ಮಂಡ್ಯ : ಕೇಂದ್ರ ಸಚಿವರಾದ ಬಳಿಕ ಎಚ್ ಡಿ ಕುಮಾರಸ್ವಾಮಿ ಅವರು ಮೊದಲ ಬಾರಿ ಮಂಡ್ಯ ಜಿಲ್ಲೆಯಲ್ಲಿ ಜನತಾ ದರ್ಶನ ನಡೆಸಿದರು. ಆದರೆ ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಅಧಿಕಾರಿಗಳು ಗೈರಾಗಿದ್ದರು. ಇದರಿಂದ ಮುಜುಗರಕ್ಕೆ ಒಳಗಾದ ಎಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ವಿರುದ್ಧ ಕಿಡಿಕಾರಿದ ಎಚ್ಡಿಕೆ, ಜಿಲ್ಲಾಧಿಕಾರಿಗಳಿಗೆ ಕಾರ್ಯಕ್ರಮಕ್ಕೆ ಹಾಜರಾಗಲು ನಾನು ಮನವಿ ಮಾಡಿದ್ದೆ. ಜನತಾ ದರ್ಶನ ಕಾರ್ಯಕ್ರಮಕ್ಕೆ ಹಾಜರಾಗದಂತೆ ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ಸುತ್ತೋಲೆ ಹೊರಡಿಸಿದೆ. ಕ್ಯಾಬಿನೆಟ್ ನಲ್ಲಿ ಸಿಎಂ, ಸಚಿವರಿಗಷ್ಟೇ ಮಾತ್ರ ಜನತಾ ದರ್ಶನ ಮಾಡುವ ಅಧಿಕಾರವಿದೆ ಎಂದು ಸುತ್ತೋಲೆ ಹೊರಡಿಸಿದೆ. ಅಧಿಕಾರಿಗಳಿಗೂ ಕೂಡ ಈಗಾಗಲೇ ಈ ಕುರಿತು ಸೂಚನೆ ನೀಡಲಾಗಿದೆ. ಇದು ಸರ್ಕಾರದ ಸಣ್ಣತನ ತೋರಿಸುತ್ತದೆ ಎಂದು ಸಿಟ್ಟು ಹೊರಹಾಕಿದರು.
ಅಲ್ಲದೆ ಡಿ.ಕೆ ಸುರೇಶ್ ಸಂಸದರಾಗಿದ್ದ ಸಂದರ್ಭದಲ್ಲಿ ರಾಮನಗರದಲ್ಲಿ ಡಿಸಿ ಕಚೇರಿಯಲ್ಲಿ ಸಭೆ ಮಾಡಿದ್ರು. ಜನಸ್ಪಂದನಾ ಹೆಸರಿನಲ್ಲಿ ಹಳ್ಳಿ ಹಳ್ಳಿ ಸುತ್ತಿಸಿದ್ದರು. ಉಸ್ತುವಾರಿ ಸಚಿವರು ಮಾಡಬೇಕಾದ ಕೆಲಸವನ್ನು ಡಿಕೆ ಸುರೇಶ್ ಮಾಡಿದ್ದರು. ಅದಕ್ಕೆ ಅನುಮತಿ ಕೊಟ್ಟವರು ಯಾರು..? ಯಾವ ನಿಯಮವಿತ್ತು..? ಇವತ್ತು ಒಬ್ಬ ಕೇಂದ್ರ ಮಂತ್ರಿ ಜನರ ಬಳಿ ಅಹವಾಲು ಸ್ವೀಕರಿಸಲು ಬಂದಿದ್ದಾರೆ. ಆದರೆ ಹೊಸ ನಿಯಮಾವಳಿಯ ಮೂಲಕ ಇದನ್ನ ತಡೆಯಲು ಮುಂದಾಗಿದ್ದಾರೆ. ಇದು ನನ್ನ ಮನೆಯ ಕೆಲಸವಲ್ಲ. ಇದರಿಂದ ಅವರಿಗೆ ಏನು ದೊರಕುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…
ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…
ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…