ಮಂಡ್ಯ : ಕೇಂದ್ರ ಸಚಿವರಾದ ಬಳಿಕ ಎಚ್ ಡಿ ಕುಮಾರಸ್ವಾಮಿ ಅವರು ಮೊದಲ ಬಾರಿ ಮಂಡ್ಯ ಜಿಲ್ಲೆಯಲ್ಲಿ ಜನತಾ ದರ್ಶನ ನಡೆಸಿದರು. ಆದರೆ ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಅಧಿಕಾರಿಗಳು ಗೈರಾಗಿದ್ದರು. ಇದರಿಂದ ಮುಜುಗರಕ್ಕೆ ಒಳಗಾದ ಎಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ವಿರುದ್ಧ ಕಿಡಿಕಾರಿದ ಎಚ್ಡಿಕೆ, ಜಿಲ್ಲಾಧಿಕಾರಿಗಳಿಗೆ ಕಾರ್ಯಕ್ರಮಕ್ಕೆ ಹಾಜರಾಗಲು ನಾನು ಮನವಿ ಮಾಡಿದ್ದೆ. ಜನತಾ ದರ್ಶನ ಕಾರ್ಯಕ್ರಮಕ್ಕೆ ಹಾಜರಾಗದಂತೆ ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ಸುತ್ತೋಲೆ ಹೊರಡಿಸಿದೆ. ಕ್ಯಾಬಿನೆಟ್ ನಲ್ಲಿ ಸಿಎಂ, ಸಚಿವರಿಗಷ್ಟೇ ಮಾತ್ರ ಜನತಾ ದರ್ಶನ ಮಾಡುವ ಅಧಿಕಾರವಿದೆ ಎಂದು ಸುತ್ತೋಲೆ ಹೊರಡಿಸಿದೆ. ಅಧಿಕಾರಿಗಳಿಗೂ ಕೂಡ ಈಗಾಗಲೇ ಈ ಕುರಿತು ಸೂಚನೆ ನೀಡಲಾಗಿದೆ. ಇದು ಸರ್ಕಾರದ ಸಣ್ಣತನ ತೋರಿಸುತ್ತದೆ ಎಂದು ಸಿಟ್ಟು ಹೊರಹಾಕಿದರು.
ಅಲ್ಲದೆ ಡಿ.ಕೆ ಸುರೇಶ್ ಸಂಸದರಾಗಿದ್ದ ಸಂದರ್ಭದಲ್ಲಿ ರಾಮನಗರದಲ್ಲಿ ಡಿಸಿ ಕಚೇರಿಯಲ್ಲಿ ಸಭೆ ಮಾಡಿದ್ರು. ಜನಸ್ಪಂದನಾ ಹೆಸರಿನಲ್ಲಿ ಹಳ್ಳಿ ಹಳ್ಳಿ ಸುತ್ತಿಸಿದ್ದರು. ಉಸ್ತುವಾರಿ ಸಚಿವರು ಮಾಡಬೇಕಾದ ಕೆಲಸವನ್ನು ಡಿಕೆ ಸುರೇಶ್ ಮಾಡಿದ್ದರು. ಅದಕ್ಕೆ ಅನುಮತಿ ಕೊಟ್ಟವರು ಯಾರು..? ಯಾವ ನಿಯಮವಿತ್ತು..? ಇವತ್ತು ಒಬ್ಬ ಕೇಂದ್ರ ಮಂತ್ರಿ ಜನರ ಬಳಿ ಅಹವಾಲು ಸ್ವೀಕರಿಸಲು ಬಂದಿದ್ದಾರೆ. ಆದರೆ ಹೊಸ ನಿಯಮಾವಳಿಯ ಮೂಲಕ ಇದನ್ನ ತಡೆಯಲು ಮುಂದಾಗಿದ್ದಾರೆ. ಇದು ನನ್ನ ಮನೆಯ ಕೆಲಸವಲ್ಲ. ಇದರಿಂದ ಅವರಿಗೆ ಏನು ದೊರಕುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…