ಮಂಡ್ಯ

ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಜಿಲ್ಲೆ ಪೂವನಹಳ್ಳಿ ಆಯ್ಕೆ

ಬುಡಕಟ್ಟು ಜನರು ವಾಸವಿರುವ ಹಳ್ಳಿಯ ಸಮಗ್ರ ಅಭಿವೃದ್ಧಿ

18 ಇಲಾಖೆಗಳಿಂದ 25ಕ್ಕೂ ಹೆಚ್ಚು ಜನೋಪಯೋಗಿ ಕಾರ್ಯಕ್ರಮ ಅನುಷ್ಠಾನ

ಶಿಕ್ಷಣ, ಆರೋಗ್ಯ, ವಸತಿ, ನೈರ್ಮಲ್ಯ, ಮೂಲಸೌಕರ್ಯ, ಶುದ್ಧ ಕುಡಿಯುವ ನೀರು, ಕೌಶಲ್ಯಾಭಿವೃದ್ಧಿ ಸೇರಿ ಇನ್ನೂ ಅನೇಕ ಕಾರ್ಯಕ್ರಮ

ಹೊಸದಿಲ್ಲಿ: ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆದಿವಾಸಿ ಜನಜಾತಿ ನ್ಯಾಯ ಅಭಿಯಾನ (ಪಿಎಂ ಜನ್ ಮನ್‌ ಯೋಜನೆ) ಕಾರ್ಯಕ್ರಮಕ್ಕೆ ಮಂಡ್ಯ ಲೋಕಸಭೆ ಕ್ಷೇತ್ರದ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ.

ಈ ವಿಷಯವನ್ನು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಹಾಗೂ ಈ ಯೋಜನೆಯನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಸಮರೋಪದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಗಂಜಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಪೂವನಹಳ್ಳಿ ಗ್ರಾಮವನ್ನು ಪಿಎಂ ಜನ್ ಮನ್ ಯೋಜನೆಗೆ ಪರಿಗಣಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಳೆದ ವರ್ಷ ಈ ಯೋಜನೆಯನ್ನು ಘೋಷಿಸಿ ಬುಡಕಟ್ಟು ಸಮುದಾಯದ ಜನರು ವಾಸವಿರುವ ಗ್ರಾಮಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಘೋಷಣೆ ಮಾಡಿದ್ದರು.

79,000 ಕೋಟಿಗಳ ಈ ಬೃಹತ್ ಯೋಜನೆಯ ಮೂಲಕ ದೇಶದ 63,000 ಹಳ್ಳಿಗಳನ್ನು ಆಮೂಲಾಗ್ರವಾಗಿ ಅಭಿವೃದ್ದಿ ಮಾಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಶಿಕ್ಷಣ, ಆರೋಗ್ಯ, ವಸತಿ, ನೈರ್ಮಲ್ಯ, ಮೂಲಸೌಕರ್ಯ, ಶುದ್ಧ ಕುಡಿಯುವ ನೀರು, ಕೌಶಲ್ಯಾಭಿವೃದ್ಧಿ ಸೇರಿದಂತೆ 25ಕ್ಕೂ ಹೆಚ್ಚು ಜನೋಪಯೋಗಿ ಕಾರ್ಯಕ್ರಮಗಳನ್ನು 18 ಇಲಾಖೆಗಳು ಅನುಷ್ಠಾನಕ್ಕೆ ತರುತ್ತವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಪಿಆರ್‌ಡಿಐ ಮೂಲಕ ಮನೆ ನಿರ್ಮಾಣ, ಶುದ್ಧ ಕುಡಿಯುವ ನೀರು, ನೈರ್ಮಲ್ಯ, ಆರೋಗ್ಯ, ಪೌಷ್ಠಿಕಾಂಶ ಹೆಚ್ಚಿಸುವ ಜತೆಗೆ ರಸ್ತೆ, ದೂರ ಸಂಪರ್ಕ ಸುಸ್ಥಿರ ಜೀವನಾವಕಾಶಗಳನ್ನು ಕಲ್ಪಿಸುವ ಉದ್ದೇಶದೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಆದಿವಾಸಿಗಳ ಗುಡಿ ಕೈಗಾರಿಕೆಗಳ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಯೋಜನೆಗೆ ಯಾವುದೇ ಗ್ರಾಮವನ್ನು ಯಾಕೆ ಮಾಡಬೇಕಾದರೆ ಹಲವಾರು ಮಾನದಂಡಗಳನ್ನು ಬುಡಕಟ್ಟು ಸಚಿವಾಲಯ ನಿಗದಿ ಮಾಡಿದೆ. ಆ ಮಾನದಂಡಕ್ಕೆ ಅನುಗುಣವಾಗಿ ಗ್ರಾಮಗಳನ್ನು ಆಯ್ಕೆ ಮಾಡುವ ಕೆಲಸ ಮಾಡಲಾಗುತ್ತಿದೆ. ಪ್ರಥಮ ಪ್ರಯತ್ನವಾಗಿ ಮಾನದಂಡಗಳ ಅನುಗುಣವಾಗಿ ಪೂವನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಇದು ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ ಆಗಿದ್ದು, ಅತ್ಯಂತ ಬದ್ಧತೆಯಿಂದ ಅನುಷ್ಠಾನ ಮಾಡಲಾಗುತ್ತಿದೆ. ಮೊದಲಿಗೆ ಪೂವನಹಳ್ಳಿ ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹಳ್ಳಿಗಳನ್ನು ಈ ಯೋಜನೆ ವ್ಯಾಪ್ತಿಗೆ ತರಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago