ಮಂಡ್ಯ

ಮಂಡ್ಯ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ ಸ್ವಚ್ಚಗೊಳಿಸುವ ಅಭಿಯಾನ

ಮಂಡ್ಯ:  ಮೈಸೂರಿನ ಕೆ.ಸಾಲುಂಡಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಕಲುಷಿತ ನೀರು ಸೇರಿ ಓರ್ವ ಸಾವು, ೯೦  ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ  ಸಿದ್ದರಾಮಯ್ಯ ಬುಧವಾರ(ಮೇ.22) ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ ಸಿಇಒಗಳ ಸಭೆ ನಡೆಸಿ ಅಧಿಕಾರಿಗಳಿ ವಾರ್ನಿಂಗ್‌  ಮಾಡಿ, ಕುಡಿಯುವ ನೀರಿನ ಸಮಸ್ಯೆಗೆಳಿಗೆ ಸಿಇಒಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

ಇದರ ಬೆನ್ನಲ್ಲೇ ಎಚ್ಚೆತ್ತಾ ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ನೀರಿನ ಟ್ಯಾಂಕರ್‌ಗಳನ್ನು ಸ್ಚಚ್ಚಗೊಳಿಸುವ ಅಭಿಯಾನವನ್ನು ಹಮ್ಮಿಕೊಂಡಿದೆ.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪಂಚಾಯತ್‌ ಸಿಇಒ ಶೇಖ್‌ ತನ್ವೀರ್‌ ಆಸಿಫ್‌ ,  ಕುಡಿಯುವ ನೀರು ಸಂಗ್ರಾಹಿಸುವ ಟ್ಯಾಂಕ್ ಗಳು,  ಟ್ಯಂಕ್ ಗಳ ಸುತ್ತ ಇರುವ ಪ್ರದೇಶ, ಒಳಚರಂಡಿ ಪ್ರದೇಶಗಳನ್ನು ಸ್ವಚ್ಛ ಗೊಳಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ನೀರು ಸಂಗ್ರಹಿಸುವ ಟ್ಯಾಂಕ್ ಗಳನ್ನು ಸ್ವಚ್ಚಗೊಳಿಸಬೇಕು. ಕುಡಿಯುವ ನೀರಿನ ಸ್ಯಾಂಪಲ್ ಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿ ಕುಡಿಯಲು ಯೋಗ್ಯವಾದ ನೀರನ್ನು ಸಾರ್ವಜನಿಕರಿಗೆ ಒದಗಿಸಬೇಕು ಎಂದು  ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

3 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

3 hours ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

3 hours ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

3 hours ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

3 hours ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

3 hours ago