ಮಂಡ್ಯ

ಜಿಲ್ಲಾಧಿಕಾರಿ ದಿಢೀರ್‌ ಭೇಟಿ : ಸಾರ್ವಜನಿಕರಿಗೆ ಸ್ಪಂದಿಸದ ಅಧಿಕಾರಿಗಳಿಗೆ ಎಚ್ಚರಿಕೆ

ಮಳವಳ್ಳಿ: ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ, ಸಾರ್ವಜನಿಕರಿಗೆ ಸ್ಪಂದಿಸದ ಕಂದಾಯ ಅಧಿಕಾರಿಗಳ ಮೇಲೆ ಕ್ರಮಕ್ಕೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಡಾ.ಕುಮಾರ ಅವರು ಕಚೇರಿಗೆ ಬರುತ್ತಿದ್ದಂತೆ ಬಾಗಿಲ ಬಳಿಯಲ್ಲೇ ಸಾರ್ವಜನಿಕರು ನಿಂತು ಸಂತಸ ವ್ಯಕ್ತಪಡಿಸಿ, ತಮ್ಮ ದೂರುಗಳು, ಸಮಸ್ಯೆ ಬಗ್ಗೆ ಹೇಳಿಕೊಂಡರು. ದೂರುಗಳನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಒಂದೊಂದು ಅರ್ಜಿಗೂ ಸಂಬಂಧಪಟ್ಟ ಸಿಬ್ಬಂದಿಯನ್ನು ಕರೆಸಿ, ಸ್ಥಳದಲ್ಲೇ ಸಮಸ್ಯೆ ಬಗೆಹರಿಸಿಕೊಡಬೇಕೆಂದು ಖಡಕ್ ಎಚ್ಚರಿಕೆ ನೀಡಿದರು.

ಕಂದಾಯ ಅಧಿಕಾರಿ ಅಮಾನತ್ತಿಗೆ ಸೂಚನೆ: ಜಮೀನಿಗೆ ಖಾತೆ ಮಾಡಲು ನ್ಯಾಯಾಲಯದಲ್ಲಿ ತಡೆ ಇದೆ ಎಂದು ಖಾತೆ ಮಾಡಿಕೊಡಲು ನಿರಾಕರಿಸಿದ್ದ ಕಂದಾಯ ಅಧಿಕಾರಿಯ ಮೇಲೆ ಗರಂ ಅದ ಜಿಲ್ಲಾಧಿಕಾರಿಗಳು, ತಡೆ ನೀಡಿರುವ ಸರ್ವೆ ನಂಬರ್ ಬೇರೆ ಇದೆ. ಆದರೆ, ಇವರ ಸರ್ವೆ ನಂಬರಿಗೆ ತಡೆ ಇದೆ ಎಂದು ಇವರಿಗೆ ಕಡಿತ ವಿಲೆ ಏಕೆ ? ನಿಮ್ಮ ಉದ್ದೇಶವೇನು? ಎಂದು ಪ್ರಶ್ನಿಸಿದ ಅವರು, ನಿಮ್ಮ ತಪ್ಪಿನಿಂದ ಜನರು ಅಲೆದಾಡುವಂತಾಗಿದೆ ಎಂದು ತಹಸಿಲ್ದಾರ್ ಅವರನ್ನು ಕರೆದು ಇವರನ್ನು ಅಮಾನತ್ತು ಮಾಡಲು ಕ್ರಮವಹಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ನಂತರ ತಹಸಿಲ್ದಾರ್ ಕಚೇರಿಗೆ ತೆರಳಿ ಪ್ರತಿಯೊಬ್ಬರಿಂದ ದೂರುಗಳನ್ನು ಸ್ವೀಕರಿಸಿ, ಜನರಿಗೆ ತೊಂದರೆಯಾಗಬಾರದು, ತಹಸಿಲ್ದಾರ್ ಅವರೆ ಈ ದೂರುಗಳಿಗೆ ಈ ಕೂಡಲೇ ಕ್ರಮಕೈಗೊಂಡು ಜನರಿಗೆ ಉತ್ತಮ ಸೇವೆ ನೀಡಬೇಕು ಎಂದು ಸೂಚಿಸಿದರು.

ಮುಜರಾಯಿ ದೇವಸ್ಥಾನ ಮುಸ್ಲಿಂ ಹೆಸರಿನಲ್ಲಿ: ಮುಜರಾಯಿ ದೇವಸ್ಥಾನದ ಜಾಗ ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿರುವುದರ ಬಗ್ಗೆ ಗಮನಕ್ಕೆ ತಂದಾಗ, ತಹಸಿಲ್ದಾರ್ ಅವರಿಗೆ ಕೂಡಲೇ ದಾಖಲಾತಿ ನೋಡಿ ಸಮಸ್ಯೆ ಬಗೆಹರಿಸಬೇಕು ಎಂದು ಸೂಚಿಸಿದರು.

12 ವರ್ಷಗಳ ಅಲೆದಾಟ: 1962 ಲ್ಲಿ ಸರ್ವೆ ಇಲಾಖೆ ಅಧಿಕಾರಿಗಳಿಂದ ಅಗಿರುವ ಲೋಪ ಸರಿಪಡಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಸುಮಾರು 2013ರಿಂದ ಮನವಿ ನೀಡುತ್ತಲೆ ಇದ್ದೇವೆ, ದಯವಿಟ್ಟು ನ್ಯಾಯ ಒದಗಿಸಿಕೊಡಬೇಕು ಎಂದು ಮಹೇಂದ್ರಸ್ವಾಮಿ, ಮಹದೇವಪ್ಪ ಮನವಿ ಮಾಡಿದರು.

ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ಮುಖ್ಯಾಧಿಕಾರಿ ನಾಗರತ್ನಮ್ಮ, ತಹಸಿಲ್ದಾರ್ ಲೋಕೇಶ್, ಕಂದಾಯ ಅಧಿಕಾರಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

11 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

20 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago