಮ ಉದ್ದೇಶವೇನು? ಎಂದು ಪ್ರಶ್ನಿಸಿದ ಅವರು, ನಿಮ್ಮ ತಪ್ಪಿನಿಂದ ಜನರು ಅಲೆದಾಡುವಂತಾಗಿದೆ ಎಂದು ತಹಸಿಲ್ದಾರ್ ಅವರನ್ನು ಕರೆದು ಇವರನ್ನು ಅಮಾನತ್ತು ಮಾಡಲು ಕ್ರಮವಹಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ನಂತರ ತಹಸಿಲ್ದಾರ್ ಕಚೇರಿಗೆ ತೆರಳಿ ಪ್ರತಿಯೊಬ್ಬರಿಂದ ದೂರುಗಳನ್ನು ಸ್ವೀಕರಿಸಿ, ಜನರಿಗೆ ತೊಂದರೆಯಾಗಬಾರದು, ತಹಸಿಲ್ದಾರ್ ಅವರೆ ಈ ದೂರುಗಳಿಗೆ ಈ ಕೂಡಲೇ ಕ್ರಮಕೈಗೊಂಡು ಜನರಿಗೆ ಉತ್ತಮ ಸೇವೆ ನೀಡಬೇಕು ಎಂದು ಸೂಚಿಸಿದರು.

ಮುಜರಾಯಿ ದೇವಸ್ಥಾನ ಮುಸ್ಲಿಂ ಹೆಸರಿನಲ್ಲಿ: ಮುಜರಾಯಿ ದೇವಸ್ಥಾನದ ಜಾಗ ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿರುವುದರ ಬಗ್ಗೆ ಗಮನಕ್ಕೆ ತಂದಾಗ, ತಹಸಿಲ್ದಾರ್ ಅವರಿಗೆ ಕೂಡಲೇ ದಾಖಲಾತಿ ನೋಡಿ ಸಮಸ್ಯೆ ಬಗೆಹರಿಸಬೇಕು ಎಂದು ಸೂಚಿಸಿದರು.

12 ವರ್ಷಗಳ ಅಲೆದಾಟ: 1962 ಲ್ಲಿ ಸರ್ವೆ ಇಲಾಖೆ ಅಧಿಕಾರಿಗಳಿಂದ ಅಗಿರುವ ಲೋಪ ಸರಿಪಡಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಸುಮಾರು 2013ರಿಂದ ಮನವಿ ನೀಡುತ್ತಲೆ ಇದ್ದೇವೆ, ದಯವಿಟ್ಟು ನ್ಯಾಯ ಒದಗಿಸಿಕೊಡಬೇಕು ಎಂದು ಮಹೇಂದ್ರಸ್ವಾಮಿ, ಮಹದೇವಪ್ಪ ಮನವಿ ಮಾಡಿದರು.

ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ಮುಖ್ಯಾಧಿಕಾರಿ ನಾಗರತ್ನಮ್ಮ, ತಹಸಿಲ್ದಾರ್ ಲೋಕೇಶ್, ಕಂದಾಯ ಅಧಿಕಾರಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

11 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

12 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

16 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

17 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

18 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

19 hours ago