ಮಂಡ್ಯ

ಮಂಡ್ಯ :ರೆಕಾರ್ಡ್‌ ರೂಮ್‌ ಡಿಜಿಟಲೀಕರಣಕ್ಕೆ ಚಾಲನೆ

ಮಂಡ್ಯ:  ಇಲ್ಲಿನ ತಾಲ್ಲೂಕು ಕಚೇರಿಯ ರೆಕಾರ್ಡ್ ರೂಮ್, ಸರ್ವೆ ದಾಖಲೆಗಳ ಡಿಜಿಟಲೀಕರಣ ಹಾಗೂ ಭೂ ಸುರಕ್ಷಾ ಯೋಜನೆಗೆ  ಶಾಸಕ ಪಿ ರವಿಕುಮಾರ್  ಗುರುವಾರ ಅಧಿಕೃತವಾಗಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು,  ರೈತರು ತಮ್ಮ ಭೂಮಿ ದಾಖಲೆಗಳನ್ನು ಕಳೆದುಕೊಂಡು ಮತ್ತೆ ಪಡೆಯಲು ತಹಶೀಲ್ದಾರ್ ಕಚೇರಿಗೆ ತಿಂಗಳುಗಟ್ಟಲೆ ತಿರುಗಿದರು ದಾಖಲಾತಿಗಳು ದೊರೆಯುತ್ತಿರಲಿಲ್ಲ, 40-50 ವರ್ಷದ ಹಳೆಯ ಭೂ ದಾಖಲೆಗಳ ಪತ್ರದ ಕಾಗದ ಹಳೆಯದಾಗಿ ಹರಿದುಹೋಗಿ ತನ್ನ ಅಸ್ತಿತ್ವವ ಕಳೆದುಕೊಳ್ಳುತ್ತಿವೆ, ಇದನ್ನು ಮನಗಂಡು ಸರ್ಕಾರ  ದಾಖಲೆಗಳ ಡಿಜಿಟಲೀಕರಣಕ್ಕೆ ಮುಂದಾಗಿದೆ. ಇದರಿಂದ ರೈತರು ಹಾಗೂ ಸಾರ್ವಜನಿಕರಿಗೆ ಅವರಿಗೆ ಬೇಕಾದ ಸಮಯದಲ್ಲಿ ದಾಖಲೆಗಳ ಪ್ರಿಂಟ್ ಗಳನ್ನು ನೀಡಬಹುದಾಗಿದೆ ಎಂದು ತಿಳಿಸಿದರು.

ರೈತರ ಸಮಸ್ಯೆ ಪರಿಹರಿಸಲು ಕಂದಾಯ ಇಲಾಖೆಯಲ್ಲಿ ಡಿಜಿಟಲೀಕರಣ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ, ಇಲ್ಲಿಯ ತನಕ ಕಂದಾಯ ಇಲಾಖೆಯಲ್ಲಿ ನೋಂದಣಿ ಆಗಿರುವ ಎಲ್ಲಾ ಭೂಮಿ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಕ್ಲೌಡ್ ನಲ್ಲಿ ಸಂಸ್ಕರಿಸಲಾಗುವ ಯೋಜನೆ ಇದಾಗಿದೆ ಎಂದರು.

ಭೂಸುರಕ್ಷಾ ಎಂಬ ಅಪ್ಲಿಕೇಶನ್ ನಲ್ಲಿ ನಿಮ್ಮ ಭೂ ದಾಖಲೆಯ ಸಂಖ್ಯೆಯನ್ನು ನೀಡಿದರೆ ಸಾಕು ಒಂದು ನಿಮಿಷದಲ್ಲಿ ನಿಮ್ಮ ಭೂ ದಾಖಲಾತಿ ಪತ್ರಗಳನ್ನು ನೀಡುವ ಕ್ರಾಂತಿಕಾರಿ ಯೋಜನೆಯನ್ನು ಸರ್ಕಾರ ಮಾಡಿದೆ. ಇಂದು ಡಿಜಿಟಲೀಕರಣ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿರುವುದು ಸಂತಸದ ವಿಷಯ ಎಂದು ಹರ್ಷ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಡಾ ಕುಮಾರ ಮಾತನಾಡಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಈ ಯೋಜನೆ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ‌, ಶೀತಲೀಕರಣಗೊಂಡ ಭೂಮಿ ದಾಖಲಾತಿಗಳು ಕಳೆದು ಹೋದ ಭೂಮಿ ದಾಖಲೆಗಳು ರೈತರಿಗೆ ಅನುಕೂಲವಾಗುವಂತೆ ಯಾವುದೇ ದಾಖಲಾತಿಗಳನ್ನು ಯಾರು ತಿದ್ದುಲು ಕದಿಯಲು ಅವಕಾಶ ನೀಡಿದೆ ಸ್ಕ್ಯಾನ್ ಮಾಡುವ ಮೂಲಕ ಶೇಖರಿಸಿ ಇಡುವ ಯೋಜನೆ ಇದಾಗಿದೆ ಎಂದರು‌.

ಜಿಲ್ಲೆಯ ಪಾಂಡವಪುರ ತಾಲ್ಲೂಕಿನಲ್ಲಿ ದಾಖಲೆಗಳ ಡಿಜಟಲೀಕರಣ ಕೆಲಸ ಈಗಾಗಲೇ ಪ್ರಾರಂಭಿಸಿದ್ದು, 56 ಲಕ್ಷಕ್ಕೂ ಹೆಚ್ಚು ದಾಖಲಾತಿ ಪತ್ರಗಳನ್ನು ಸ್ಕ್ಯಾನ್ ಮಾಡಲಾಗಿದೆ. ಮಂಡ್ಯ ತಾಲೂಕಿನಲ್ಲೂ ಇಂದು ಚಾಲನೆ ನೀಡಿದ್ದೇವೆ. ಇಲ್ಲೂ ಸಹ 90 ಸಾವಿರ ಕಡತಗಳಿವೆ. 45 ಲಕ್ಷಕ್ಕೂ ಹೆಚ್ಚು ದಾಖಲಾತಿ ಪತ್ರಗಳಿವೆ ಮುಂದಿನ ಒಂದು ವರ್ಷದೊಳಗೆ ಎಲ್ಲವನ್ನೂ ಸ್ಕ್ಯಾನ್ ಮಾಡಿ ಡಿಜಿಟಲೀಕಾರಿಸುತ್ತೇವೆ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಶಿವಮೂರ್ತಿ, ಮಂಡ್ಯ ತಹಶೀಲ್ದಾರ್ ಡಾ ಶಿವಕುಮಾರ ಬಿರಾದರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago