ಮಂಡ್ಯ: ಟ್ರಾಕ್ಟರ್ನಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಗರದ ಬೆಂಗಳೂರು-ಮೈಸೂರು ಹೆದ್ದಾರಿಯ ಕೆಇಬಿ ಕಚೇರಿ ಮುಂಭಾಗ ಮಂಗಳವಾರ ನಡೆದಿದೆ.
ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಕುಮಾರ (48) ಎಂಬುವರೇ ಮೃತಪಟ್ಟ ದುರ್ದೈವಿ.
ರಾಗಿಮುದ್ದನಹಳ್ಳಿ ಗ್ರಾಮದಿಂದ ಮಂಡ್ಯಕ್ಕೆ ಬರುತ್ತಿದ್ದ ಟ್ರಾಕ್ಟರ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ಮೇಲೆ ಹತ್ತಿದೆ. ಇದರಿಂದ ಗಾಬರಿಗೊಂಡ ಕುಮಾರ ಟ್ರಾಕ್ಟರ್ನಿಂದ ಜಿಗಿದು ಪಾರಾಗಲು ಯತ್ನಿಸಿದ್ದಾರೆ. ಈ ವೇಳೆ ಟ್ರಾಕ್ಟರ್ನ ಚಕ್ರಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…