ಮಂಡ್ಯ

ಮಂಡ್ಯ | ಇ-ಪೌತಿ ಖಾತೆ ಆಂದೋಲನ ಜಿಲ್ಲೆಯಲ್ಲೂ ಆರಂಭ

ಮಂಡ್ಯ : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಇ-ಪೌತಿ ಖಾತಾ ಆಂದೋಲನ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದು, ಸಾರ್ವಜನಿಕರು ಇನ್ನೂ ಮುಂದೆ ತಾಲ್ಲೂಕು ಕಚೇರಿಗೆ ಅಲೆದಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಈಗಾಗಲೇ ಗದಗ ಜಿಲ್ಲೆಯಲ್ಲಿ‌ ಪೈಲೆಟ್ ಪ್ರಾಜೆಕ್ಟ್ ಆಗಿ ಕಳೆದ ಎರಡು ತಿಂಗಳಿಂದ ಈ ಪೌತಿ ಖಾತೆ ಕೆಲಸ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಗ್ರಾಮ‌ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರು, ಉಪ ತಹಶೀಲ್ದಾರ್ ಹಾಗೂ ತಹಶೀಲ್ದಾರ್ ಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಕೃಷಿ ಜಮೀನಿನ ಸ್ವಂತ ಇಡುವಳಿದಾರರು/ ಖಾತೆದಾರರು ಮೃತಗೊಂಡ ನಂತರ ಹಲವಾರು ವರ್ಷಗಳಿಂದ ವರಸುದಾರರು ತಮ್ಮ ಹೆಸರಿಗೆ ಖಾತೆಯನ್ನು ವರ್ಗಾವಣೆ ಮಾಡಿಕೊಂಡಿರುವುದಿಲ್ಲ. ಆದರಿಂದ ಪಹಣಿಗಳಲ್ಲಿ ಮೃತ ಖಾತೆದಾರರ ಹೆಸರು ಮುಂದುವರೆಯುತ್ತಿದೆ. ಇದನ್ನು ಸರಿಪಡಿಸಲು ಕಂದಾಯ ಇಲಾಖೆ ಸ್ವಯಂ ಪ್ರೇರಿತವಾಗಿ ಇ- ಖಾತಾ ಆಂದೋಲವನ್ನು ಪ್ರಾರಂಭಿಸಿದೆ ಎಂದರು.

ಕಂದಾಯ ಇಲಾಖೆಯಿಂದ ಇತ್ತೀಚೆಗೆ ಪಹಣಿಗಳನ್ನು ಆಧಾರ ಜೋಡಣೆ ಮಾಡುವ ಸಂದರ್ಭದಲ್ಲಿ ಮೃತ ಖಾತೆದಾರರನ್ನು ಪತ್ತೆ ಹಚ್ಚಿ ವಿವರವನ್ನು ನಮೂದು‌ ಮಾಡಲಾಗಿದೆ. ತಂತ್ರಾಂಶವನ್ನು ಬಳಸಿಕೊಂಡು ಇ-ಪೌತಿ ಖಾತೆ ಮಾಡಿಕೊಡಲಾಗುವುದು ಎಂದರು.

ಗ್ರಾಮ ಆಡಳಿತಾಧಿಕಾರಿಗಳು ನಿಖರ ಮಾಹಿತಿಗಳೊಂದಿಗೆ ತಂತ್ರಾಂಶದಲ್ಲಿ ವರಸುದಾರರು ಹಾಗೂ ಮೃತ ಖಾತೆದಾರರ ವಿವರವನ್ನು ಭರ್ತಿ ಮಾಡಬೇಕಿದ್ದು, ಸಾರ್ವಜನಿಕರು ಮೃತ ಖಾತೆದಾರರ ಮರಣ ಪ್ರಮಾಣ ಪತ್ರ, ವಂಶವೃಕ್ಷ, ಆಧಾರ್ ವಿವರವನ್ನು ಗ್ರಾಮ ಆಡಳಿತಾಧಿಕಾರಿಗಳಿಗೆ ನೀಡಿ‌ ಸಹಕರಿಸಬೇಕು‌ ಎಂದರು.

ಗ್ರಾಮ ಆಡಳಿತಾಧಿಕಾರಿಗಳ ಕೆಲಸ ಪ್ರಮುಖವಾಗಿದ್ದು, ಈಗಾಗಲೇ ಜಿಲ್ಲೆಯ 185 ಗ್ರಾಮ ಆಡಳಿತಾಧಿಕಾರಿಗಳಿಗೆ ಇ.ಆಫೀಸ್ ನಲ್ಲಿ ಕಾರ್ಯನಿರ್ವಹಿಸಲು ಲ್ಯಾಪ ಟಾಪ್ ನೀಡಲಾಗಿದ್ದು, ಇ- ಪೌತಿ ಖಾತಾ ಆಂದೋಲನಕ್ಕೆ ಬಳಸಿಕೊಳ್ಳಿ . ಇ-ಪೌತಿ ಖಾತಾ ಆಂದೋಲನದ ಬಗ್ಗೆ ತಾತ್ಸಾರ ಹಾಗೂ ನಿರ್ಲಕ್ಷ್ಯ ಮನೋಭಾವನೆ ಕಂಡುಬಂದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಇ- ಪೌತಿ ಖಾತೆ ವೆಬ್ ಅಪ್ಲಿಕೇಷನ್ ನಲ್ಲಿ ಭರ್ತಿ ಮಾಡಬೇಕಿರುವ ವಿವರಗಳ‌ ಕುರಿತು ಆನ್ ಲೈನ್ ಮುಖಾಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಗ್ರಾಮ ಆಡಳಿತಾಧಿಕಾರಿಗಳಿಗೆ ತರಬೇತಿ ನೀಡಲಾಯಿತು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಡಿ.ಡಿಎಲ್. ಆರ್ ವಿರೂಪಾಕ್ಷ, ತಹಶೀಲ್ದಾರ್ ಶಿವಕುಮಾರ್ ಬಿರಾದರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಜೆಫ್ರಿ ಜತೆ ಸಂಪರ್ಕ : ಬ್ರಿಟನ್‌ ಮಾಜಿ ರಾಜಕುಮಾರ ಆ್ಯಂಡ್ರೂ ಬಂಧನ

ಲಂಡನ್ : ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್‌ಬ್ಯಾಟನ್-ವಿಂಡ್ಸರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಲೈಂಗಿಕ ಅಪರಾಧಿ…

39 mins ago

ಕೂಡುಮಂಗಳೂರು | ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಅಪಘಾತ : ಸವಾರ ಸಾವು, ಪತ್ನಿ ಗಂಭೀರ

ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ,…

54 mins ago

ಸಫಾರಿ ಪುನರಾರಂಭ : ಮೈಸೂರು ಅರಣ್ಯಭವನಕ್ಕೆ ರೈತ ಮುಖಂಡರ ಮುತ್ತಿಗೆ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ…

1 hour ago

32 ಕ್ಷೇತ್ರಗಳ ಟಾರ್ಗೆಟ್‌: ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು 2ನೇ ಹಂತದ…

3 hours ago

1.60 ಕೋಟಿ ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಬಡ್ತಿ: ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…

3 hours ago

ಫೆಬ್ರವರಿ.25ರಂದು ಅಜ್ಜಿಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ: ಬಡಗಲಪುರ ನಾಗೇಂದ್ರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…

3 hours ago