Mandya | E-Pauti Khata Movement Begins in the District
ಮಂಡ್ಯ : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಇ-ಪೌತಿ ಖಾತಾ ಆಂದೋಲನ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದು, ಸಾರ್ವಜನಿಕರು ಇನ್ನೂ ಮುಂದೆ ತಾಲ್ಲೂಕು ಕಚೇರಿಗೆ ಅಲೆದಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಈಗಾಗಲೇ ಗದಗ ಜಿಲ್ಲೆಯಲ್ಲಿ ಪೈಲೆಟ್ ಪ್ರಾಜೆಕ್ಟ್ ಆಗಿ ಕಳೆದ ಎರಡು ತಿಂಗಳಿಂದ ಈ ಪೌತಿ ಖಾತೆ ಕೆಲಸ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರು, ಉಪ ತಹಶೀಲ್ದಾರ್ ಹಾಗೂ ತಹಶೀಲ್ದಾರ್ ಗಳು ಕಾರ್ಯಪ್ರವೃತ್ತರಾಗಬೇಕು ಎಂದರು.
ಕೃಷಿ ಜಮೀನಿನ ಸ್ವಂತ ಇಡುವಳಿದಾರರು/ ಖಾತೆದಾರರು ಮೃತಗೊಂಡ ನಂತರ ಹಲವಾರು ವರ್ಷಗಳಿಂದ ವರಸುದಾರರು ತಮ್ಮ ಹೆಸರಿಗೆ ಖಾತೆಯನ್ನು ವರ್ಗಾವಣೆ ಮಾಡಿಕೊಂಡಿರುವುದಿಲ್ಲ. ಆದರಿಂದ ಪಹಣಿಗಳಲ್ಲಿ ಮೃತ ಖಾತೆದಾರರ ಹೆಸರು ಮುಂದುವರೆಯುತ್ತಿದೆ. ಇದನ್ನು ಸರಿಪಡಿಸಲು ಕಂದಾಯ ಇಲಾಖೆ ಸ್ವಯಂ ಪ್ರೇರಿತವಾಗಿ ಇ- ಖಾತಾ ಆಂದೋಲವನ್ನು ಪ್ರಾರಂಭಿಸಿದೆ ಎಂದರು.
ಕಂದಾಯ ಇಲಾಖೆಯಿಂದ ಇತ್ತೀಚೆಗೆ ಪಹಣಿಗಳನ್ನು ಆಧಾರ ಜೋಡಣೆ ಮಾಡುವ ಸಂದರ್ಭದಲ್ಲಿ ಮೃತ ಖಾತೆದಾರರನ್ನು ಪತ್ತೆ ಹಚ್ಚಿ ವಿವರವನ್ನು ನಮೂದು ಮಾಡಲಾಗಿದೆ. ತಂತ್ರಾಂಶವನ್ನು ಬಳಸಿಕೊಂಡು ಇ-ಪೌತಿ ಖಾತೆ ಮಾಡಿಕೊಡಲಾಗುವುದು ಎಂದರು.
ಗ್ರಾಮ ಆಡಳಿತಾಧಿಕಾರಿಗಳು ನಿಖರ ಮಾಹಿತಿಗಳೊಂದಿಗೆ ತಂತ್ರಾಂಶದಲ್ಲಿ ವರಸುದಾರರು ಹಾಗೂ ಮೃತ ಖಾತೆದಾರರ ವಿವರವನ್ನು ಭರ್ತಿ ಮಾಡಬೇಕಿದ್ದು, ಸಾರ್ವಜನಿಕರು ಮೃತ ಖಾತೆದಾರರ ಮರಣ ಪ್ರಮಾಣ ಪತ್ರ, ವಂಶವೃಕ್ಷ, ಆಧಾರ್ ವಿವರವನ್ನು ಗ್ರಾಮ ಆಡಳಿತಾಧಿಕಾರಿಗಳಿಗೆ ನೀಡಿ ಸಹಕರಿಸಬೇಕು ಎಂದರು.
ಗ್ರಾಮ ಆಡಳಿತಾಧಿಕಾರಿಗಳ ಕೆಲಸ ಪ್ರಮುಖವಾಗಿದ್ದು, ಈಗಾಗಲೇ ಜಿಲ್ಲೆಯ 185 ಗ್ರಾಮ ಆಡಳಿತಾಧಿಕಾರಿಗಳಿಗೆ ಇ.ಆಫೀಸ್ ನಲ್ಲಿ ಕಾರ್ಯನಿರ್ವಹಿಸಲು ಲ್ಯಾಪ ಟಾಪ್ ನೀಡಲಾಗಿದ್ದು, ಇ- ಪೌತಿ ಖಾತಾ ಆಂದೋಲನಕ್ಕೆ ಬಳಸಿಕೊಳ್ಳಿ . ಇ-ಪೌತಿ ಖಾತಾ ಆಂದೋಲನದ ಬಗ್ಗೆ ತಾತ್ಸಾರ ಹಾಗೂ ನಿರ್ಲಕ್ಷ್ಯ ಮನೋಭಾವನೆ ಕಂಡುಬಂದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಇ- ಪೌತಿ ಖಾತೆ ವೆಬ್ ಅಪ್ಲಿಕೇಷನ್ ನಲ್ಲಿ ಭರ್ತಿ ಮಾಡಬೇಕಿರುವ ವಿವರಗಳ ಕುರಿತು ಆನ್ ಲೈನ್ ಮುಖಾಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಗ್ರಾಮ ಆಡಳಿತಾಧಿಕಾರಿಗಳಿಗೆ ತರಬೇತಿ ನೀಡಲಾಯಿತು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಡಿ.ಡಿಎಲ್. ಆರ್ ವಿರೂಪಾಕ್ಷ, ತಹಶೀಲ್ದಾರ್ ಶಿವಕುಮಾರ್ ಬಿರಾದರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…