ಮಂಡ್ಯ

ಮಂಡ್ಯ| ಅ.23ರಂದು ಜಿಲ್ಲಾ ಮಟ್ಟದ ಯುವಜನೋತ್ಸವ

ಮಂಡ್ಯ:  2024-25 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 23 ರಂದು ಮಂಡ್ಯ ನಗರದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾಮಟ್ಟದ ಯುವಜನೋತ್ಸವ ಸ್ಫರ್ಧೆಗಳಾದ ಜನಪದ ನೃತ್ಯ, ಜನಪದ ಗೀತೆ, ಕವಿತೆ ಬರೆಯುವುದು, ಕಥೆ ಬರೆಯುವುದು, ಚಿತ್ರಕಲೆ ಮುಂತಾದವುಗಳನ್ನು ಆಯೋಜಿಸಲಾಗಿದ್ದು, ಜಿಲ್ಲೆಯಲ್ಲಿನ ಎಲ್ಲಾ ಆಸಕ್ತ ಯುವಕ/ಯುವತಿಯರು, ಯುವಕ ಯುವತಿ ಮಂಡಳಿಗಳು, ಸಂಘ ಸಂಸ್ಥೆಗಳು ಅಕ್ಟೋಬರ್ 23 ರಂದು ನಗರದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಕಡ್ಡಾಯವಾಗಿ ವಾಸಸ್ಥಳ ಮತ್ತು ವಯಸ್ಸಿನ ಧೃಡೀಕರಣ ಪತ್ರದೊಂದಿಗೆ ಆಗಮಿಸಿ ಹೆಸರು ನೋಂದಾಯಿಸಿಕೊಂಡು ಶಿಸ್ತು, ಬದ್ದತೆಗಳಿಂದ ಭಾಗವಹಿಸುವುದು.

ಎಲ್ಲಾ ಸ್ಫರ್ಧೆಗಳಲ್ಲಿ ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ಸ್ಫರ್ಧೆಗಳಲ್ಲಿ ವಿಜೇತರಾದವರು ರಾಜ್ಯಮಟ್ಟದಲ್ಲಿ ಹಾಗೂ ರಾಜ್ಯಮಟ್ಟದಲ್ಲಿ ವಿಜೇತರಾದವರು ರಾಷ್ಟಮಟ್ಟದಲ್ಲಿ ಪಾಲ್ಗೊಳ್ಳುವ ಅವಕಾಶವಿರುತ್ತದೆ. ವಿಜೇತ ಸ್ಪರ್ಧಿಗಳು ನಗದು ಬಹುಮಾನಕ್ಕಾಗಿ ಬ್ಯಾಂಕ್ ಪಾಸ್ ಪುಸ್ತಕದ ಮೊದಲ ಪುಟದ ಜೆರಾಕ್ಸ್ ಪ್ರತಿಯನ್ನು ನೀಡುವುದು ಕಡ್ಡಾಯವಾಗಿರುತ್ತದೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

10 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

11 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

12 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

12 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

12 hours ago